Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದೇವಸ್ಥಾನದ ಭೂಮಿಯಲ್ಲಿ ದಲಿತ...

‘ದೇವಸ್ಥಾನದ ಭೂಮಿಯಲ್ಲಿ ದಲಿತ ಕ್ರೈಸ್ತರು, ಮುಸ್ಲಿಮರಿಗೆ ಕೃಷಿಗೆ ಅವಕಾಶ ಇಲ್ಲ’

ಭೂಮಿ ಬಿಡಲು ಆಂಧ್ರಪ್ರದೇಶ ಸರಕಾರದ ಆದೇಶ

ವಾರ್ತಾಭಾರತಿವಾರ್ತಾಭಾರತಿ24 Jun 2016 9:56 AM IST
share
‘ದೇವಸ್ಥಾನದ ಭೂಮಿಯಲ್ಲಿ ದಲಿತ ಕ್ರೈಸ್ತರು, ಮುಸ್ಲಿಮರಿಗೆ ಕೃಷಿಗೆ ಅವಕಾಶ ಇಲ್ಲ’

ವಿಜಯವಾಡ, ಜೂ.24: ಹಿಂದೂ ದೇವಳ ಅಥವಾ ಮಠಗಳಿಗೆ ಸೇರಿದ ಭೂಮಿಯಲ್ಲಿ ಹಿಂದೂಯೇತರರಿಗೆ ಕೃಷಿ ಮಾಡುವ ಅವಕಾಶವಿಲ್ಲವೆಂದು ಹೇಳಿರುವ ಆಂಧ್ರ ಪ್ರದೇಶ ಸರಕಾರ ಇದೀಗ ತನ್ನ ಅಧಿಕಾರಿಗಳ ಮೂಲಕ ದಲಿತ ಕ್ರೈಸ್ತರು ಹಾಗೂ ಮುಸ್ಲಿಮ್ ರೈತರನ್ನು ಧಾರ್ಮಿಕ ದತ್ತಿ ಭೂಮಿಗಳಿಂದ ತೆರವುಗೊಳಿಸುತ್ತಿದೆ.

ನವೆಂಬರ್ 2015ರಲ್ಲೇ ಈ ನಿಟ್ಟಿನಲ್ಲಿ ಆದೇಶವೊಂದನ್ನು ಜಾರಿ ಮಾಡಲಾಗಿದ್ದರೆ, ಇದೀಗ ಕೃಷಿ ಚಟುವಟಿಕೆ ಆರಂಭವಾಗುವ ಸಮಯ ಭೂಮಿಗಳ ಲೀಸ್ ನವೀಕರಣ ಮಾಡುವ ಸಂದರ್ಭದಲ್ಲಿ ಈ ಆದೇಶ ಜಾರಿಯಾಗುತ್ತಿದೆ.

ಈ ತಿಂಗಳ ಆರಂಭದಲ್ಲಿಯೇ ಆಂಧ್ರ ಪ್ರದೇಶ ಸರಕಾರವು ಸಂಬಂಧಿತ ರೈತರಿಗೆ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ಆರಂಭಿಸಿತ್ತು. ಇಂತಹ ದೇವಳದ ಭೂಮಿಗಳಲ್ಲಿ ಕೃಷಿ ಮಾಡುವ ದಲಿತ ಕ್ರೈಸ್ತರು ತಾವು ಕ್ರೈಸ್ತ ಧರ್ಮ ಅನುಸರಿಸುತ್ತಿಲ್ಲವೆಂದು ತಮ್ಮ ಚರ್ಚುಗಳಿಂದ ಪ್ರಮಾಣ ಪತ್ರ ತಂದಲ್ಲಿ ಮಾತ್ರ ಅವರಿಗೆ ಕೃಷಿ ನಡೆಸಲು ಅವಕಾಶ ನೀಡಲಾಗುವುದು ಎಂದು ಸರಕಾರ ಹೇಳಿದೆ. ಹೊಸ ನಿಯಮದ ಪ್ರಕಾರ ಮುಸ್ಲಿಮರು ದೇವಳ ಭೂಮಿಗಳಲ್ಲಿ ಕೃಷಿ ಚಟುವಟಿಕೆ ನಡೆಸುವಂತೆಯೇ ಇಲ್ಲವಾಗಿದೆ.

ಇತ್ತೀಚಿಗಿನ ವರ್ಷಗಳಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಹಲವಾರು ದಲಿತರು ಆಂಧ್ರದಲ್ಲಿದ್ದರೆ, ಅವರಲ್ಲಿ ಹೆಚ್ಚಿನವರು ತಮ್ಮ ಹೆಸರುಗಳನ್ನು ಬದಲಿಸದೇ ಇರುವುದರಿಂದ ಅವರು ಮತಾಂತರಗೊಂಡಿದ್ದಾರೆಯೇ ಅಥವಾ ಇಲ್ಲವೇ ಎಂದು ಕಂಡು ಹಿಡಿಯುವುದು ಕಷ್ಟವಾಗಿದೆ.

ಈ ಆದೇಶದಂತೆ ‘‘ಹಿಂದೂ ಧರ್ಮದ ಹೊರತಾಗಿ ಬೇರೆ ಧರ್ಮ ಆಚರಿಸುವವರಿಗೆ ದೇವಸ್ಥಾನದ ಭೂಮಿಯನ್ನು ಲೀಸ್, ಟೆಂಡರ್ ಅಥವಾ ಸಾರ್ವಜನಿಕ ಏಲಂ ಮೂಲಕ ಪಡೆಯುವ ಹಕ್ಕಿಲ್ಲ.’’

ಈ ನಿರ್ಧಾರವನ್ನು ವಿಚಿತ್ರ ಎಂದು ಬಣ್ಣಿಸಿರುವ ಮುಸ್ಲಿಮ್ ಯುನೈಟೆಡ್ ಫ್ರಂಟ್ ಸದಸ್ಯ ಹಬೀಬುರ್ರಹ್ಮಾನ್, ಗುಂಟೂರು ಜುಮಾ ಮಸೀದಿಯ ಭೂಮಿಯ ಶೇ.80ರಷ್ಟು ಸಾಗುವಳಿದಾರರು ಮುಸ್ಲಿಮೇತರರು ಎಂದು ಹೇಳಿದ್ದಾರೆ.

ಸರಕಾರದ ನಿಯಂತ್ರಣದಲ್ಲಿರುವ ಆಂಧ್ರದ ಹೆಚ್ಚಿನ ದೇವಳಗಳ ಬಳಿ ಸಾಕಷ್ಟು ಭೂಮಿಯಿದ್ದು, ಸುಮಾರು 3 ಲಕ್ಷ ಎಕರೆ ಪ್ರದೇಶದಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಇವರಲ್ಲಿ ಶೇ.30ರಷ್ಟು ಮಂದಿ ದಲಿತರಾಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X