Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜಕೀಯ ಕುಲೀನರ ವಿರುದ್ಧ ಬಡವರ ಆಕ್ರೋಶ...

ರಾಜಕೀಯ ಕುಲೀನರ ವಿರುದ್ಧ ಬಡವರ ಆಕ್ರೋಶ ಕಾರಣ

ಬ್ರೆಕ್ಸಿಟ್ ವಿಶ್ಲೇಷಣೆ

ವಾರ್ತಾಭಾರತಿವಾರ್ತಾಭಾರತಿ25 Jun 2016 11:59 PM IST
share
ರಾಜಕೀಯ ಕುಲೀನರ ವಿರುದ್ಧ ಬಡವರ ಆಕ್ರೋಶ ಕಾರಣ

ಪ್ಯಾರಿಸ್, ಜೂ. 25: ಐರೋಪ್ಯ ಒಕ್ಕೂಟದಿಂದ ಬ್ರಿಟನನ್ನು ಹೊರಕ್ಕೆಳೆದು ತಂದವರು ಅಲ್ಲಿನ ಬಡ ಮತ್ತು ಕಡಿಮೆ ಶಿಕ್ಷಣ ಪಡೆದ ಪ್ರಜೆಗಳು. ನೂತನ ವಿಶ್ವ ವ್ಯವಸ್ಥೆಯ ಆರ್ಥಿಕ ಲಾಭ ತಮಗೆ ಸಿಗದಿರುವುದರ ಬಗ್ಗೆ ಅವರು ಆಕ್ರೋಶಗೊಂಡಿದ್ದರು- ಹೀಗೆಂದು ಪರಿಣತರು ಐರೋಪ್ಯ ಒಕ್ಕೂಟದಿಂದ ಬ್ರಿಟನ್‌ನ ನಿರ್ಗಮನವನ್ನು ವಿಶ್ಲೇಷಿಸುತ್ತಾರೆ.

ಜನಮತಗಣನೆಯ ಈ ಫಲಿತಾಂಶವು ಸಮಾಜದ ಉನ್ನತ ಸ್ತರದಲ್ಲಿರುವವರಿಗೆ ಬೆದರಿಕೆಯಾಗಿದೆ.

ಆರ್ಥಿಕ ಬಿಕ್ಕಟ್ಟಿನಿಂದಾಗಿ ಭಾರೀ ಸಂಕಷ್ಟಕ್ಕೆ ಒಳಗಾದವರು ಈ ಕೆಳಸ್ತರದ ಜನರು. ತಮ್ಮ ಅನಿಶ್ಚಿತ ಆರ್ಥಿಕ ಸ್ಥಿತಿಗತಿಯ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ವಲಸಿಗರ ಬಗ್ಗೆ ಅವರು ಭೀತಿ ಪಡಲಾರಂಭಿಸಿದರು ಹಾಗೂ ಈ ಭೀತಿಯನ್ನು ಐರೋಪ್ಯ ಒಕ್ಕೂಟದಲ್ಲಿರುವ ಬಲಪಂಥೀಯ ಗುಂಪುಗಳು ಮತ್ತು ಅಮೆರಿಕದ ಡೊನಾಲ್ಡ್ ಟ್ರಂಪ್ ತಮ್ಮ ಪ್ರಯೋಜನಕ್ಕಾಗಿ ಬಳಸಿಕೊಂಡರು ಎಂದು ಪರಿಣತರು ಅಭಿಪ್ರಾಯಪಡುತ್ತಾರೆ.

‘‘ಎಲ್ಲಿ ನೋಡಿದರೂ ಇದೇ ಪೃವೃತ್ತಿ ನನಗೆ ಕಾಣುತ್ತದೆ’’ ಎಂದು ಅಮೆರಿಕದ ಬ್ರೂಕಿಂಗ್ಸ್ ಇನ್‌ಸ್ಟಿಟ್ಯೂಶನ್‌ನಲ್ಲಿರುವ ಸೀನಿಯರ್ ಫೆಲೊ ವಿಲಿಯಂ ಗ್ಯಾಲ್‌ಸ್ಟನ್ ಹೇಳುತ್ತಾರೆ.

‘‘ಬ್ರಿಟನ್‌ನಲ್ಲಿರುವ ಜನಸಂಖ್ಯಾ ವರ್ಗದ ಮಾದರಿಯಲ್ಲೇ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಮೆರಿಕದ ಮತದಾರರ ವರ್ಗಗಳಿವೆ’’.

ಹೆಚ್ಚಿನ ಸಂಖ್ಯೆಯ ವಲಸಿಗ ಕೆಲಸಗಾರರನ್ನು ಹೊಂದಿರುವ ಗ್ರಾಮೀಣ ಪ್ರದೇಶಗಳು, ಮಾಜಿ ಕೈಗಾರಿಕಾ ಕೇಂದ್ರಗಳು ಮತ್ತು ನಗರಗಳ ಸುತ್ತಲಿನ ಬಡತನದ ಪ್ರದೇಶಗಳು. ಇಲ್ಲಿನ ಮತದಾರರೆಲ್ಲ ಬ್ರೆಕ್ಸಿಟ್ (ಐರೋಪ್ಯ ಒಕ್ಕೂಟದಿಂದ ಬ್ರಿಟನ್ ನಿರ್ಗಮನ) ಪರವಾಗಿ ಮತ ಹಾಕಿದವರು. ವಿಶ್ವವಿದ್ಯಾನಿಲಯದ ಶಿಕ್ಷಣ ಇಲ್ಲದವರು ಮತ್ತು ಹಿರಿಯ ಮತದಾರರು ಬ್ರೆಕ್ಸಿಟ್ ಪರವಾಗಿ ಮತ ಚಲಾಯಿಸಿದ 53.4 ಶೇಕಡಾದಲ್ಲಿ ಸೇರಿದ್ದಾರೆ. ‘‘ಈ ಜನರು ರಾಜಕೀಯ ಕುಲೀನರನ್ನು ನಂಬುವುದಿಲ್ಲ. ಯಾಕೆಂದರೆ, ಈವರೆಗೆ ಯಾವುದೇ ರಾಜಕೀಯ ಪಕ್ಷಗಳು ಜನರ ಅತೃಪ್ತಿಯನ್ನು ಪರಿಗಣಿಸಿ ಅದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ ಎಂದು ಅವರು ಭಾವಿಸುತ್ತಾರೆ’’.

‘‘ಬ್ರೆಕ್ಸಿಟ್‌ನಲ್ಲಿ ಜಯ ಗಳಿಸಿದ ರೀತಿಯಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲೂ ಈ ಶಕ್ತಿಗಳು ಯಶಸ್ವಿಯಾಗುತ್ತವೆ ಎಂದು ನಾನು ನಿರೀಕ್ಷಿಸುವುದಿಲ್ಲವಾದರೂ, ಯುರೋಪ್‌ನಾದ್ಯಂತ ಇರುವ ಸ್ಥಾಪಿತ ಪಕ್ಷಗಳಿಗೆ ಇದು ಮಹತ್ವದ ಎಚ್ಚರಿಕೆಯ ಕರೆಗಂಟೆಯಾಗಿದೆ’’ ಎಂದು ಗ್ಯಾಲ್‌ಸ್ಟನ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X