Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುರ್‌ಆನ್‌ನಿಂದ ಸಾಮಾಜಿಕ ನ್ಯಾಯ:...

ಕುರ್‌ಆನ್‌ನಿಂದ ಸಾಮಾಜಿಕ ನ್ಯಾಯ: ನ್ಯಾ.ಸೋಮಶೇಖರ್

‘ಕನ್ನಡದಲ್ಲಿ ಕುರ್‌ಆನ್ ಅನುವಾದ-5ನೆ ಆವೃತ್ತಿ’ ಗ್ರಂಥಗಳ ವಿತರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Jun 2016 11:37 PM IST
share

ಬೆಂಗಳೂರು, ಜೂ. 23: ‘ಕುರ್‌ಆನ್’ ಓದಿದರೆ ಒಬ್ಬರಿಗೆ ನ್ಯಾಯ ಒದಗಿಸಬಹುದು ಎಂಬ ಮನೊೀಭಾವ ನಮ್ಮಲ್ಲಿ ಮೂಡಬೇಕೆಂದು ಬೆಂಗಳೂು ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನ ನ್ಯಾಯಮೂರ್ತಿ ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ನಗರದ ಸಿವಿಲ್ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಸಲಾಮ್ ಸೆಂಟರ್ ಏರ್ಪಡಿಸಿದ್ದ ವಾರ್ತಾಭಾರತಿ ದಿನ ಪತ್ರಿಕೆ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರ ‘ಕನ್ನಡದಲ್ಲಿ ಕುರ್‌ಆನ್ ಅನುವಾದ-5ನೆ ಆವೃತ್ತಿ’ ಗ್ರಂಥಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾವು ಈಗಾಗಲೇ ಅನೇಕ ಕಾನೂನುಗಳನ್ನು ರೂಪಿಸಿದ್ದು, ಯಾವ ಕಾನೂನನ್ನು ಯಾವ ಸಂದರ್ಭದಲ್ಲಿ ಉಪಯೋಗಿಸಬೇಕೆಂದು ಇನ್ನು ಸರಿಯಾಗಿ ಗೊತ್ತಿಲ್ಲ. ಆದರೆ, ಸಿಆರ್‌ಪಿಸಿ ಅಡಿಯಲ್ಲಿರುವ 125, 126, 127 ಸೆಕ್ಷನ್‌ಗಳಲ್ಲಿ ನ್ಯಾಯ ಒದಗಿಸಬೇಕಾದರೆ, ಕುರ್‌ಆನ್‌ನಲ್ಲಿರುವ ಅಂಶಗಳು ಸಹಕಾರಿ ಆಗಬಹುದೇ ಎಂಬುವುದನ್ನು ಯೋಚಿಸುವ ಮನೋಭಾವ ಮೂಡಬೇಕೆಂದು ಅವರು ಹೇಳಿದರು.
  ಪ್ರತಿಯೊಂದು ಧರ್ಮವು ಮಾನವೀಯತೆಯ ಜೀವನ ರೂಪಿಸಬೇಕೆಂದು ಬೋಧನೆ ಮಾಡುತ್ತದೆ. ಅಲ್ಲದೆ, ನಮ್ಮ ದೇಶದಲ್ಲಿಯೂ ಅನೇಕ ಧರ್ಮ, ತತ್ವಗಳಿವೆ. ಹೀಗಾಗಿ, ಪ್ರತಿಯೊಬ್ಬರು ಎಲ್ಲ ಧರ್ಮಗ್ರಂಥಗಳ ಬಗ್ಗೆ ತಿಳಿದುಕೊಳ್ಳಬೇಕು. ಇವೆಲ್ಲವು ಒಂದು ಧರ್ಮಕ್ಕೆ ಸೀಮಿತಗೊಳ್ಳಬಾರದು ಎಂದ ಅವರು, ಅರೆಬಿಕ್ ಭಾಷೆಯಲ್ಲಿರುವ ಪವಿತ್ರ ಕುರ್‌ಆನ್ ಅನ್ನು ಕನ್ನಡಕ್ಕೆ ಅನುವಾದ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದರಿಂದ ಕುರ್‌ಆನ್ ಬಗ್ಗೆ ಕನ್ನಡಿಗರು ತಿಳಿದುಕೊಳ್ಳಬಹುದು ಎಂದು ನುಡಿದರು.