Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿದೇಶ ಪ್ರವಾಸಕ್ಕೆ ತಂಡವನ್ನು...

ವಿದೇಶ ಪ್ರವಾಸಕ್ಕೆ ತಂಡವನ್ನು ಸಜ್ಜುಗೊಳಿಸುವುದು ಮೊದಲ ಆದ್ಯತೆ: ಅನಿಲ್ ಕುಂಬ್ಳೆ

ವಾರ್ತಾಭಾರತಿವಾರ್ತಾಭಾರತಿ24 Jun 2016 11:46 PM IST
share
ವಿದೇಶ ಪ್ರವಾಸಕ್ಕೆ ತಂಡವನ್ನು ಸಜ್ಜುಗೊಳಿಸುವುದು ಮೊದಲ ಆದ್ಯತೆ: ಅನಿಲ್ ಕುಂಬ್ಳೆ

 ಮುಂಬೈ, ಜೂ.24: ಭಾರತದ ಟೆಸ್ಟ್ ಕ್ರಿಕೆಟ್ ತಂಡ ಇತ್ತೀಚೆಗಿನ ವರ್ಷಗಳಲ್ಲಿ ವಿದೇಶಿ ನೆಲದಲ್ಲಿ ಉತ್ತಮ ಫಲಿತಾಂಶ ದಾಖಲಿಸಲು ವಿಫಲವಾಗುತ್ತಿದೆ. ತಂಡ ಆತ್ಮವಿಶ್ವಾಸದಿಂದ ವಿದೇಶ ಪ್ರವಾಸ ಕೈಗೊಳ್ಳುವಂತೆ ಮಾಡುವುದು ಗುರುವಾರ ಟೀಮ್ ಇಂಡಿಯಾದ ಕೋಚ್ ಆಗಿ ಆಯ್ಕೆಯಾಗಿರುವ ಅನಿಲ್ ಕುಂಬ್ಳೆಯವರ ಮೊದಲ ಆದ್ಯತೆಯಾಗಿದೆ.

ಭಾರತ ಕಂಡ ಅತ್ಯಂತ ಯಶಸ್ವಿ ಬೌಲರ್ ಆಗಿರುವ ಕುಂಬ್ಳೆ ಗುರುವಾರ ಒಂದು ವರ್ಷ ಅವಧಿಗೆ ಟೀಮ್ ಇಂಡಿಯಾದ ಪ್ರಮುಖ ಕೋಚ್ ಆಗಿ ಆಯ್ಕೆಯಾಗಿದ್ದಾರೆ. 45ರ ಹರೆಯದ ಕುಂಬ್ಳೆಗೆ ಕೋಚಿಂಗ್ ಅನುಭವದ ಕೊರತೆಯಿದ್ದರೂ ಬಿಸಿಸಿಐ ಅವರ ಮೇಲೆ ಭಾರೀ ವಿಶ್ವಾಸ ಇರಿಸಿ ದೊಡ್ಡ ಜವಾಬ್ದಾರಿ ನೀಡಿದೆ.

ಬಿಸಿಸಿಐ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಿದಾಗ 57 ಅರ್ಜಿಗಳು ಸಲ್ಲಿಕೆಯಾಗಿದ್ದವು. ಮಾಜಿ ನಾಯಕರುಗಳಾದ ಸಚಿನ್ ತೆಂಡುಲ್ಕರ್, ಸೌರವ್ ಗಂಗುಲಿ ಹಾಗೂ ಮಾಜಿ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಕುಂಬ್ಳೆ ಹೆಸರನ್ನು ಬಿಸಿಸಿಐಗೆ ಶಿಫಾರಸು ಮಾಡಿತ್ತು. ಐಪಿಎಲ್ ಟ್ವೆಂಟಿ-20 ಟೂರ್ನಮೆಂಟ್‌ನಲ್ಲಿ ಮುಂಬೈ ಹಾಗೂ ಬೆಂಗಳೂರು ತಂಡಗಳಿಗೆ ಕುಂಬ್ಳೆ ಮೆಂಟರ್(ಸಲಹೆಗಾರ) ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲಿ ಅವರಿಗೆ ಕೋಚಿಂಗ್ ನೀಡಲು ಹೆಚ್ಚು ಅವಕಾಶವಿರಲಿಲ್ಲ.

