ಬೆಂಕಿ ಹಚ್ಚಿಕೊಂಡು ವೃದ್ಧೆ ಆತ್ಮಹತ್ಯೆ
ಕಾರ್ಕಳ, ಜೂ.23: ವಿಪರೀತ ಕಾಲು ಗಂಟಿನ ನೋವಿನಿಂದ ಜೀವನದಲ್ಲಿ ಜುಗುಪ್ಸೆಗೊಂಡ ವೃದ್ಧೆಯೊಬ್ಬರು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಕುಕ್ಕುಂದೂರು ಗ್ರಾಮದ ಕಂಬಳಬೆಟ್ಟುವಿನ ಚೋಂಕ್ರಿ ಎಂದು ಗುರುತಿಸಲಾಗಿದೆ. ಇವರು ಜೂ.23ರಂದು ಬೆಳಗ್ಗೆ ಮನೆಯಲ್ಲಿ ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿ ತೀವ್ರವಾಗಿ ಗಾಯಗೊಂಡಿದ್ದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಅಪರಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





