Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯದ ನೆರಳಲ್ಲಿ ದಿನ ಕಳೆಯುತ್ತಿರುವ...

ಭಯದ ನೆರಳಲ್ಲಿ ದಿನ ಕಳೆಯುತ್ತಿರುವ ಅಫ್ಘಾನಿಸ್ತಾನದ ಹಿಂದೂ, ಸಿಖ್ಖರು

ವಾರ್ತಾಭಾರತಿವಾರ್ತಾಭಾರತಿ23 Jun 2016 8:53 PM IST
share
ಭಯದ ನೆರಳಲ್ಲಿ ದಿನ ಕಳೆಯುತ್ತಿರುವ ಅಫ್ಘಾನಿಸ್ತಾನದ ಹಿಂದೂ, ಸಿಖ್ಖರು

ಕಾಬೂಲ್, ಜೂ. 23: ಕಾಬೂಲ್‌ನಲ್ಲಿ ಇತ್ತೀಚೆಗೆ ಒಂದು ದಿನ ಜಗ್ತಾರ್ ಸಿಂಗ್ ಲಘ್ಮನಿ ತನ್ನ ಸಾಂಪ್ರದಾಯಿಕ ಗಿಡಮೂಲಿಕೆ ಅಂಗಡಿಯಲ್ಲಿದ್ದರು. ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಚೂರಿ ತೋರಿಸಿ, ಒಂದೋ ಇಸ್ಲಾಮ್‌ಗೆ ಮತಾಂತರಗೊಳ್ಳಬೇಕು, ಇಲ್ಲಿದಿದ್ದರೆ ಕತ್ತು ಸೀಳುವೆ ಎಂಬ ಬೆದರಿಕೆ ಹಾಕಿದನು. ಅಲ್ಲಿ ಸೇರಿದ್ದವರು ಮತ್ತು ಇತರ ಅಂಗಡಿಗಳವರು ಅಂದು ಅವರ ಪ್ರಾಣವನ್ನು ರಕ್ಷಿಸಿದರು.
ಇದು ಅಫ್ಘಾನಿಸ್ತಾನದಲ್ಲಿ ಕ್ಷೀಣಗೊಳ್ಳುತ್ತಿರುವ ಸಿಖ್ ಮತ್ತು ಹಿಂದೂ ಸಮುದಾಯಗಳ ಮೇಲೆ ನಡೆದ ಇತ್ತೀಚಿನ ದಾಳಿಯಾಗಿದೆ.
ಒಂದು ಕಾಲದಲ್ಲಿ ಸಿಖ್ ಮತ್ತು ಹಿಂದೂಗಳು ಅಫ್ಘಾನಿಸ್ತಾನದ ಲವಲವಿಕೆಯ ಅಲ್ಪಸಂಖ್ಯಾತ ಸಮುದಾಯಗಳಾಗಿದ್ದರು. ಈ ಬೆರಳೆಣಿಕೆಯಷ್ಟು ಸಿಖ್ ಮತ್ತು ಹಿಂದೂ ಕುಟುಂಬಗಳು ಮಾತ್ರ ಇಲ್ಲಿ ನೆಲೆಸಿವೆ. ಅಫ್ಘಾನಿಸ್ತಾನದಲ್ಲಿ ತಾರತಮ್ಯ ಮತ್ತು ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬ ಕಾರಣಕ್ಕಾಗಿ ಹೆಚ್ಚಿನವರು ತಮ್ಮ ಹುಟ್ಟಿದ ದೇಶಕ್ಕೆ ಪಲಾಯನಗೈದಿದ್ದಾರೆ.
‘‘ನಾವು ಇಲ್ಲಿ ಹೆದರಿಕೆ ಮತ್ತು ತಾರತಮ್ಯದೊಂದಿಗೆ ನಮ್ಮ ದಿನವನ್ನು ಆರಂಭಿಸುತ್ತೇವೆ. ನೀವು ಮುಸ್ಲಿಮ್ ಅಲ್ಲದಿದ್ದರೆ, ಅವರ ದೃಷ್ಟಿಯಲ್ಲಿ ನೀವು ಮಾನವರಲ್ಲ’’ ಎಂದು ಕಾಬೂಲ್‌ನ ಗಿಜಿಗಿಡುವ ಮಧ್ಯದಲ್ಲಿರುವ ತನ್ನ ಸಣ್ಣ ಅಂಗಡಿಯಲ್ಲಿ ಜಗ್ತಾರ್ ಸಿಂಗ್ ಹೇಳಿದರು.
