Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂವಿಧಾನಬದ್ಧವಾಗಿ ಕೆಲಸ ಮಾಡದಿದ್ದರೆ...

ಸಂವಿಧಾನಬದ್ಧವಾಗಿ ಕೆಲಸ ಮಾಡದಿದ್ದರೆ ಸೂಕ್ತ ಕ್ರಮ

ದಿಲ್ಲಿ ಸರಕಾರಕ್ಕೆ ಕೇಂದ್ರದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Jun 2016 12:09 AM IST
share

ಹೊಸದಿಲ್ಲಿ, ಜೂ.24: ದಿಲ್ಲಿ ವಿಧಾನಸಭೆಯ ಆರೋಪಿತ ಹಗರಣಗಳ ಕುರಿತು ಪ್ರಶ್ನಿಸುವುದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ನಝೀಬ್ ಜಂಗ್‌ರಿಗೆ ಸಮನ್ಸ್ ಕಳುಹಿಸಿದ ಒಂದು ದಿನದ ಬಳಿಕ, ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯಾಚರಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದೆಂದು ಕೇಂದ್ರ ಸರಕಾರವು ಎಎಪಿ ಸರಕಾರಕ್ಕೆ ತೀಕ್ಷ್ಣ ಎಚ್ಚರಿಕೆ ನೀಡಿದೆ.

ದಿಲ್ಲಿಯು ದೇಶದ ರಾಜಧಾನಿಯೆಂಬುದನ್ನು ಯಾರೂ ಮರೆಯಬಾರದು. ಪ್ರತಿಯೊಬ್ಬನೂ ಸಂವಿಧಾನದ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಯಾರಾದರೂ ಈ ಮಿತಿಯನ್ನು ಮೀರಿದರೆ, ಅವರ ವಿರುದ್ಧ ಸಂವಿಧಾನದ ಪ್ರಸ್ತಾವಗಳನ್ವಯ ಕ್ರಮ ಕೈಗೊಳ್ಳಬೇಕಾಗುತ್ತದೆಂದು ಕೇಂದ್ರ ಗೃಹ ಸಹಾಯಕ ಸಚಿವ ಕಿರೇನ್ ರಿಜಿಜು ಪತ್ರಕರ್ತರಿಗಿಲ್ಲಿ ತಿಳಿಸಿದರು.

ಶೀಲಾ ದೀಕ್ಷಿತ್ ಸರಕಾರದ ಆಡಳಿತದ ವೇಳೆ ನಡೆದಿದ್ದ ಅವ್ಯವಹಾರದ 4 ಪ್ರಕರಣಗಳ ಸಂಬಂಧ ‘ಪ್ರಶ್ನಿಸುವುದಕ್ಕಾಗಿ’ ಸದನಕ್ಕೆ ಬರುವಂತೆ ಲೆಫ್ಟಿನೆಂಟ್ ಗವರ್ನರ್‌ಗೆ ದಿಲ್ಲಿ ವಿಧಾನಸಭೆಯ ಉಪಾಧ್ಯಕ್ಷೆ ರಾಖಿ ಬಿರ್ಲಾ ಸಮನ್ಸ್ ಕಳುಹಿಸಿರುವ ಕುರಿತಾದ ಪ್ರಶ್ನೆಗೆ ಅವರುತ್ತರಿಸುತ್ತಿದ್ದರು.

ಲೆಫ್ಟಿನೆಂಟ್ ಗವರ್ನರ್‌ರನ್ನು ಸೇರಿಸುವ ಮೂಲಕ ಅರವಿಂದ ಕೇಜ್ರಿವಾಲ್ ಸರಕಾರವು ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆಯೆಂದು ರಿಜಿಜು ಆರೋಪಿಸಿದರು.

ದಿಲ್ಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವ ಬಗ್ಗೆ ಜನಮತಗಣನೆ ನಡೆಯಬೇಕೆಂಬ ಎಎಪಿಯ ಬೇಡಿಕೆಯ ಬಗ್ಗೆ ಕೇಳಿದಾಗ, ನಗರದ ಸರಕಾರವು ಬ್ರೆಕ್ಸಿಟ್ ಜನಮತ ಗಣನೆಯಿಂದ ಸ್ಫೂರ್ತಿ ಪಡೆದಂತಿದೆಯೆಂದು ಅವರು ಹೇಳಿದರು.

ಜನಸಾಮಾನ್ಯರ ದೂರುಗಳನ್ನು ಪರಿಶೀಲಿಸುವ ವಿಧಾನಸಭೆಯ ದೂರು ಸಮಿತಿಯಿಂದ ಜಂಗ್ ಹಾಗೂ ದಿಲ್ಲಿ ಭ್ರಷ್ಟಾಚಾರ ವಿರೋಧಿ ದಳದ(ಎಸಿಬಿ) ಮುಖ್ಯಸ್ಥ ಎಂ.ಕೆ. ಮೀನಾರಿಗೆ ಸಮನ್ಸ್ ಕಳುಹಿಸಲಾಗುವುದೆಂದು ಬಿರ್ಲಾ ತಿಳಿಸಿದ್ದರು.

ಲೆಫ್ಟಿನೆಂಟ್ ಗವರ್ನರ್‌ಗೆ ಸಮನ್ಸ್ ನೀಡುವ ಅಧಿಕಾರ ಸಮಿತಿಗಿದೆ. ಮೊದಲ ಎಎಪಿ ಸರಕಾರವು ತನ್ನ 49 ದಿನಗಳ ಅವಧಿಯಲ್ಲಿ ದಾಖಲಿಸಿದ್ದ 4 ಎಫ್‌ಐಆರ್‌ಗಳ ಬಗ್ಗೆ ಏಕೆ ಕ್ರಮ ಕೈಗೊಳ್ಳಲಿಲ್ಲವೆಂದು ಅವರು ತಿಳಿಸಬೇಕೆಂದು ಸಮಿತಿಯ ಅಧ್ಯಕ್ಷೆಯೂ ಆಗಿರುವ ಬಿರ್ಲಾ ನಿನ್ನೆ ಪತ್ರಕರ್ತರೊಡನೆ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X