‘‘ನಾನು ಮೊದಲ ಬಾರಿ ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಹಾಜರಾಗಿರುವುದು ತುಂಬಾ ಭಿನ್ನ ಅನುಭವ ನೀಡಿತು. ನನ್ನ ವೃತ್ತಿಜೀವನದುದ್ದಕ್ಕೂ ನನ್ನೊಂದಿಗೆ ಆಡಿರುವ ಸಹೋದ್ಯೋಗಿಗಳು ಟೇಬಲ್‌ನ ಮತ್ತೊಂದು ಕಡೆಯಲ್ಲಿದ್ದರು. ನನಗೆ ತುಂಬಾ ಅಚ್ಚರಿಯ ಜೊತೆಗೆ ಒತ್ತಡ ಉಂಟಾಗಿತ್ತು’’ ಎಂದು ಇತ್ತೀಚೆಗೆ ಕೋಚ್ ಹುದ್ದೆಗಾಗಿ ನಡೆದ ಸಂದರ್ಶನದ ಬಗ್ಗೆ ಕುಂಬ್ಳೆ ಹೇಳಿದರು.

ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ವಿದೇಶದಲ್ಲಿ ಕಳಪೆ ದಾಖಲೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಂಬ್ಳೆ, ‘‘ನಮ್ಮ ತಂಡದ ವಿದೇಶದ ದಾಖಲೆಯ ಬಗ್ಗೆ ಹೆಚ್ಚಿನ ಗಮನ ನೀಡಲಾಗುವುದು. ಇದೀಗಲೇ ಆ ನಿಟ್ಟಿಯಲ್ಲಿ ಕಾರ್ಯಪ್ರವೃತ್ತವಾಗಬೇಕಾಗಿದೆ. ಭಾರತ ತಂಡ ವೆಸ್ಟ್‌ಇಂಡೀಸ್‌ಗೆ ಪ್ರವಾಸ ಕೈಗೊಳ್ಳುವ ಮೊದಲು ಬೆಂಗಳೂರಿನಲ್ಲಿ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ವೆಸ್ಟ್‌ಇಂಡೀಸ್ ಸರಣಿಗೆ ತೆರಳುವ ಮೊದಲು ಕುಳಿತು ಚರ್ಚೆ ನಡೆಸಲಿದ್ದೇವೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಪಂದ್ಯವನ್ನು ಜಯಿಸಬೇಕಾದರೆ 20 ವಿಕೆಟ್‌ಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ನಮಗೆ ಗಮನವಿರಲಿದೆ’’ ಎಂದರು.

‘‘ನಾನು ಹಿನ್ನೆಲೆಯಲ್ಲಿ ನಿಂತು ಕೆಲಸ ಮಾಡುವೆ. ಆ ಮೂಲಕ ಮೈದಾನದ ಒಳಗೆ ಹಾಗೂ ಹೊರಗೆ ನಾಯಕನಿಗಿರುವ ಒತ್ತಡವನ್ನು ಕಡಿಮೆ ಮಾಡಲು ಬಯಸಿದ್ದೇನೆ. ಈ ತಂಡ ಬಲಿಷ್ಠವಾಗಿದೆ ಎಂದು ನಾನು ನಂಬಿದ್ದೇನೆ. ಇದೊಂದು ಯುವ ತಂಡ. ತಂಡವನ್ನು ಯುವ ನಾಯಕ ಮುನ್ನಡೆಸುತ್ತಿದ್ದಾನೆ. ವಿರಾಟ್ ಕೊಹ್ಲಿ ಅವರೊಂದಿಗೆ ಕೆಲಸ ಮಾಡಲು ಸಂತೋಷವಾಗುತ್ತಿದೆ’’ ಎಂದು 132 ಟೆಸ್ಟ್‌ನಲ್ಲಿ 619 ವಿಕೆಟ್ ಹಾಗೂ 271 ಏಕದಿನಗಳಲಿ 337 ವಿಕೆಟ್‌ಗಳನ್ನು ಪಡೆದಿದ್ದ ಮಾಜಿ ಲೆಗ್-ಸ್ಪಿನ್ನರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X