Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನಿವೆಫ್‌ನಿಂದ ಇಫ್ತಾರ್ ಸ್ನೇಹ ಮಿಲನ

ಯುನಿವೆಫ್‌ನಿಂದ ಇಫ್ತಾರ್ ಸ್ನೇಹ ಮಿಲನ

ವಾರ್ತಾಭಾರತಿವಾರ್ತಾಭಾರತಿ24 Jun 2016 9:05 PM IST
share
ಯುನಿವೆಫ್‌ನಿಂದ ಇಫ್ತಾರ್ ಸ್ನೇಹ ಮಿಲನ

ಮಂಗಳೂರು, ಜೂ.23: ಯುನಿವೆಫ್ ಕರ್ನಾಟಕ ವತಿಯಿಂದ ನಗರದ ಕಂಕನಾಡಿಯ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಇಂದು ಸಂಜೆ ಇಫ್ತಾರ್ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು.

ಯುನಿವೆಫ್‌ನ ಅಧ್ಯಕ್ಷ ರಫೀವುದ್ದೀನ್ ಕುದ್ರೋಳಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಧರ್ಮೀಯರು ರಮಝಾನ್ ಕುರಿತ ಅಭಿಪ್ರಾಯ ಮಂಡಿಸಿದರು.

ದ.ಕ. ಜಿಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಪಿ.ಯು. ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ರೊಸಾರಿಯೊ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಅಲೋಶಿಯಸ್ ಡಿಸೋಜ ಮಾತನಾಡಿ, ಕ್ರೈಸ್ತ ಧರ್ಮದ ಸಹಿತ ಇತರ ಧರ್ಮೀಯರ ಉಪವಾಸದ ಕ್ರಮವನ್ನು ಹೋಲಿಸಿದರೆ ಮುಸ್ಲಿಮರ ಉಪವಾಸ ಕ್ರಮವು ವಿಶೇಷವಾಗಿದೆ. ಸೂರ್ಯೋದಯಕ್ಕಿಂತ ಮುಂಚಿನಿಂದ ಸೂರ್ಯಾಸ್ತದವರೆಗೆ ಅನ್ನ, ಪಾನೀಯಗಳನ್ನು ತ್ಯಜಿಸಿ ಮುಸ್ಲಿಮರು ಆಚರಿಸುವ ಉಪವಾಸ ಹಾಗೂ ಅದರೊಂದಿಗೆ ಪಾಲಿಸುವ ಶಿಸ್ತು ಹಾಗೂ ಧರ್ಮನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನನ್ನ ಜೀವನದಲ್ಲಿ ನಾನು ಧರ್ಮಕ್ಕಿಂತ ಹೆಚ್ಚು ಮಾನವೀಯತೆಗೆ ಒತ್ತು ನೀಡಿದವನು. ಆದ್ದರಿಂದ ಮಾನವೀಯತೆಯಿಂದ ಸಾಮಾಜಿಕ ಹಾಗೂ ಮಾನಸಿಕ ನೆಮ್ಮದಿ ಸಾಧ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಲ್ಕಿಯ ಸೈಂಟ್ ಆ್ಯನ್ಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ನ ಅಧ್ಯಕ್ಷ ಎರಿಕ್ ಸಿ.ಲೋಬೊ ಮಾತನಾಡಿ, ಸಮಾಜದಲ್ಲಿ ದ್ವೇಷದ ಭಾವನೆಗಳು ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ವಿವಿಧ ಧರ್ಮೀಯರನ್ನೊಳಗೊಂಡ ಕಾರ್ಯಕ್ರಮಗಳು ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತವೆ. ಆಯಾ ಧರ್ಮದ ಕಾರ್ಯಕ್ರಮವು ಆಯಾ ಧರ್ಮಕ್ಕೆ ಸೀಮಿತಗೊಳಿಸದೆ, ಇತರ ಧರ್ಮೀಯರನ್ನೂ ಆಹ್ವಾನ ನೀಡುವ ಮೂಲಕ ಇತರ ಧರ್ಮದ ಬಗೆಗಿನ ತಿಳುವಳಿಕೆ ನೀಡಬೇಕು ಎಂದರು.

