Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ರಣ ಕಲೆ ಆಧಾರಿತ ಕಲಾಕೃತಿಗಳ ರಚನೆ...

ಮುದ್ರಣ ಕಲೆ ಆಧಾರಿತ ಕಲಾಕೃತಿಗಳ ರಚನೆ ಇಂದು ವಿರಳ

ಕಲಾಕೃತಿಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ21 Jun 2016 11:33 PM IST
share

ಚಿಕ್ಕಮಗಳೂರು, ಜೂ.21: ಮುದ್ರಣ ಕಲೆ ಆಧಾರಿತ ಕಲಾಕೃತಿಗಳ ರಚನೆ ಇತ್ತೀಚಿನ ದಿನಗಳಲ್ಲಿ ವಿರಳವಾಗಿದೆ. ಇಂತಹ ಅಪರೂಪದ ಕಲಾಕೃತಿಗಳ ರಚನೆಯಲ್ಲಿ ತೊಡಗಿರುವ ಯುವ ಕಲಾವಿದ ಕೆ.ಸಿ.ಕಿರಣ್ ಅವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಕಲಾವಿದೆ ಹಾಗೂ ನಾಟಕ ಅಕಾಡಮಿ ಸದಸ್ಯೆ ಕಲ್ಪನಾ ನಾಗಾನಾಥ್ ತಿಳಿಸಿದರು.

ನಗರದ ಶಾಂತಿನಿಕೇತನ ಆರ್ಟ್ ಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆಯೋಜಿಸಲಾಗಿರುವ 6 ದಿನಗಳ ಕಾಲ ಕಲಾವಿದ ಕಿರಣ್ ರವರ ಕೈಚಳಕದಲ್ಲಿ ಒಡಮೂಡಿದ ಕಲಾಕೃತಿಗಳ ಪ್ರದರ್ಶನ ವಾಸ್ತವ್ ಅನ್ನು ಉದ್ಘಾಟಿಸಿ ಮಾತನಾಡಿದರು.

ಆಧುನಿಕ ದಿನಮಾನಗಳಲ್ಲಿ ಮುದ್ರಣ ಮಾಧ್ಯಮ ತನ್ನನ್ನು ಕ್ರಾಂತಿಕಾರಕ ಬದಲಾವಣೆಗಳಿಗೆ ತೆರೆದುಕೊಂಡಿದ್ದರೂ ಪುರಾತನ ತಂತಜ್ಞ್ಞಾನವನ್ನು ರೂಢಿಸಿಕೊಂಡು ಆ ಮೂಲಕ ತನ್ನ ಕಲ್ಪನೆಗಳನ್ನು ಒಡಮೂಡಿಸಿ ನೋಡುಗನನ್ನು ಚಿಂತನೆಗೆ ಹಚ್ಚುವ ಕಲಾವಿದನ ಪ್ರಯತ್ನ ಅನನ್ಯ ಎಂದರು. ಶಾಂತಿನಿಕೇತನ ಪ್ರಾಚಾರ್ಯ ವಿಶ್ವಕರ್ಮ ಆಚಾರ್ಯ ಮಾತನಾಡಿ, ಚಿಕ್ಕಮಗಳೂರಿನ ಇತಿಹಾಸದಲ್ಲಿಯೇ ಮುದ್ರಣ ಕಲೆ ಆಧಾರಿತ ಕಲಾಕೃತಿಗಳ ಪ್ರದರ್ಶನ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದು,್ದ ಈ ಪ್ರದರ್ಶನದಿಂದ ಕುಂಚಕಲೆಯ ವಿದ್ಯಾರ್ಥಿಗಳನ್ನು ಇನ್ನಷ್ಟು ತಮ್ಮನ್ನು ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದರು.

