Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಲರಿ ಭಾರತೀಯ ರಾಜಕಾರಣಿಗಳಿಂದ ಹಣ...

ಹಿಲರಿ ಭಾರತೀಯ ರಾಜಕಾರಣಿಗಳಿಂದ ಹಣ ಪಡೆದಿದ್ದಾರೆ : ಟ್ರಂಪ್ ಆರೋಪ

ವಾರ್ತಾಭಾರತಿವಾರ್ತಾಭಾರತಿ25 Jun 2016 7:56 PM IST
share
ಹಿಲರಿ ಭಾರತೀಯ ರಾಜಕಾರಣಿಗಳಿಂದ ಹಣ ಪಡೆದಿದ್ದಾರೆ : ಟ್ರಂಪ್ ಆರೋಪ

ವಾಶಿಂಗ್ಟನ್, ಜೂ. 25: ಭಾರತ ಮತ್ತು ಅಮೆರಿಕಗಳ ನಡುವಿನ ನಾಗರಿಕ ಪರಮಾಣು ಒಪ್ಪಂದಕ್ಕೆ ಬೆಂಬಲ ನೀಡಲು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಹಿಲರಿ ಕ್ಲಿಂಟನ್ ಭಾರತದ ರಾಜಕೀಯ ನಾಯಕರು ಮತ್ತು ಸಂಸ್ಥೆಗಳಿಂದ ಹಣೆ ಪಡೆದಿದ್ದಾರೆ ಎಂದು ಅವರ ರಿಪಬ್ಲಿಕನ್ ಎದುರಾಳಿ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.
ಟ್ರಂಪ್ ಪ್ರಚಾರ ವಿಭಾಗವು ಈ ಆರೋಪಗಳನ್ನು 35 ಪುಟಗಳ ಪುಸ್ಕಿಕೆಯೊಂದರಲ್ಲಿ ಪ್ರಕಟಿಸಿದೆ. ಆದರೆ, ಈ ಆರೋಪಗಳ ಪೈಕಿ ಯಾವುದೂ ಹೊಸತಲ್ಲ. ಅವುಗಳು ಹಲವಾರು ವರ್ಷಗಳಿಂದ ಸಾರ್ವಜನಿಕವಾಗಿ ಕೇಳಿಬರುತ್ತಿದ್ದ ಆರೋಪಗಳೇ ಆಗಿದ್ದವು.
ಹಿಲರಿ ಈಗಾಗಲೇ ಹಲವು ಬಾರಿ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ.
ಪುಸ್ತಿಕೆಯಲ್ಲಿ ನೀಡಲಾದ ಮಾಹಿತಿಯು ನ್ಯೂಯಾರ್ಕ್‌ನಲ್ಲಿ ಈ ವಾರ ಹಿಲರಿಯ ದಾಖಲೆ ಕುರಿತಂತೆ ಟ್ರಂಪ್ ಮಾಡಿದ ಭಾಷಣದ ಆಯ್ದ ಅಂಶಗಳಾಗಿವೆ. ಟ್ರಂಪ್ ತನ್ನ ಭಾಷಣದಲ್ಲಿ ಹಿಲರಿಗೆ ಸಂಬಂಧಿಸಿದ 50 ಅಂಶಗಳ ಬಗ್ಗೆ ಮಾತನಾಡಿದ್ದರು.
‘ನ್ಯೂಯಾರ್ಕ್ ಟೈಮ್ಸ್’ನ ವರದಿಯೊಂದನ್ನು ಉಲ್ಲೇಖಿಸಿದ ಟ್ರಂಪ್ ಪ್ರಚಾರ ವಿಭಾಗ, 2008ರಲ್ಲೇ ಭಾರತೀಯ ರಾಜಕಾರಣಿ ಅಮರ್ ಸಿಂಗ್ ಕ್ಲಿಂಟನ್ ಫೌಂಡೇಶನ್‌ಗೆ 10 ಲಕ್ಷ ಮತ್ತು 50 ಲಕ್ಷ ಡಾಲರ್ ನಡುವಿನ ಮೊತ್ತವೊಂದನ್ನು ದೇಣಿಗೆ ನೀಡಿದ್ದರು ಎಂದು ಆರೋಪಿಸಿದೆ.
ನಾಗರಿಕ ಪರಮಾಣು ತಂತ್ರಜ್ಞಾನವನ್ನು ಭಾರತಕ್ಕೆ ಒದಗಿಸುವುದಕ್ಕೆ ಸಂಬಂಧಿಸಿದ ಒಪ್ಪಂದದ ಪರವಾಗಿ ಲಾಬಿ ನಡೆಸಲು ಸಿಂಗ್ 2008 ಸೆಪ್ಟಂಬರ್‌ನಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು ಹಾಗೂ ಒಪ್ಪಂದಕ್ಕೆ ಡೆಮಾಕ್ರಟರು ವಿರೋಧ ವ್ಯಕ್ತಪಡಿಸುವುದಿಲ್ಲ ಎಂಬುದಾಗಿ ಅಂದಿನ ಸೆನೆಟರ್ ಕ್ಲಿಂಟನ್ ಆಶ್ವಾಸನೆ ನೀಡಿದ್ದರು ಎಂದು ಟ್ರಂಪ್ ಪ್ರಚಾರ ಆರೋಪಿಸಿದೆ.
2008ರಲ್ಲಿ ಭಾರತೀಯ ಉದ್ಯಮಗಳ ಒಕ್ಕೂಟವು ಕ್ಲಿಂಟನ್ ಫೌಂಡೇಶನ್‌ಗೆ 5 ಲಕ್ಷದಿಂದ 10 ಲಕ್ಷ ಡಾಲರ್‌ವರೆಗಿನ ಮೊತ್ತವನ್ನು ನೀಡಿತ್ತು ಎಂದಿದೆ.
 ಹಿಲರಿಯ ಸಿಬ್ಬಂದಿ ಮುಖ್ಯಸ್ಥೆ ಶೆರಿಲ್ ಮಿಲ್ಸ್ ಹಿಲರಿಯ ಸೂಚನೆಯಂತೆ ಭಾರತೀಯ ಅಮೆರಿಕನ್ ರಾಜ್ ಫೆರ್ನಾಂಡೊರನ್ನು ವಿದೇಶಾಂಗ ಇಲಾಖೆಯ ಆಂತರಿಕ ಭದ್ರತಾ ಸಲಹಾ ಮಂಡಳಿಗೆ ನೇಮಿಸಿದ್ದರು ಎಂದು ಅದು ಆರೋಪಿಸಿದೆ.
 ಫೆರ್ನಾಂಡೊ, ಕ್ಲಿಂಟನ್ ಫೌಂಡೇಶನ್‌ಗೆ 10 ಲಕ್ಷದಿಂದ 50 ಲಕ್ಷ ಡಾಲರ್‌ವರೆಗಿನ ಮೊತ್ತವನ್ನು ದೇಣಿಗೆ ನೀಡಿದ್ದಾರೆ ಎಂದು ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X