‘‘ಏನು ಮಾಡಬೇಕು ಅಥವಾ ಎಲ್ಲಿ ಹೋಗಬೇಕು ಎಂದು ನನಗೆ ತಿಳಿದಿಲ್ಲ’’ ಎಂದು ಅವರು ಹೇಳುತ್ತಾರೆ.
ಅಫ್ಘಾನಿಸ್ತಾನದಲ್ಲಿ ಶತಮಾನಗಳಿಂದ ಹಿಂದೂ ಮತ್ತು ಸಿಖ್ ಸಮುದಾಯಗಳು ವ್ಯಾಪಾರ ಮತ್ತು ಲೇವಾದೇವಿಯಲ್ಲಿ ಮುಂಚೂಣಿಯಲ್ಲಿದ್ದವು. ಆದರೆ, ಇಂದು ಈ ಸಮುದಾಯಗಳು ವೈದ್ಯಕೀಯ ಗಿಡಮೂಲಿಕೆ ಅಂಗಡಿಗಳಿಗಷ್ಟೇ ಸೀಮಿತವಾಗಿವೆ.
ಹಿಂದೂಗಳು ಮತ್ತು ಸಿಖ್ಖರ ರಾಷ್ಟ್ರೀಯ ಮಂಡಳಿಯ ಅಧ್ಯಕ್ಷ ಅವತಾರ್ ಸಿಂಗ್ ಹೇಳುವಂತೆ, ಈಗ ಈ ಸಮುದಾಯಗಳ 220ಕ್ಕೂ ಕಡಿಮೆ ಕುಟುಂಬಗಳು ದೇಶದಲ್ಲಿವೆ. 1992ರಲ್ಲಿ ಕಾಬೂಲ್ ಸರಕಾರ ಪತನಗೊಳ್ಳುವ ಮೊದಲು ಸಮುದಾಯದ 2.2 ಲಕ್ಷ ಸದಸ್ಯರಿದ್ದರು.
ಒಂದು ಕಾಲದಲ್ಲಿ ಇಡೀ ದೇಶದಲ್ಲಿ ಹರಡಿಹೋಗಿದ್ದ ಸಮುದಾಯ ಇಂದು ಪೂರ್ವದ ಪ್ರಾಂತಗಳಾದ ನಂಗರ್‌ಹಾರ್ ಮತ್ತು ಘಝ್ನಿ ರಾಜಧಾನಿ ಕಾಬೂಲ್‌ನಲ್ಲಿ ಕೇಂದ್ರೀಕೃತಗೊಂಡಿವೆ.
ಇಲ್ಲಿ ಹಿಂದೂಗಳು ಮತ್ತು ಸಿಖ್ಖರನ್ನು ಸಾರ್ವಜನಿಕವಾಗಿ ಗುರುತಿಸುವಂತಾಗಲು, ಅವರು ಹಳದಿ ಪಟ್ಟಿಗಳನ್ನು ಧರಿಸಬೇಕು.
‘‘ಆ ಒಳ್ಳೆಯ ದಿನಗಳು ಬಹು ಹಿಂದೆಯೇ ಹೋಗಿವೆ. ಆಗ ನಮ್ಮನ್ನು ಅಫ್ಘಾನಿಸ್ತಾನೀಯರಂತೆಯೇ ಪರಿಗಣಿಸಲಾಗುತ್ತಿತ್ತು, ಹೊರಗಿನವರಂತಲ್ಲ’’ ಎಂದು ಅವತಾರ್ ಸಿಂಗ್ ಹೇಳುತ್ತಾರೆ.
‘‘ನಮ್ಮ ಜಮೀನುಗಳನ್ನು ಸರಕಾರದಲ್ಲಿರುವ ಪ್ರಬಲ ವ್ಯಕ್ತಿಗಳು ವಶಪಡಿಸಿಕೊಂಡಿದ್ದಾರೆ. ನಾವು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ. ಈ ಸಣ್ಣ ಸಮುದಾಯ ದಿನದಿಂದ ದಿನಕ್ಕೆ ಚಿಕ್ಕದಾಗುತ್ತಾ ಸಾಗುತ್ತಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X