Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾದಕ ದ್ರವ್ಯ ವ್ಯಸನ ಮುಕ್ತಗೊಳಿಸುವುದು...

ಮಾದಕ ದ್ರವ್ಯ ವ್ಯಸನ ಮುಕ್ತಗೊಳಿಸುವುದು ಸಾಮಾಜಿಕ ಹೊಣೆಗಾರಿಕೆ: ಡಾ.ಸಂಜೀವ ಎಂ.ಪಾಟೀಲ್

ವಿಕಾಸ್ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Jun 2016 5:36 PM IST
share
ಮಾದಕ ದ್ರವ್ಯ ವ್ಯಸನ ಮುಕ್ತಗೊಳಿಸುವುದು ಸಾಮಾಜಿಕ ಹೊಣೆಗಾರಿಕೆ: ಡಾ.ಸಂಜೀವ ಎಂ.ಪಾಟೀಲ್

ಮಂಗಳೂರು, ಜೂ.25: ಮಾದಕದ್ರವ್ಯ ವ್ಯಸನ ತಡೆಗಟ್ಟಲು ಸಮಾಜದ ವಿವಿಧ ಸ್ತರಗಳ ಜನರು ಇದೊಂದು ಸಾಮಾಜಿಕ ಹೊಣೆಗಾರಿಕೆಯೆಂದು ಭಾವಿಸಿ ಒಂದಾಗಿ ಕೈ ಜೋಡಿಸಿದಾಗ ಈ ನಿಟ್ಟಿನಲ್ಲಿ ಯಶಸ್ಸು ಗಳಿಸಬಹುದು ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಡಾ.ಸಂಜೀವ ಎಂ.ಪಾಟೀಲ್ ತಿಳಿಸಿದ್ದಾರೆ.

ಅವರು ಇಂದು ನಗರದ ನಗರದ ವಿಕಾಸ್ ಕಾಲೇಜ್ ಸಭಾಂಗಣದಲ್ಲಿ ಕಾಲೇಜ್ ವತಿಯಿಂದ ಹಮ್ಮಿ ಕೊಂಡ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಮಾದಕ ವ್ಯಸನಕ್ಕೆ ಮಕ್ಕಳು ತುತ್ತಾಗದಂತೆ ಇರಬೇಕಾದರೆ ಪೋಷಕರು, ಶಾಲೆ, ಕಾಲೇಜುಗಳಲ್ಲಿ ಶಿಕ್ಷಕರು ಹೆಚ್ಚಿನ ಪಾತ್ರ ವಹಿಸಬೇಕಾಗುತ್ತದೆ.ವಿದ್ಯಾರ್ಥಿಗಳಿಗೆ ಹದಿಹರಯದಲ್ಲಿ ಮಾನಸಿಕ, ದೈಹಿಕ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕಾಗುತ್ತದೆ.ಅವರ ಬದುಕಿನಲ್ಲಿ ಸೋಲು, ವೈಫಲ್ಯದ ಸಂದರ್ಭದಲ್ಲಿ ಅವರ ಮೇಲಿನ ಒತ್ತಡ ನಿವಾರಣೆಗೆ ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ಆಗಬೇಕಾಗಿದೆ ಎಂದು ಸಂಜೀವ ಎಂ.ಪಾಟೀಲ್ ತಿಳಿಸಿದರು. 

ಸಮಾಜದಲ್ಲಿ ಮಾದಕ ವ್ಯಸನವನ್ನು ಹೋಗಲಾಡಿಸುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.ಸಮಾಜದಲ್ಲಿ ನಮ್ಮ ಕುಟುಂಬದ ಸದಸ್ಯರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ತಡೆಯುವುದರ ಜೊತೆಗೆ ಇತರರು ಈ ಚಟಕ್ಕೆ ಬಲಿ ಬೀಳದಂತೆ ಮಾಡುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಕಾಲೇಜಿನ ಆಡಳಿತ ಸಮಿತಿಯ ಅಧ್ಯಕ್ಷ ಕೃಷ್ಣ ಜೆ.ಪಾಲೆಮಾರ್ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲಿ ಮಾದಕ ವ್ಯಸನದ ಅಭ್ಯಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹತ್ತನೆ ತರಗತಿಯ ನಂತರ ಕಡ್ಡಾಯವಾಗಿ ವಿದ್ಯಾರ್ಥಿಗಳನ್ನು ಡ್ರಗ್ ಟೆಸ್ಟ್‌ಗೆ ಒಳಪಡಿಸಬೇಕು.ಇದೊಂದು ಶಿಕ್ಷೆಯೆಂದು ವಿದ್ಯಾರ್ಥಿಗಳು ಭಾವಿಸಬಾರದು ಶಾಲೆ, ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತಗೊಳಿಸಲು ಈ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಪಾಲೆಮಾರ್ ತಿಳಿಸಿದರು.