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್. ಸಿ.ಶಿವರಾಮು ಮಾತನಾಡಿ, ಧರ್ಮ ಗ್ರಂಥಗಳನ್ನು ಓದುವ ಜೊತೆಗೆ ಅದರಲ್ಲಿನ ತತ್ವಗಳನ್ನು ನಾವು ಪಾಲನೆ ಮಾಡಬೇಕಾಗಿದೆ. ಆದರೆ, ಇದೀಗ ಯಾರು ಸಹ ಧರ್ಮಗ್ರಂಥದ ತತ್ವಗಳನ್ನು ಪಾಲನೆ ಮಾಡಲು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
  ಕವಿ ಸಿದ್ದಯ್ಯ ಪುರಾಣಿಕ ಅವರು, 1977ರ ಸಾಲಿನಲ್ಲಿ ಕುರ್‌ಆನ್ ಗ್ರಂಥವನ್ನು ಕನ್ನಡದಲ್ಲಿ ಅನುವಾದ ಮಾಡಿದ್ದರು ಎಂದ ಅವರು, ಎಲ್ಲ ಧರ್ಮಗ್ರಂಥಗಳು ಸಮಾನತೆಯ ಸಂದೇಶವನ್ನು ಹೇಳಿವೆ. ಹೀಗಾಗಿ, ಧರ್ಮ ಯಾವುದೇ ಇರಲಿ, ಜಾತಿ ಯಾವುದೇ ಇರಲಿ ನಮ್ಮಲ್ಲಿನ ನೀತಿ ಬಹುಮುಖ್ಯ ಎಂದು ಅಭಿಪ್ರಾಯಿಸಿದರು.
5 ಸಾವಿರ ವಿತರಣೆ: ನಗರದ ಸಿವಿಲ್ ಕೋರ್ಟ್ ಆವರಣದಲ್ಲಿ ಸಲಾಮ್ ಸೆಂಟರ್ ಹಮ್ಮಿಕೊಂಡಿದ್ದ ವಾರ್ತಾಭಾರತಿ ದಿನಪತ್ರಿಕೆ ಪ್ರಧಾನ ಸಂಪಾದಕ ಅಬ್ದುಸ್ಸಲಾ್ ಪುತ್ತಿಗೆ ಅವರ ‘ಕನ್ನಡದಲ್ಲಿ ಕುರ್‌ಆನ್ ಅನುವಾದ-5ನೆ ಆವೃತ್ತಿ’ ಗ್ರಂಥಗಳ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಐದು ಸಾವಿರಕ್ಕೂ ಅಧಿಕ ಗ್ರಂಥಗಳನ್ನು ವಿತರಿಸಲಾಯಿತು.
ಕನ್ನಡದಲ್ಲಿ ಕುರ್‌ಆನ್ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಹಿರಿಯ ವಕೀಲ ಜೈರಾಮ್ ಅವರು, ಕುರ್‌ಆನ್ ಕನ್ನಡ ಭಾಷೆಗೆ ಅನುವಾದಗೊಂಡಿರುವುದು ಸಂತಸ ತಂದಿದೆ. ನಾನು ಮೊದಲ ಸಂಚಿಕೆ ಓದಿದ್ದೆ. ಅದರಲ್ಲಿನ ಕೆಲವು ತತ್ವಗಳು, ಮಾನವೀಯತೆಯ ಸಂದೇಶಗಳನ್ನು ಎಲ್ಲ ಧರ್ಮದವರು ಅನುಸರಿಸಬಹುದು ಎಂದರು.
ಸಲಾಮ್ ಸೆಂಟರ್‌ನ ಅಧ್ಯಕ್ಷ ಸೈಯದ್ ಹಮೀದ್ ಮೊಹ್ಸಿನ್, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟೇಗೌಡ, ಎಚ್.ವಿ.ಪ್ರವೀಣ್‌ಗೌಡ, ಪಿ.ಸುಧಾಕರ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X