Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಗ್ರೀನ್‌ವ್ಯೆ ಶಾಲೆಯಲ್ಲಿ...

ಸುಳ್ಯ: ಗ್ರೀನ್‌ವ್ಯೆ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ23 Jun 2016 7:19 PM IST
share
ಸುಳ್ಯ: ಗ್ರೀನ್‌ವ್ಯೆ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ

ಸುಳ್ಯ, ಜೂ.23: ಸುಳ್ಯದ ಗ್ರೀನ್‌ವ್ಯೆ ಶಿಕ್ಷಣ ಸಂಸ್ಥೆಯ ಈ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸರಕಾರ ರಚನೆಗೆ ಚುನಾವಣೆಯನ್ನು ಗುರುವಾರ ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು.

ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ವಿದ್ಯಾರ್ಥಿ ಸರಕಾರದ ಮಂತ್ರಿಮಂಡಲದ ಎಲ್ಲಾ ಸದಸ್ಯರನ್ನೂ ವಿದ್ಯಾರ್ಥಿಗಳೇ ಚುನಾವಣೆಯ ಮೂಲಕ ಆರಿಸುವಂತೆ ಚುನಾವಣೆ ನಡೆಯಿತು. ಶಾಲೆಯ ನಾಲ್ಕನೆ ತರಗತಿಯಿಂದ ಹತ್ತನೆ ತರಗತಿಗಳನ್ನು 14 ಕ್ಷೇತ್ರಗಳನ್ನಾಗಿ ವಿಂಗಡಿಸಿ ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಚುನಾವಣೆ ನಡೆಯಿತು. ಮೀಸಲಾತಿ ನಿಯಮದಂತೆ ವಿದ್ಯಾರ್ಥಿನಿಯರಿಗೂ ಒಂದು ಕ್ಷೇತ್ರವನ್ನು ಮೀಸಲಿಡಲಾಗಿತ್ತು.

ಸ್ಟೂಡೆಂಟ್ಸ್ ವೆಲ್ಫೇರ್ ಪಾರ್ಟಿ ಹಾಗೂ ಪೀಪಲ್ಸ್ ವೆಲ್ಫೇರ್ ಪಾರ್ಟಿ ಎಂಬ ಎರಡು ರಾಜಕೀಯ ಪಕ್ಷಗಳು ತಮ್ಮ ಅ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ನಡೆಸಿದವು. ಬಳಿಕ ವಿದ್ಯಾರ್ಥಿಗಳೆ ಚುನಾವಣೆಯ ಉಸ್ತುವಾರಿ ವಹಿಸಿ ಮತಗಟ್ಟೆಗಳ ಅಧಿಕಾರಿಗಳಾಗಿ ಚುನಾವಣೆ ನಡೆಯಿತು. ಶಾಲಾ ಶಿಕ್ಷಕ ರಂಜಿತ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಸರತಿ ಸಾಲಿನಲ್ಲಿ ಆಗಮಿಸಿದ ವಿದ್ಯಾರ್ಥಿಗಳು ಮತದಾನ ಮಾಡಿದರು. ನಕಲಿ ಮತದಾನ ಆಗದಂತೆ ತಡೆಯಲು ಕೈಬೆರಳಿಗೆ ಶಾಯಿಯ ಗುರುತನ್ನು ಹಾಕಲಾಗಿತ್ತು. ವಿದ್ಯಾರ್ಥಿಗಳೇ ಪೊಲೀಸ್ ಆಗಿ ಬಂದೋಬಸ್ತ್ ವ್ಯವಸ್ಥೆಯನ್ನೂ ಮಾಡಿದ್ದರು. ಟಿಕೆಟ್ ವಂಚಿತ ಅಭ್ಯರ್ಥಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರೂ ಬಳಿಕ ರಾಜಕೀಯ ಒತ್ತಡಕ್ಕೆ ಮಣಿದು ಕೊನೆಯ ಕ್ಷಣದಲ್ಲಿ ನಾಮಪತ್ರವನ್ನು ಹಿಂದಕ್ಕೆ ಪಡೆದರು.

ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಚುನಾವಣಾ ಕ್ಷೇತ್ರಗಳಿಗೆ ಇಡಲಾಗಿತ್ತು. ಮಹಾತ್ಮ ಗಾಂಧಿ, ಭಗತ್‌ಸಿಂಗ್, ಚೆನ್ನಮ್ಮ, ಅಬ್ಬಕ್ಕ, ರಾಯಣ್ಣ, ಕೆಂಪೇಗೌಡ, ತಿಲಕ್, ಪ್ರಿಯದರ್ಶಿನಿ, ಮೈಸೂರು ಹುಲಿ, ಝಾನ್ಸಿ, ಛತ್ರಪತಿ, ನೇತಾಜಿ, ಚಾಚಾ ನೆಹರೂ, ಸರ್ದಾರ್ ಎಂಬದಾಗಿ ನಾಮಫಲಕ ಹಾಕಲಾಗಿತ್ತು. ಸಾರ್ವತ್ರಿಕ ಚುನಾವಣೆಯಲ್ಲಿದ್ದಂತೆ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂದಕ್ಕೆ ಪಡೆಯುವುದು, ಪ್ರಚಾರ, ಅಂಚೆ ಮತ ಚಲಾವಣೆ, ಮತದಾನ, ಮತ ಎಣಿಕೆ ಇತ್ಯಾದಿ ಪ್ರಕ್ರಿಯೆಗಳು ನಡೆದವು.

ಮುಖ್ಯ ಶಿಕ್ಷಕ ಬಿ.ಪಿ.ಅಮರನಾಥ್, ಶಿಕ್ಷಕ ವೃಂದ, ಶಾಲಾ ಸಂಚಾಲಕ ಬಿ.ಎಸ್.ಶರೀಫ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎನ್.ಎ.ಅಬ್ದುಲ್ ನಾವೂರು, ಆಡಳಿತ ಸಮಿತಿ ಕಾರ್ಯದರ್ಶಿ ಕೆ.ಬಿ.ಇಬ್ರಾಹೀಂ ಮೊದಲಾದವರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X