ಮಾದಕ ದ್ರವ್ಯ ಸೇವನೆ ಚಟ ವಿಸ್ತಾರವಾಗದಂತೆ ತಡೆಯಲು ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ:-ಮಾದಕ ದ್ರವ್ಯ ಸೇವನೆಯ ಚಟ ನಮ್ಮ ಸಮಾಜದಲ್ಲಿ ವಿಸ್ತಾರವಾಗದಂತೆ ತಡೆಯಲು ಪರ್ಯಾಯವಾಗಿ ನಾವು ನಮ್ಮನ್ನು ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯೆನೆಪೋಯ ವಿಶ್ವ ವಿದ್ಯಾನಿಲಯದ ಪ್ರೊ.ಡಾ ಸುಧೀಂದ್ರ ಪ್ರಭು ತಿಳಿಸಿದರು.

ಪ್ರಸಕ್ತ ಕರ್ನಾಟಕ ರಾಜ್ಯದ ರಾಜಧಾನಿಯೂ ಮಾದಕ ದ್ರವ್ಯಗಳ ಚಟುವಟಿಕೆಯ ಕೇಂದ್ರವಾಗುತ್ತಿರುವುದು, ವಿವಿಧ ನಗರಗಳಲ್ಲಿ ಮಾದಕ ವ್ಯಸನದ ಜಾಲ ವಿಸ್ತಾರವಾಗುತ್ತಿರುವ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ. ಡ್ರಗ್ಸ್ ಮಾಫಿಯಾದ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಮೂಹಿಕ ಪ್ರಯತ್ನ ಸಾಗಬೇಕಾಗಿದೆ. ಪ್ರಸಕ್ತ ವೇಗದ ಬದುಕಿನಲ್ಲಿ ಒತ್ತಡವೂ ಹೆಚ್ಚುತ್ತಿದೆ. ಈ ಒತ್ತಡ ನಿವಾರಣೆಗೆ ಕೆಲವರು ಮಾದಕ ವ್ಯಸನಿಗಳಾಗುತ್ತಾರೆ ಎನ್ನುವ ಅಭಿಪ್ರಾಯವಿದೆ. ಸಮಾಜದಲ್ಲಿ ಒತ್ತಡ ನಿವಾರಣೆಗೆ ಈ ರೀತಿಯ ತಪ್ಪು ಹಾದಿಗಳಲ್ಲಿ ಸಾಗಲು ಪ್ರೇರೇಪಣೆ ನೀಡುವವರ ಬಗ್ಗೆ ಗಮನಹರಿಸಬೇಕಾಗಿದೆ.

ನಮ್ಮ ಸಂಸ್ಕೃತಿಯಲ್ಲಿ ಒತ್ತಡ ನಿವಾರಣೆಗೆ ಯೋಗ ಧ್ಯಾನದಂತಹ ವಿವಿಧ ಮಾರ್ಗಗಳಿವೆ. ತಂಬಾಕು ಸೇವನೆ, ಬೀಡಿ, ಸಿಗರೇಟು ಸೇವನೆಯಂತಹ ಚಟುವಟಿಕೆಗಳ ಮೂಲಕ ಮಾದಕ ದ್ರವ್ಯ ಸೇವನೆಯ ಚಟವೂ ಹಂತ ಹಂತವಾಗಿ ಬೆಳೆಯಲು ಕಾರಣವಾಗುತ್ತವೆ. ಜಗತ್ತಿನಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಬಾಯಿ, ಮುಖಾಂಗದ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ. ಮಾದಕ ದ್ರವ್ಯದ ಚಟವನ್ನು ಅಂಟಿಸಿಕೊಂಡವರು ಅದರಿಂದ ಹೊರಬರಲಾಗದೆ ಹೋದರೆ ಅವರ ಬದುಕು ಅಕಾಲಿಕ ಮರಣದಲ್ಲಿ ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚುತ್ತಿವೆ. ವಿವಿಧ ಕಾರಣಗಳಿಂದ ಮಾದಕ ದ್ರವ್ಯ ವ್ಯಸನಕ್ಕೆ ತುತ್ತಾಗುವವರನ್ನು ಸೂಕ್ತ ವೃತ್ತಿಪರ ಸಮಾಲೋಚಕರ, ಚಿಕಿತ್ಸಕರ ಸಹಾಯದಿಂದ ವ್ಯಸನ ಮುಕ್ತರಾಗುವಂತೆ ಮಾಡಬಹುದು ಎಂದು ಡಾ.ಸುಧೀಂದ್ರ ಪ್ರಭು ತಿಳಿಸಿದರು.

ಸಮಾರಂಭದಲ್ಲಿ ವಿಕಾಸ ಕಾಲೇಜಿನ ಸಲಹೆಗಾರ ಅನಂತ ಪ್ರಭು, ಪ್ರಾಂಶುಪಾಲ ಡಾ.ವೆಂಕಟ ರಾಯಡು, ಉಪ ಪ್ರಾಂಶುಪಾಲೆ ಮೋಹನ ಆರ್.ಮೊದಲಾದವರು ಉಪಸ್ಥಿತರಿದ್ದರು. ವಿಕಾಸ ಕಾಲೇಜಿನ ಉಪನ್ಯಾಸಕಿ ಶುೃತಿ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ವಲ್ ಸನಿಲ್ ಸ್ವಾಗತಿಸಿದರು. ವೈಶಾಲಿ ವಂದಿಸಿದರು. 

ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಿವಿಧ ಸ್ಫರ್ಧೆಯ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಮೈಮ್ ಶೋ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X