Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ದೇಶಗಳಿಂದ ಆಲಿವ್ ಎಣ್ಣೆ ತರುವವರು,...

ಗಲ್ಫ್ ದೇಶಗಳಿಂದ ಆಲಿವ್ ಎಣ್ಣೆ ತರುವವರು, ತರಲು ಹೇಳುವವರು ಮೊದಲು ಇದನ್ನೊಮ್ಮೆ ಓದಿಕೊಳ್ಳಿ !

ವಾರ್ತಾಭಾರತಿವಾರ್ತಾಭಾರತಿ24 Jun 2016 2:10 PM IST
share
ಗಲ್ಫ್ ದೇಶಗಳಿಂದ ಆಲಿವ್ ಎಣ್ಣೆ ತರುವವರು, ತರಲು ಹೇಳುವವರು ಮೊದಲು ಇದನ್ನೊಮ್ಮೆ ಓದಿಕೊಳ್ಳಿ !

ದುಬೈ,ಜೂ.24: ಗಲ್ಫ್ ದೇಶಗಳಿಂದ ಆಲಿವ್ ಎಣ್ಣೆ ತರುವವರು ಹಾಗೂ ಅಲ್ಲಿಂದ ಬರುವವರಲ್ಲಿ ಈ ಎಣ್ಣೆ ತರಲು ಹೇಳುವವರಿಗೆ ಇಲ್ಲೊಂದು ಎಚ್ಚರಿಕೆಯ ಪಾಠವಿದೆ.

ಇತ್ತೀಚೆಗೆ ಕರಾಮದಲ್ಲಿ ಉದ್ಯೋಗದಲ್ಲಿರುವ ಸಿದ್ಧೀಖ್ ಜಮಾಲ್ ಎಂಬ ಕೇರಳದ ತಿರುವನಂತಪುರಂ ಮೂಲದ ವ್ಯಕ್ತಿ ತಮ್ಮ ತವರೂರಿಗೆ ತೆರಳಲು ದುಬೈ ವಿಮಾನ ನಿಲ್ದಾಣದ ಎರಡನೆ ಟರ್ಮಿನಲ್‌ಗೆ ಬುಧವಾರ ರಾತ್ರಿ ಆಗಮಿಸಿದ್ದರು. ಅವರು ಏರ್ ಇಂಡಿಯಾ ವಿಮಾನವೊಂದರಲ್ಲಿ ಟಿಕೆಟ್‌ನ್ನು ಎಂಟು ತಿಂಗಳುಗಳ ಹಿಂದೆಯೇ ಕಾಯ್ದಿರಿಸಿದ್ದರು.

ಚೆಕ್-ಇನ್, ಸೆಕ್ಯುರಿಟಿ ತಪಾಸಣೆ ಮುಂತಾದವುಗಳನ್ನು ಮುಗಿಸಿ ಅವರು ಬೋರ್ಡಿಂಗ್ ಗೇಟ್ ಬಳಿ ಸಮಯಕ್ಕೆ ಸರಿಯಾಗಿ, ಅಂದರೆ ವಿಮಾನ ಹೊರಡಲು ಇನ್ನೂ 45 ನಿಮಿಷಗಳಿರುವಾಗಲೇ ಬಂದಿದ್ದರು. ಆಗ ಅಲ್ಲಿದ್ದ ಸಿಬ್ಬಂದಿಯೊಬ್ಬರು ಸಿದ್ಧೀಖ್ ಅವರ ಹೆಸರು ಕೇಳಿ ಅವರ ಬ್ಯಾಗಿನಲ್ಲಿ ಏನಿದೆಯೆಂದು ಕೇಳಿದರು. ಅದಕ್ಕೆ ಅವರು ಅದರಲ್ಲಿ ವಿಶೇಷವಾದುದೇನೂ ಇಲ್ಲವೆಂದು ಹೇಳಿದರೂ, ಆ ವಿಮಾನ ನಿಲ್ದಾಣದ ಸಿಬ್ಬಂದಿ ಅದರಲ್ಲಿ ಎಣ್ಣೆ ಏನಾದದೂ ಇದೆಯೇ ಎಂದು ಕೇಳಿದಾಗ ಸಿದ್ಧೀಖ್ ಅದರಲ್ಲಿ ನಾಲ್ಕು ಲೀಟರ್ ಆಲಿವ್ ಎಣ್ಣೆ ಇದೆಯೆಂದು ಹೇಳಿದರು.

ಅವರನ್ನು ಅಲ್ಲಿ ಅರ್ಧ ಗಂಟೆ ಕಾಯಿಸಿ ಬಳಿಕ ಸೆಕ್ಯುರಿಟಿ ಕೋಣೆಯೊಳಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವರು ಎಣ್ಣೆಯ ಬಾಟಲಿ ಹೊರತೆಗೆದು ಅದನ್ನು ಅಲ್ಲಿಯೇ ಬಿಟ್ಟು ಹೊರ ಬರುವಷ್ಟರಲ್ಲಿ ವಿಮಾನ ಹೊರಟಾಗಿತ್ತು.

ಅವರ ಈ ಸಮಸ್ಯೆಗೆ ಕಾರಣವಿದೆ. ದುಬೈ ವಿಮಾನದಲ್ಲಿ ಭದ್ರತಾ ತಪಾಸಣೆ ಗರಿಷ್ಠವಾಗಿದ್ದು ಸುರಕ್ಷಾ ಕಾರಣಗಳಿಗಾಗಿ ಇಷ್ಟೊಂದು ಪ್ರಮಾಣದ ಆಲಿವ್ ಎಣ್ಣೆಯನ್ನು ವಿಮಾನದಲ್ಲಿ ಪ್ರಯಾಣಿಸುವಾಗ ಕೊಂಡುಹೋಗಲು ಅನುಮತಿಯಿಲ್ಲವಾಗಿದೆ. ಈ ವಿಚಾರ ಹಲವರಿಗೆ ತಿಳಿಯದಾಗಿದ್ದು ಇಂತಹ ಸಮಸ್ಯೆಗಳನ್ನು ಪ್ರಯಾಣಿಕರು ಎದುರಿಸಿದ್ದು ಇದೇ ಮೊದಲ ಬಾರಿಯಲ್ಲ, ಎಂದು ನಿಲ್ದಾಣದ ಅಧಿಕಾರಿಗಳು ಹೇಳುತ್ತಾರೆ.

ಹೀಗೆ ತಮ್ಮ ವಿಮಾನ ತಪ್ಪಿ ಹೋದ ಕಾರಣ ಏರ್ ಇಂಡಿಯಾ ಅಧಿಕಾರಿಗಳು ಸಿದ್ಧೀಖ್ ಅವರಿಗೆ ಗುರುವಾರ ರಾತ್ರಿಯ ವಿಮಾನದಲ್ಲಿ ತಿರುವನಂತಪುರಂಗೆ ಪ್ರಯಾಣಿಸುವ ಅವಕಾಶವೊದಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X