ವೈದ್ಯರಾದ ರವೀಶ್ ತುಂಗ ಮಾತನಾಡಿ, ರಮಝಾನ್ ತಿಂಗಳ ವಿಶೇಷವೆಂದರೆ ಈ ತಿಂಗಳು ಇತರ ಧರ್ಮಗಳಂತೆ ವರ್ಷದಲ್ಲಿ ನಿರ್ದಿಷ್ಟ ತಿಂಗಳು ಅಥವಾ ಋತುವಿನಲ್ಲಿ ಬರುವುದಿಲ್ಲ. ರಮಝಾನ್ ಬೇರೆ ಬೇರೆ ತಿಂಗಳುಗಳಲ್ಲಿ ಬರುತ್ತದೆ. ಈ ಬಾರಿ ಮಳೆಗಾಲದಲ್ಲಿ ಬಂದರೆ, ಕೆಲವು ವರ್ಷಗಳ ಹಿಂದೆ ತೀವ್ರ ಬೇಸಿಗೆಯ ಕಾಲದಲ್ಲೂ ಆಗಮನವಾಗಿತ್ತು. ರಮಝಾನ್ ತಿಂಗಳ ಉಪವಾಸದ ಬಗ್ಗೆ ನಾನು ನನ್ನ ಆಪ್ತರಲ್ಲಿ ಹಾಗೂ ಸ್ನೇಹಿತರಲ್ಲಿ ಚರ್ಚಿಸಿ ಅದರಲ್ಲಿನ ಒಳ್ಳೆಯ ವಿಷಯಗಳನ್ನು ಸಂಗ್ರಹಿಸಿದ್ದೂ ಇದೆ ಎಂದರು.

ನೂತನ ಸಂಘಟನೆ ಅಸ್ತಿತ್ವಕ್ಕೆ

ಹಿಂದೂ, ಕ್ರೈಸ್ತರು ಹಾಗೂ ಮುಸ್ಲಿಮರನ್ನು ಒಳಗೊಂಡ ನೂತನ ಸಂಘಟನೆಯನ್ನು ಅಸ್ತಿತ್ವಕ್ಕೆ ತರುವ ಬಗ್ಗೆ ಯುನಿವೆಫ್‌ನ ಯೋಜನೆ ಇದೆ ಎಂದು ರಫೀವುದ್ದೀನ್ ಕುದ್ರೋಳಿ ಇದೇ ಸಂದರ್ಭದಲ್ಲಿ ಹೇಳಿದರು. ಮಾನವೀಯತೆಯ ವಿರುದ್ಧದ ವಾದಕ್ಕೆ ಉತ್ತರ ನೀಡುವಂತಾಗಲು ವಿವಿಧ ಧರ್ಮೀಯರನ್ನೊಳಗೊಂಡ ಈ ಸಂಘಟನೆಯನ್ನು ಪ್ರಬಲವಾಗಿ ಸ್ಥಾಪಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಉಳ್ಳಾಲ ಮೆರಿಡಿಯನ್ ಕಾಲೇಜಿನ ಪ್ರಾಂಶುಪಾಲ ಜೋಬಿ ಇ.ಸಿ., ನಗರದ ಬದ್ರಿಯಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಮುಹಮ್ಮದ್ ಇಕ್ಬಾಲ್, ಮಂಗಳೂರಿನ ಕೆರಿಯರ್ ಗೈಡೆನ್ಸ್ ಆ್ಯಂಡ್ ಇನ್ಫಾರ್ಮೇಶನ್ ಸೆಂಟರ್‌ನ ಅಧ್ಯಕ್ಷ ಉಮರ್ ಯು.ಎಚ್. ಮಾತನಾಡಿದರು.

ಯುನಿವೆಫ್‌ನ ದ.ಕ. ಜಿಲ್ಲಾಧ್ಯಕ್ಷ ಸೈಫುದ್ದೀನ್ ಕುದ್ರೋಳಿ ಸ್ವಾಗತಿಸಿದರು. ಕಾರ್ಯದರ್ಶಿ ಯು.ಕೆ. ಖಾಲಿದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X