Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಳವುಗೈದ ಬೈಕ್ ಮಾರಾಟ ಪ್ರಕರಣ:...

ಕಳವುಗೈದ ಬೈಕ್ ಮಾರಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ವಾರ್ತಾಭಾರತಿವಾರ್ತಾಭಾರತಿ25 Jun 2016 6:40 PM IST
share
ಕಳವುಗೈದ ಬೈಕ್ ಮಾರಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ಪುತ್ತೂರು, ಜೂ.25: ಬೈಕನ್ನು ಕಳವುಗೈದು ಮಾರಾಟ ಮಾಡಲೆಂದು ತೆರಳುತ್ತಿದ್ದ ವೇಳೆ ಪುತ್ತೂರು ನಗರ ಪೊಲೀಸರ ಕೈಗೆ ಸಿಕ್ಕಿ ಬಿದ್ದು, ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

ಪುತ್ತೂರು ನಗರದ ಸಾಮೆತ್ತಡ್ಕ ನಿವಾಸಿ ಕರುಣಾಕರ್ ಅವರ ಪುತ್ರ ಪ್ರಸಾದ್ (23) ಮತ್ತು ಪುತ್ತೂರು ನಗರದ ಹೊರವಲಯದ ಪಡೀಲಿನ ಅಣ್ಣು ನಾಯ್ಕ ಕಾಂಪೌಂಡ್ ನಿವಾಸಿ ವಸಂತ ಅವರ ಪುತ್ರ ಕಾರ್ತಿಕ್ (23) ಆರೋಪಿಗಳು.

ಕಳೆದ ಗುರುವಾರ ನಸುಕಿನ ವೇಳೆ ಪುತ್ತೂರು ನಗರ ಠಾಣೆಯ ಎಸೈ ಅಬ್ದುಲ್ ಖಾದರ್ ಮತ್ತು ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಪುತ್ತೂರಿನ ಜೈನ ಭವನದ ಬಳಿಯ ರಸ್ತೆಯಾಗಿ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಪೊಲೀಸರನ್ನು ಕಂಡು ಅಲ್ಲೇ ಬೈಕ್ ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದರು. ಪೊಲೀಸರು ಬೆನ್ನಟ್ಟಿ ಅವರಿಬ್ಬರನ್ನು ಹಿಡಿದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದ ವೇಳೆ ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕುಂಜಾರು ದೇವಸ್ಥಾನದ ಬಳಿ ನಿಲ್ಲಿಸಲಾಗಿದ್ದ ಬೈಕೊಂದನ್ನು ಕಳವುಗೈದಿರುವ ವಿಚಾರವನ್ನು ಬಾಯ್ಬಿಟ್ಟಿದ್ದರು. ಅಲ್ಲದೆ ಈ ಬೈಕನ್ನು ತಾವೀಗ ಮಾರಾಟ ಮಾಡಲೆಂದು ಕಾಸರಗೋಡಿಗೆ ಹೊರಟಿರುವುದಾಗಿ ತಿಳಿಸಿದ್ದರು. ಪೊಲೀಸರು ಅವರಿಬ್ಬರ ವಿರುದ್ಧ ಬೈಕ್ ಕಳವಿನ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳನ್ನು ಇದೀಗ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿಗಳ ಪರವಾಗಿ ವಕೀಲರಾದ ಅರಂತನಡ್ಕ ಬಾಲಕೃಷ್ಣ ರೈ, ದುರ್ಗಾಪ್ರಸಾದ್ ರೈ ಕುಂಬ್ರ, ಮಹೇಶ್ ಕಜೆ, ಪ್ರಸಾದ್ ಕುಮಾರ್ ರೈ ವಾದಿಸಿದ್ದರು.

ಕಳವಾದ ಬೈಕ್ 6ತಿಂಗಳ ಬಳಿಕ ಪತ್ತೆ

ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕುಂಜಾರು ದೇವಸ್ಥಾನದ ಬಳಿ ಹರಿಪ್ರಸಾದ್ ಶೆಟ್ಟಿ ಎಂಬವರು ನಿಲ್ಲಿಸಿದ್ದ ಬೈಕ್ ಕಳೆದ ಜನವರಿ ತಿಂಗಳಿನಲ್ಲಿ ಕಳವಾಗಿತ್ತು. ಬೈಕ್ ಕಳವಾದ ಕುರಿತು ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳ ಬಂಧನದೊಂದಿಗೆ ಈ ಬೈಕ್ ಪತ್ತೆಯಾಗಿದೆ.

ಆರೋಪಿಗಳು ಕಳವುಗೈದಿದ್ದ ಈ ಬೈಕನ್ನು ಪುತ್ತೂರಿನಲ್ಲಿ ಮಾರಾಟ ಮಾಡಲು ಬಹಳಷ್ಟು ಪ್ರಯತ್ನಿಸಿದ್ದರು. ಆದರೆ ಖರೀದಿಸುವವರು ಸಿಗದ ಕಾರಣ ಕಾಸರಗೋಡಿನಲ್ಲಿ ಮಾರಾಟ ಮಾಡುವ ಯೋಜನೆ ರೂಪಿಸಿದ್ದರು ಎಂದು ಪೊಲೀಸ್ ವಿಚಾರಣೆ ವೇಳೆಗೆ ಬಾಯ್ಬಿಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X