Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇನ್ನು ಮುಂದೆ ರಣಜಿ ಟ್ರೋಫಿ ಪಂದ್ಯಗಳು...

ಇನ್ನು ಮುಂದೆ ರಣಜಿ ಟ್ರೋಫಿ ಪಂದ್ಯಗಳು ತಟಸ್ಥ ತಾಣದಲ್ಲಿ

ಬಿಸಿಸಿಐ ಕಾರ್ಯಕಾರಿಣಿ ಸಭೆ ಕ್ರಾಂತಿಕಾರಿ ಹೆಜ್ಜೆ

ವಾರ್ತಾಭಾರತಿವಾರ್ತಾಭಾರತಿ24 Jun 2016 11:52 PM IST
share
ಇನ್ನು ಮುಂದೆ ರಣಜಿ ಟ್ರೋಫಿ ಪಂದ್ಯಗಳು ತಟಸ್ಥ ತಾಣದಲ್ಲಿ

ಹೊಸದಿಲ್ಲಿ, ಜೂ.24: ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ಬಿಸಿಸಿಐನ ಕಾರ್ಯಕಾರಿಣಿ ಸಮಿತಿ ಮುಂಬರುವ ಎಲ್ಲ ರಣಜಿ ಪಂದ್ಯಗಳನ್ನು ತಟಸ್ಥ ತಾಣಗಳಲ್ಲಿ ನಡೆಸುವ ಕುರಿತಂತೆ ತಾಂತ್ರಿಕ ಸಮಿತಿ ಇಟ್ಟಿರುವ ಪ್ರಸ್ತಾವನೆಗೆ ಮಾನ್ಯತೆ ನೀಡಿದೆ.

ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಶುಕ್ರವಾರ ಧರ್ಮಶಾಲಾದಲ್ಲಿ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ.

 ಕಳೆದ ತಿಂಗಳು ಸೌರವ್ ಗಂಗುಲಿ ನೇತೃತ್ವದ ಸಮಿತಿ ಮಾಡಿರುವ ಶಿಫಾಸರನ್ನು ಕೆಲವು ಅಸೋಸಿಯೇಶನ್‌ಗಳು ವಿರೋಧಿಸುವೆ ಎಂದು ವರದಿಯಾಗಿತ್ತು. ಕಳೆದ ಋತುವಿನಲ್ಲಿ ಹೆಚ್ಚಿನ ರಣಜಿ ಪಂದ್ಯಗಳು ಮೂರು ಇಲ್ಲವೇ ಎರಡೇ ದಿನಗಳಲ್ಲಿ ಕೊನೆಗೊಂಡಿದ್ದ ಹಿನ್ನೆಲೆಯಲ್ಲಿ ರಣಜಿ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸುವ ಕುರಿತಂತೆ ಚಿಂತನೆ ನಡೆಸಲಾಗಿದೆ.

ರಣಜಿ ಪಂದ್ಯಗಳನ್ನು ಬೇಗನೆ ಕೊನೆಗೊಳ್ಳುವುದರಿಂದ ರಣಜಿ ಟ್ರೋಫಿಯ ಗುಣಮಟ್ಟಕ್ಕೆ ಹಾನಿಯಾಗಲಿದೆ. ಇಂತಹ ಪಿಚ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟಿಗರು ರೂಪುಗೊಳ್ಳಲಾರರು ಎಂದು ಸಮಿತಿ ಮನಗಂಡಿದೆ.

ರಣಜಿ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಸ್ಥಳಾಂತರಿಸಬೇಕೆಂದು ಕಳೆದ ವರ್ಷ ಹರ್ಭಜನ್ ಸಿಂಗ್ ಮೊದಲ ಬಾರಿ ಸಲಹೆ ನೀಡಿದ್ದರು. ಈ ಸಲಹೆಗೆ ಗಂಗುಲಿ ಹಾಗೂ ಠಾಕೂರ್ ಬೆಂಬಲ ವ್ಯಕ್ತಪಡಿಸಿದ್ದರು. 2016-17ರ ಸಾಲಿನ ರಣಜಿ ಟ್ರೋಫಿ ಋತುವಿನ ದಿನಾಂಕ ಹಾಗೂ ಸ್ಥಳಗಳನ್ನು ಅತೀ ಶೀಘ್ರವೇ ಘೋಷಿಸಲಾಗುತ್ತದೆ.

ಮುಶ್ತಾಕ್ ಅಲಿ ಟ್ರೋಫಿಯ ಬದಲಿಗೆ ನೂತನ ಲೀಗ್:

ಭಾರತದ ಪ್ರಮುಖ ದೇಶೀಯ ಟ್ವೆಂಟಿ-20 ಟೂರ್ನಮೆಂಟ್ ಸೈಯದ್ ಮುಶ್ತಾಕ್ ಅಲಿ ಟ್ರೋಫಿಯ ಬದಲಿಗೆ ನೂತನ ಲೀಗ್ ಆರಂಭಿಸುವ ಕುರಿತಂತೆ ಬಿಸಿಸಿಐ ಶುಕ್ರವಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ನೂತನ ಲೀಗ್‌ನಲ್ಲಿ ಎಲ್ಲ ರಾಜ್ಯ ತಂಡಗಳು ಸಂಬಂಧಿತ ವಲಯಗಳಲ್ಲಿ ಅಂತರ್-ವಲಯ ಲೀಗ್‌ನಲ್ಲಿ ಆಡಲಿವೆ. ಆ ಬಳಿಕ ಎಲ್ಲ ಐದು ವಲಯಗಳು ಅಂತರ್-ವಲಯ ಲೀಗ್ ಆಡಲು ವಲಯ ತಂಡವನ್ನು ಆಯ್ಕೆ ಮಾಡಲಿವೆ. ಬಿಸಿಸಿಐ ತಾಂತ್ರಿಕ ಸಮಿತಿಯು ದುಲೀಪ್ ಟ್ರೋಫಿಯಲ್ಲಿ ವಲಯವಾರು ಪದ್ಧತಿಯನ್ನು ತೆಗೆದುಹಾಕುವಂತೆ ಸಲಹೆ ನೀಡಿದ್ದವು. ಅದರ ಬದಲಿಗೆ ನಾಲ್ಕು ಅಖಿಲ-ಭಾರತ ಮಟ್ಟದ ತಂಡಗಳನ್ನು ರಾಷ್ಟ್ರೀಯ ಆಯ್ಕೆಗಾರರು ಆಯ್ಕೆ ಮಾಡಲಿದ್ದಾರೆ ಎಂದು ಹೇಳಿತ್ತು. ಆದರೆ, ತಾಂತ್ರಿಕ ಸಮಿತಿಯ ಈ ಸಲಹೆಯನ್ನು ಕಾರ್ಯಕಾರಿಣಿ ಸಮಿತಿಯು ಮಾನ್ಯ ಮಾಡಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X