ಕಲಾವಿದರ ಸೃಜನಶೀಲತೆಗೆ ಆಸರೆಯಾಗಿರುವ ರುದ್ರ ರಮಣೀಯ ಪ್ರಕೃತಿ ತಾಣವಾಗಿರುವುದು ಚಿಕ್ಕಮಗಳೂರು. ಆದರೆ ಇಲ್ಲಿ ಕಲಾವಿದರ ಕೊರತೆ ಇರುವಿಕೆಯೇ ಹೆಚ್ಚು. ಅದರಲ್ಲೂ ಚಿತ್ರ, ಶಿಲ್ಪ, ಮುದ್ರಣ ಕಲೆ ಹಾಗೂ ಇತ್ತೀಚಿನ ದಿನಗಳಲ್ಲಿ ಪ್ರಚಲಿತವಿರುವ ಡಿಜಿಟಲ್ ಫೋಟೊಗ್ರಫಿಯಂತಹ ಕಲಾಕೃತಿಗಳು ಅಪರೂಪ ಎನಿಸಿದೆ. ಮೂಲತಃ ಕಡೂರಿನ ಜಿ.ತಿಮ್ಮಾಪುರದ ಚಂದ್ರಶೇಖರ್ ಹಾಗೂ ಗಿರಿಜಾ ದಂಪತಿಯ ಮಗನಾದ ಯುವ ಕಲಾವಿದ ಕಿರಣ್.ಟಿ.ಸಿ ನಗರದ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಪದವಿಯನ್ನು ನಂತರ ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಮುದ್ರಣ ಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಕಲಾಕೃತಿಗಳ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

   ಅತಿ ವಿರಳ ಎನಿಸಿರುವ ಮುದ್ರಣ ಕಲೆಯ ವಿವಿಧ ಮಾಧ್ಯಮಗಳಾದ ಲಿನೋಕಟ್, ವುಡ್‌ಕಟ್, ಲಿಥೋಗ್ರಫಿ, ಎಚ್ಚಿಂಗ್, ಮೆಜೋಟಿಂಟ್, ಡ್ರೈ ಪಾಯಿಂಟ್, ಸೆರಿಗ್ರಫಿ, ಇಂಟಾಗ್ಲೋ, ಡಿಜಿಟಲ್ ಫೋಟೊಗ್ರಫಿ ವಿಧಾನದಲ್ಲಿ ಪೋಟ್ರೇಟ್, ಕೊಲಾಜ್, ಅನ್‌ಟೈಟಲ್ಡ್ ಕಲಾಕೃತಿಗಳೊಂದಿಗೆ ಚಿತ್ರಕೃತಿಗಳು ಹಾಗೂ ಡಿಜಿಟಲ್ ಪೋಟೋಗ್ರಫಿ ಕಲಾಕೃತಿಗಳು ವಾಸ್ತವ್ ಎಂಬ ಮುಖ್ಯ ಶೀರ್ಷಿಕೆಯಡಿ ನೋಡುಗರ ಮನಸೂರೆಗೊಳ್ಳುತ್ತಿದೆ. ಜೂ.26 ರವರೆಗೆ ಬೆಳಗ್ಗೆ 11:30ರಿಂದ 4 ಗಂಟೆಯ ವರೆಗೆ ಪ್ರದರ್ಶನಗೊಳ್ಳುತ್ತಿದೆ. ಕಲಾಸಕ್ತರು ಕಲಾಕೃತಿಯನ್ನು ನೋಡಲು ಹಾಗೂ ಅರ್ಥ ಮಾಡಿಕೊಳ್ಳಲು ಇದೊಂದು ಸದಾವಕಾಶವಾಗಿದೆ.

ವೇದಿಕೆಯಲ್ಲಿ ಕಲಾವಿದ ಕಿರಣ್, ನಟನಾರಂಗದ ಕಲಾವಿದ ವಿನೀತ್ ಕುಮಾರ್, ಕಲಾವಿದ ಹಾಗೂ ರಂಗಕರ್ಮಿ ಜಗದೀಶ್ ಆರ್ ಜಾಣಿ, ಆದಿವಾಸಿ ರಕ್ಷಣಾ ಪರಿಷತ್ತಿನ ಜಿಲ್ಲಾಧ್ಯಕ್ಷ ಪಿ.ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X