Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪೋಷಕರ ಬಗ್ಗೆಯೂ ಕರುಣೆಯಿರಲಿ

ಪೋಷಕರ ಬಗ್ಗೆಯೂ ಕರುಣೆಯಿರಲಿ

ಪ್ರಭಾಕರ ಎನ್., ಮಂಗಳೂರುಪ್ರಭಾಕರ ಎನ್., ಮಂಗಳೂರು24 Jun 2016 11:59 PM IST
share

ಮಾನ್ಯರೆ,
ಮೊನ್ನೆ ಕುಂದಾಪುರ ತ್ರಾಸಿಯಲ್ಲಿ ನಡೆದ ಭೀಕರ ಅವಘಡದಿಂದಾಗಿ ಎಳೆಯ ಕಂದಮ್ಮಗಳನ್ನು ಕಳೆದುಕೊಂಡಿರುವ ಸುದ್ದಿ ನೋವು ತರುವ ವಿಷಯವಾಗಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋದ ವಾಹನದಲ್ಲಿ ಮಕ್ಕಳ ಸಂಖ್ಯೆ ಮಿತಿಮೀರಿತ್ತು ಮತ್ತು ಅವಸರದ ಚಾಲನೆಯೂ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

 ಹೀಗಾಗಿ ಈಗ ಉಭಯ ಜಿಲ್ಲೆಯಾದ್ಯಂತ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ರಿಕ್ಷಾ, ಒಮ್ನಿ ಮುಂತಾದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಹಾಗಾಗಿ ಇಂತಹ ವಾಹನ ಚಾಲಕರು ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ಮೊನ್ನೆಯಿಂದ ಹಠಾತ್ ನಿಲ್ಲಿಸಿದ್ದಾರೆ. ಕೆಲವರಂತೂ ಮಕ್ಕಳ ಪೋಷಕರಿಗೆ ಯಾವುದೇ ಸೂಚನೆ ಕೊಡದೆ ಬರುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ಕೆಲವು ಮಕ್ಕಳು ಪರ್ಯಾಯ ವ್ಯವಸ್ಥೆಯಿಲ್ಲದೆ ಅನಿವಾರ್ಯವಾಗಿ ಶಾಲೆಗೆ ಗೈರುಹಾಜರಾಗಬೇಕಾಗಿದೆ. ಮಕ್ಕಳ ತಿಂಗಳ ಶಾಲಾವಾಹನಗಳ ಖರ್ಚು ಇಂತಿಷ್ಟೆಂದು ತಮ್ಮ ಬಜೆಟ್‌ನಲ್ಲಿ ಎತ್ತಿಟ್ಟು, ಒಂದು ವ್ಯವಸ್ಥೆಗೆ ಒಗ್ಗಿಕೊಂಡಿದ್ದ ಪೋಷಕರು ಇಂತಹ ದಿಢೀರ್ ಬೆಳವಣಿಗೆಯಿಂದ ಕಂಗೆಡುವಂತಾಗಿದೆ. ಮಕ್ಕಳ ಸುರಕ್ಷತೆಯ ಬಗ್ಗೆ ಉಭಯ ಜಿಲ್ಲಾಡಳಿತಗಳ ಕ್ರಮ ಸರಿಯಾದುದೆ. ಆದರೆ ಇಂತಹ ಕ್ರಮಗಳಿಗೆ ಬಲಿಯಾಗುವ ಮಕ್ಕಳ ಪೋಷಕರ ಬಗ್ಗೆಯೂ ಚಿಂತನೆ ನಡೆಸಬೇಕಾಗಿದೆ. ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ಸ್ವಂತ ವ್ಯವಸ್ಥೆ ಇಲ್ಲದೆ ಇಂತಹ ವಾಹನಗಳನ್ನು ತಮ್ಮ ಹಣದ ಮಿತಿಗಾಗಿ ಅವಲಂಬಿಸಬೇಕಾದ ಬಡ ಪೋಷಕರನ್ನು ವಾಹನಿಗರು ಇನ್ನು ತಾವು ಕರೆದುಕೊಂಡು ಹೋಗುವ ಸಂಖ್ಯೆಗನುಗುಣವಾಗಿ ದುಬಾರಿ ಶುಲ್ಕ ವಸೂಲಿ ಮಾಡಲಾರಂಭಿಸಿದರೆ ಈ ಹೊರೆಯನ್ನು ಭರಿಸಲು ಬಡಪೋಷಕರಿಂದ ಸಾಧ್ಯವೇ?
 

share
ಪ್ರಭಾಕರ ಎನ್., ಮಂಗಳೂರು
ಪ್ರಭಾಕರ ಎನ್., ಮಂಗಳೂರು
Next Story
X