Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ದೇಬಿಹಾಳ: ಹಾಡಹಗಲೇ ಶಿಕ್ಷಕನ ಮನೆಗೆ...

ಮುದ್ದೇಬಿಹಾಳ: ಹಾಡಹಗಲೇ ಶಿಕ್ಷಕನ ಮನೆಗೆ ನುಗ್ಗಿ 3.18 ಲಕ್ಷ ರೂ.ಕಳ್ಳತನ

ವಾರ್ತಾಭಾರತಿವಾರ್ತಾಭಾರತಿ23 Jun 2016 11:54 PM IST
share
ಮುದ್ದೇಬಿಹಾಳ: ಹಾಡಹಗಲೇ ಶಿಕ್ಷಕನ ಮನೆಗೆ ನುಗ್ಗಿ 3.18 ಲಕ್ಷ ರೂ.ಕಳ್ಳತನ

ಮುದ್ದೇಬಿಹಾಳ, ಜೂ.23: ಹಾಡಹಗಲೇ ಎಪಿಎಂಸಿ ಆವರಣದಲ್ಲಿ ನಿಲ್ಲಿಸಿದ್ದ ಕಾರ್‌ನ ಗಾಜು ಒಡೆದು ಗುತ್ತಿಗೆದಾರರೊಬ್ಬರ ಹಣ ಕಳ್ಳತನದ ಘಟನೆ ಇನ್ನೂ ಹಸಿರಾಗಿರುವಂತೆಯೇ ಪಟ್ಟಣದಲ್ಲಿ ಮತ್ತೊಂದು ಹಾಡುಹಗಲೇ ಕಳ್ಳತನ ನಡೆದಿದ್ದು ಸಾರ್ವಜನಿಕರನ್ನು ತಲ್ಲಣಗೊಳಿಸಿದೆ.

ಪಟ್ಟಣದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಬ್ಯಾಂಕ್‌ನಿಂದ ಆಗ ತಾನೇ ಡ್ರಾ ಮಾಡಿಕೊಂಡು ಮನೆಯಲ್ಲಿ ತಂದಿಟ್ಟಿದ್ದ ಹಣವನ್ನು ಹಾಡಹಗಲೇ ಕಳ್ಳರಿಬ್ಬರು ಮನೆಗೆ ನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಪಟ್ಟಣದ ಬಸವ ನಗರದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ಬಸವನಗರದ ರಸ್ತೆ ಪಕ್ಕದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕ ಬಸವರಾಜ ಗುರುಪಾದಪ್ಪ ಅಸ್ಕಿ ಎಂಬುವರೇ ಹಣ ಕಳೆದುಕೊಂಡವರು. ಯೂನಿಯನ್ ಬ್ಯಾಂಕ್‌ನಿಂದ ಮಧ್ಯಾಹ್ನ 1:30ರ ಸುಮಾರಿಗೆ ಬಂಗಾರದ ಆಭರಣಗಳನ್ನಿಟ್ಟು ಸಾಲವಾಗಿ ಪಡೆದುಕೊಂಡಿದ್ದ 3.18 ಲಕ್ಷ ರೂ.ಹಣವನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಹಣದ ಚೀಲವನ್ನು ಮನೆಯ ಹೊರಕೋಣೆಯಲ್ಲಿದ್ದ ಟ್ರೆಝರಿ ಪಕ್ಕದಲ್ಲಿಟ್ಟು ಮುಖ ತೊಳೆಯಲು ಹೋಗಿದ್ದರು. ಈ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಟ್ರೆಝರಿ ಪಕ್ಕದಲ್ಲಿದ್ದ ಹಣದ ಬ್ಯಾಗನ್ನು ಎತ್ತಿಕೊಂಡು ತನ್ನೊಂದಿಗೆ ಬಂದಿದ್ದ ಇನ್ನೊಬ್ಬನೊಂದಿಗೆ ಪರಾರಿಯಾಗಿದ್ದಾನೆ ಎಂದು ಶಿಕ್ಷಕ ಬಸವರಾಜ ಅಸ್ಕಿ ತಿಳಿಸಿದ್ದಾರೆ. ಬ್ಯಾಗ್ ತೆಗೆದುಕೊಂಡು ಹೋಗುವ ಸಪ್ಪಳ ಕೇಳುತ್ತಿದ್ದಂತೆ ಬಸವರಾಜ ಹೊರಗೆ ಓಡಿ ಬಂದಿದ್ದಾರೆ. ಅಲ್ಲದೇ ಬೈಕ್ ಏರಿಕೊಂಡು ಬ್ಯಾಗ್ ಕಳುವು ಮಾಡಿಕೊಂಡು ಹೊರಟಿದ್ದ ಕಳ್ಳರನ್ನು ಕಂಡು ಜೋರಾಗಿ ಕಿರುಚಿದ್ದಾರೆ. ಮಧ್ಯಾಹ್ನದ ಹೊತ್ತಾಗಿದ್ದರಿಂದ ಜನಸಂಚಾರ ವಿರಳವಾಗಿದ್ದು ಅವರು ಕೂಗಿದರೂ ಯಾರೊಬ್ಬರೂ ಅವರನ್ನು ಹಿಂಬಾಲಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ತಿಳಿದು ಬಂದಿದೆ.

ಹಣ ತೆಗೆದುಕೊಂಡು ಪರಾರಿಯಾದ ವಿಷಯವನ್ನು ಕೂಡಲೇ ಶಿಕ್ಷಕ ಬಸವರಾಜ ಅಸ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು ತನಿಖೆ ಮುಂದುವರೆದಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಕೆ.ಎಸ್.ಹಟ್ಟಿ, ಪಟ್ಟಣದಿಂದ ಹೊರಹೋಗುವ ಎಲ್ಲ ರಸ್ತೆಗಳಲ್ಲಿ ತಕ್ಷಣ ನಾಕಾಬಂದಿ ಮಾಡಿದರೂ ಆರೋಪಿಗಳು ಪತ್ತೆಂಾಗಲಿಲ್ಲ.ಅಲ್ಲದೇ ಹಣ ಕಳೆದಕೊಂಡ ಬಸವರಾಜ ಅವರನ್ನು ಯೂನಿಯನ್ ಬ್ಯಾಂಕ್‌ಗೆ ಕರೆದುಕೊಂಡು ಹೋಗಿ ಸಿಸಿ ಟಿವಿ ಫೂಟೇಜ್ ಪರಿಶೀಲಿಸಿದರೂ ಹಣ ಕಳುವು ಮಾಡಿಕೊಂಡು ಹೋದ ವ್ಯಕ್ತಿಗಳು ಇವರ ಹಿಂದಿರುವ ಬಗ್ಗೆ ಯಾವ ಸಂಶಯಾಸ್ಪದ ದೃಶ್ಯಗಳು ಕಂಡು ಬರಲಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X