Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಅಕ್ರಮ ಕಟ್ಟಡ ತೆರವುಗೊಳಿಸಲು...

ಬೆಳ್ತಂಗಡಿ: ಅಕ್ರಮ ಕಟ್ಟಡ ತೆರವುಗೊಳಿಸಲು ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Jun 2016 11:20 PM IST
share
ಬೆಳ್ತಂಗಡಿ: ಅಕ್ರಮ ಕಟ್ಟಡ ತೆರವುಗೊಳಿಸಲು ಡಿಸಿ ಸೂಚನೆ

ಬೆಳ್ತಂಗಡಿ, ಜೂ.23: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರಸ್ತೆ ಮಾರ್ಜಿನ್‌ನಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು 10 ದಿನದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಹಶೀಲ್ದಾರ್‌ರಿಗೆ ಆದೇಶಿಸಿದ್ದಾರೆ.

ಗುರುವಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಅವರಿಗೆ, ಸಾಮಾಜಿಕ ಕಾರ್ಯಕರ್ತ ಶೇಖರ್ ಲಾಲ ಮನವಿ ನೀಡಿ, ಕಿಲ್ಲೂರಿನಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ಇನ್ನೂ ತೆರವುಗೊಳಿಸಿಲ್ಲ. ಕಟ್ಟಡ ಕಟ್ಟಿದವರ ಮೇಲೆ ಕೇಸು ದಾಖಲಿಸಲಾಗಿದೆ. ಆದರೆ ಯಾವುದೇ ಕ್ರಮ ಆಗಿಲ್ಲ ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ತಹಶೀಲ್ದಾರ್ ಎಚ್.ವಿ.ಪ್ರಸನ್ನಮೂರ್ತಿ ಅವರಲ್ಲಿ ಮಾಹಿತಿ ಕೇಳಿದಾಗ, 15 ದಿನದಲ್ಲಿ ತೆವುಗೊಳಿಸುವುದಾಗಿ ಕಟ್ಟಡ ಕಟ್ಟಿದವರು ತಿಳಿಸಿದ್ದಾರೆ ಎಂದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಸಿ, 10 ದಿನದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೇ ತೆರವುಗೊಳಿಸುವಂತೆ ತಹಶೀಲ್ದಾರ್ ರಿಗೆ ಸೂಚಿಸಿದರು. ಸುಲ್ಕೇರಿ ಗ್ರಾಮದಲ್ಲಿ 178 ಎಕ್ರೆ ಜಾಗ ಕೊರಗ ಹಾಗೂ ಮಲೆಕುಡಿಯ ಸಮುದಾಯದವರಿಗೆ ಮೀಸಲಾಗಿಟ್ಟಿದ್ದರೂ, ಆ ಜಾಗ ಕಾಡು ಪ್ರದೇಶದಲ್ಲಿದ್ದು, ಮೀಸಲು ಇರಿಸಿದ ಜಾಗವನ್ನು ಬದಲಾಯಿಸಿ ಬೇರೆ ಜಾಗವನ್ನು ಇರಿಸುವಂತೆ ದಲಿತ ಸಂಘದ ಸಂಜೀವ ಆರ್. ಮನವಿ ಮಾಡಿದರು. ಈಗ ಇರಿಸಿದ ಜಾಗ ಸರಕಾರಿ ಜಾಗವಾಗಿದೆ. ಅಲ್ಲಿ ಕೊರಗ ಜನಾಂಗ ಹಾಗೂ ರಾಷ್ಟೀಯ ಉದ್ಯಾನದಿಂದ ಹೊರಬರುವವರಿಗೆ ನೀಡಲಾಗುವುದು ಎಂದು ತಹಸೀಲ್ದಾರ್ ತಿಳಿಸಿದರು.

ಆದರೆ ಪದ್ಮ ವಸಂತ್ ಎಂಬವರು ನವಿ ನೀಡಿ ಒಂದು ವರ್ಷದ ಹಿಂದೆ 1.70 ಎಕ್ರೆ ಜಾಗದ ಸರ್ವೇ, ನಕ್ಷೆ ಆಗಿದೆ. ಇನ್ನೂ ಜಾಗ ಮಂಜೂರು ಮಾಡಿಲ್ಲ ಎಂದು ಮನವಿ ಮಾಡಿದರು. ಅದೇ ರೀತಿ, ಉಕ್ರು, ಚಂಪಾ, ಲಕ್ಷ್ಮೀ ಆನಂದ್ ಎಂಬವರೂ ಜಾಗ ಮಂಜೂರು ಮಾಡುವಂತೆ ಮನವಿ ಮಾಡಿದರು. ತಕ್ಷಣ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿ ಎಲ್ಲರಿಗೂ ಜಾಗ ಮಂಜೂರು ಮಾಡುವಂತೆ ಡಿಸಿ ಸೂಚಿಸಿದರು.

ತೋಟತ್ತಾಡಿ ಗ್ರಾಮದಲ್ಲಿ ಡಿಸಿ ಮನ್ನಾ ಭೂಮಿಯಲ್ಲಿ ಮನೆ ಮಾಡಿ ಕುಳಿತಿರುವ ಬಿಂದು ಎಂಬವರು ತನಗೆ ಜಾಗವನ್ನು ಮಂಜೂರು ಮಾಡಿ ಎಂದು ಮನವಿ ನೀಡಿದರು. ಈ ಬಗ್ಗೆ ಕಂದಾಯ ನಿರೀಕ್ಷಕರು, ಆ ಜಾಗ ಡಿಸಿ ಮನ್ನಾ ಭೂಮಿಯಾಗಿರುವುದರಿಂದ ನೀಡಲು ಸಾಧ್ಯವಾಗಿಲ್ಲ. ಅಲ್ಲಿ ಉಳಿದವರೆಲ್ಲ ದಲಿತರಾಗಿದ್ದು, ಅವರ ಆಕ್ಷೇಪಣೆಯಿದೆ ಎಂದರು. ಆದರೆ ಮಾನವೀಯತೆ ಮೇಲೆ, ಆ ಜಾಗದ ಬದಲು ಡಿಸಿ ಮನ್ನಾ ಜಾಗಕ್ಕೆ ಬದಲಿ ಜಾಗವನ್ನು ಪ್ರಸ್ತಾವನೆ ಕಳುಹಿಸಿ, ಬಿಂದು ಅವರಿಗೆ ಜಾಗವನ್ನು ಮಂಜೂರು ಮಾಡಿ ಎಂದು ಡಿಸಿ ಸೂಚಿಸಿದರು.

ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಹಾಗೂ ಸೇರ್ಪಡೆ ಬಗ್ಗೆ ಅನೇಕ ಮಂದಿ ಆಹರ ಇಲಾಖೆಯಲ್ಲಿ ಸರ್ವರ್ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿ, ರಾಜ್ಯಾದ್ಯಂತ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ನಡೆದಿದ್ದು, ಇನ್ನೂ ಶೇ. 10ರಷ್ಟು ಬಾಕಿಯಾಗಿದೆ. ಆಧಾರ್ ಕಾರ್ಡ್ ಲಿಂಕ್ ಆಗದೆ ಹೊಸ ಪಡಿತರ ಚೀಟಿಗೆ ಅಥವಾ ಸೇರ್ಪಡೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X