Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕುಂಬ್ಳೆ, ಪ್ರವೀಣ್ ಆಮ್ರೆ ಸಂದರ್ಶನ

ಕುಂಬ್ಳೆ, ಪ್ರವೀಣ್ ಆಮ್ರೆ ಸಂದರ್ಶನ

ಟೀಮ್ ಇಂಡಿಯಾ ಕೋಚ್ ಹುದ್ದೆ

ವಾರ್ತಾಭಾರತಿವಾರ್ತಾಭಾರತಿ21 Jun 2016 11:44 PM IST
share
ಕುಂಬ್ಳೆ, ಪ್ರವೀಣ್ ಆಮ್ರೆ ಸಂದರ್ಶನ

 ಕೋಲ್ಕತಾ, ಜೂ.21: ಬಿಸಿಸಿಐನ ಮೂವರು ಸದಸ್ಯರನ್ನು ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು(ಸಿಎಸಿ) ಭಾರತದ ಕೋಚ್ ಹುದ್ದೆಗಾಗಿ ನಗರದ ಹೊಟೇಲ್‌ನಲ್ಲಿ ಮಂಗಳವಾರ ಸಂದರ್ಶನ ನಡೆಸಿದ್ದು, ದೀರ್ಘಕಾಲದಿಂದ ನಡೆಯುತ್ತಿದ್ದ ಕೋಚ್ ಅಭ್ಯರ್ಥಿಗಳ ಹುಡುಕಾಟ ಕೊನೆಯ ಹಂತ ತಲುಪಿದೆ.

ಸೌರವ್ ಗಂಗುಲಿ, ವಿವಿಎಸ್ ಲಕ್ಷ್ಮಣ್ ಹಾಗೂ ಸಚಿನ್ ತೆಂಡುಲ್ಕರ್ ಅವರಿದ್ದ ತ್ರಿಸದಸ್ಯ ಸಮಿತಿ ಮ್ಯಾರಥಾನ್ ಸಂದರ್ಶನದಲ್ಲಿ ಭಾರತದ ಮಾಜಿ ನಾಯಕ ಅನಿಲ್ ಕುಂಬ್ಳೆ, ಮಾಜಿ ನಿರ್ದೇಶಕ ರವಿಶಾಸ್ತ್ರಿ, ಮಾಜಿ ಕ್ರಿಕೆಟಿಗರಾದ ಪ್ರವೀಣ್ ಆಮ್ರೆ ಹಾಗೂ ಲಾಲ್ ಚಂದ್ ರಾಜ್‌ಪೂತ್‌ರನ್ನು ಮಾತನಾಡಿಸಿತು.

 ಲಂಡನ್‌ನಲ್ಲಿರುವ ತೆಂಡುಲ್ಕರ್ ಟೆಲಿಕಾನ್ಫರೆನ್ಸ್ ಮೂಲಕ ಕೋಚ್ ಅಭ್ಯರ್ಥಿಗಳ ಸಂದರ್ಶನ ನಡೆಸಿದರು. ಕೋಚ್ ಅಭ್ಯರ್ಥಿಗಳ ಆಯ್ಕೆಗೆ ಗಂಗುಲಿ, ಲಕ್ಷ್ಮಣ್ ಹಾಗೂ ತೆಂಡುಲ್ಕರ್‌ಗೆ ಮಾಜಿ ಬಿಸಿಸಿಐ ಕಾರ್ಯದರ್ಶಿ ಸಂಜಯ್ ಜಗದಾಳೆ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿದರು.

ಕುಂಬ್ಳೆ ಸಂದರ್ಶನಕ್ಕೆ ಖುದ್ದು ಹಾಜರಾದರು.ಪ್ರತಿಷ್ಠಿತ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಟೀಮ್ ಇಂಡಿಯಾದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ವಿದೇಶದಲ್ಲಿರುವ ಕಾರಣ ಸಂದರ್ಶನಕ್ಕೆ ಹಾಜರಾಗಿರಲಿಲ್ಲ. ಅವರನ್ನು ವಿಡಿಯೋ ಕಾನ್ಫರೆನ್ಸ್‌ನ ಮೂಲಕ ಸಂದರ್ಶಿಸಲಾಯಿತು.

 ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಆಯ್ಕೆ ಸಮಿತಿಯ ಅಧ್ಯಕ್ಷ ಸಂದೀಪ್ ಪಾಟೀಲ್ ಸಂದರ್ಶನಕ್ಕೆ ಹಾಜರಾಗಿರಲಿಲ್ಲ. ವಿದೇಶಿ ಆಕಾಂಕ್ಷಿಗಳ ಪೈಕಿ ಆಸ್ಟ್ರೇಲಿಯದ ಮಾಜಿ ಆಟಗಾರರಾದ ಸ್ಟುವರ್ಟ್‌ಲಾ ಹಾಗೂ ಟಾಮ್ ಮೂಡಿ ಟೆಲಿಕಾನ್ಫರೆನ್ಸ್ ಮೂಲಕ ಸಂದರ್ಶನದಲ್ಲಿ ಭಾಗಿಯಾದರು.

ಬಿಸಿಸಿಐ ಕೋಚ್ ಹುದ್ದೆಗಾಗಿ ತನ್ನ ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿತ್ತು. ಭಾರತ ಹಾಗೂ ಹೊರದೇಶಗಳಿಂದ ಸುಮಾರು 57 ಅರ್ಜಿಗಳಿಂದ ಬಂದಿದ್ದವು. ಈ ಪೈಕಿ ಅಂತಿಮ ಪಟ್ಟಿಯಲಿ 21 ಅರ್ಜಿಗಳಿದ್ದವು.

ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿಯು ಜೂ.22 ರಂದು ತನ್ನ ಶಿಫಾರಸು ಪತ್ರವನ್ನು ಬಿಸಿಸಿಐ ಅಧ್ಯಕ್ಷರಿಗೆ ಕಳುಹಿಸಿಕೊಡುವ ಸಾಧ್ಯತೆಯಿದೆ.

 ಬಿಸಿಸಿಐ ಜೂ.24 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ. ‘‘ನಾವು ಇನ್ನಷ್ಟು ಅಭ್ಯರ್ಥಿಗಳನ್ನು ಸಂದರ್ಶನ ಮಾಡುವುದಿಲ್ಲ. ಈ ಪ್ರಕ್ರಿಯೆ ಇವತ್ತಿಗೆ ಮುಕ್ತಾಯವಾಗಿದೆ. ನಾವು ಸುಮಾರು 10 ಅಭ್ಯರ್ಥಿಗಳನ್ನು ಸಂದರ್ಶನ ಮಾಡಿದ್ದೇವೆ. ಪ್ರತಿಯೊಬ್ಬರೂ ಹಾಜರಾಗಿದ್ದಾರೆ. ನಾವು ಇಂದು ಅಭ್ಯರ್ಥಿಯನ್ನು ಆಯ್ಕೆ ಮಾಡಿ ಬಿಸಿಸಿಐ ಕಾರ್ಯದರ್ಶಿಗೆ ನಮ್ಮ ವರದಿಯನ್ನು ನೀಡಲಿದ್ದೇವೆ ಎಂದು ಗಂಗುಲಿ ನುಡಿದರು.

ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ಹೆಸರು ಶಿಫಾರಸು?

 ಮಾಜಿ ಆಟಗಾರರಾದ ಸೌರವ್ ಗಂಗುಲಿ, ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯು ಭಾರತದ ಮಾಜಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹೆಸರನ್ನು ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಶಿಫಾರಸು ಮಾಡಲಿದೆ ಎನ್ನಲಾಗಿದೆ.

ಕುಂಬ್ಳೆ ಭಾರತದ ಪರ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 956 ವಿಕೆಟ್‌ಗಳನ್ನು ಪಡೆದಿದ್ದಾರೆ. ಶಾಸ್ತ್ರಿ 18 ತಿಂಗಳ ಕಾಲ ಭಾರತ ತಂಡದ ನಿರ್ದೇಶಕರಾಗಿದ್ದು, ಇವರ ಮಾರ್ಗದರ್ಶನದಲ್ಲಿ ಭಾರತ ಏಕದಿನ ವಿಶ್ವಕಪ್‌ನಲ್ಲಿ ಹಾಗೂ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ತಲುಪಿತ್ತು.

ಜೂ.24ರಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕೋಚ್ ಹೆಸರು ಬಹಿರಂಗವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X