Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೇಲ್ಸ್ - ರಾಯ್ ಶ್ರೇಷ್ಠ ಆಟ;...

ಹೇಲ್ಸ್ - ರಾಯ್ ಶ್ರೇಷ್ಠ ಆಟ; ಇಂಗ್ಲೆಂಡ್‌ಗೆ ಜಯ

ವಾರ್ತಾಭಾರತಿವಾರ್ತಾಭಾರತಿ26 Jun 2016 12:16 AM IST
share
ಹೇಲ್ಸ್ - ರಾಯ್ ಶ್ರೇಷ್ಠ ಆಟ; ಇಂಗ್ಲೆಂಡ್‌ಗೆ ಜಯ

ಬರ್ಮಿಂಗ್‌ಹ್ಯಾಂ, ಜೂ.25: ಇಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯ ಎರಡನೆ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.
ಅಲೆಕ್ಸ್ ಹೇಲ್ಸ್ ಮತ್ತು ಜಾಸನ್ ರಾಯ್ ಔಟಾಗದೆ ದಾಖಲಿಸಿದ 256 ರನ್‌ಗಳ ನೆರವಿನಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಅಲೆಕ್ಸ್ ಮೊದಲ ವಿಕೆಟ್‌ಗೆ ಔಟಾಗದೆ 133 ರನ್ ಮತ್ತು ಜಾಸನ್ ಔಟಾಗದೆ 112 ರನ್ ಗಳಿಸಿದರು.
255 ರನ್ ಮಾಡಬೇಕಿದ್ದ ಇಂಗ್ಲೆಂಡ್ ತಂಡ ಬಹಳ ಸುಲಭವಾಗಿ ಗೆಲುವಿನ ದಡ ಸೇರಿತು.
 ಮೊದಲ ಪಂದ್ಯ ರಾಯ್ ಮತ್ತು ಅಲೆಕ್ಸ್(112) ಪ್ರಯತ್ನದ ಫಲವಾಗಿ ಪಂದ್ಯ ಟೈ ಆಗಿತ್ತು.
    ಎರಡನೆ ಪಂದ್ಯದಲ್ಲಿ ಜಯ ಗಳಿಸಿದ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿತು. ಮೊದಲ ವಿಕೆಟ್‌ಗೆ 256 ರನ್‌ಗಳ ಜೊತೆಯಾಟ ನೀಡಿರುವುದು ಐತಿಹಾಸಿಕ ಸಾಧನೆಯಾಗಿದೆ. ಇಂಗ್ಲೆಂಡ್ ಹಿಂದಿನ ಪಂದ್ಯಗಳಲ್ಲಿ ಆರು ಬಾರಿ 250ಕ್ಕೂ ಹೆಚ್ಚು ಸ್ಕೋರ್ ದಾಖಲಿತ್ತು. ಹೇಲ್ಸ್ 1000 ರನ್‌ಗಳನ್ನು ಪೂರೈಸಿದ 34ನೆ ಆಟಗಾರ ಎನಿಸಿಕೊಂಡರು. ಹೇಲ್ಸ್ ಮೂರನೆ ಶತಕ ದಾಖಲಿಸಿದರು. ಹೇಲ್ಸ್ 29ನೆ ಓವರ್‌ನಲ್ಲಿ ಪ್ರಸನ್ನ ಅವರ 5 ಎಸೆತಗಳಲ್ಲಿ 26 ರನ್ ಪೂರ್ಣಗೊಳಿಸಿದರು. ಸತತ ಎರಡು ಬಾರಿ ಚೆಂಡನ್ನು ಬೌಂಡರಿಗಟ್ಟಿದರು. ಪ್ರಸ್ತುತ ಸಾಲಿನಲ್ಲಿ 500ಕ್ಕಿಂತ ಹೆಚ್ಚು ರನ್ ದಾಖಲಿಸಿದ ಮೂರನೆ ಆಟಗಾರ ಎನಿಸಿಕೊಂಡರು.
ಆಸ್ಟ್ರೇಲಿಯದ ಸ್ಟೀವ್ ಸ್ಮಿತ್(574), ಡೇವಿಡ್ ವಾರ್ನರ್(511) ಈ ಸಾಧನೆ ಮಾಡಿರುವ ಇತರ ಆಟಗಾರರು.
  ರಾಯ್ ಎರಡು ಬಾರಿ ರನೌಟಾಗುವ ಅವಕಾಶ ಕಳೆದುಕೊಂಡಿದ್ದರು. ಪ್ರಸನ್ನ ಎಸೆತದಲ್ಲಿ ಚೆಂಡನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ಶತಕ ಪೂರ್ಣಗೊಳಿಸಿದರು. 35ನೆ ಓವರ್‌ನಲ್ಲಿ ಮೊದಲ ಎಸೆತದಲ್ಲಿ ಗೆಲುವಿನ ರನ್ ಬಾರಿಸಿದರು.
 ಇದಕ್ಕೂ ಮೊದಲು ದಿನೇಶ್ ಚಾಂಡಿಮಾಲ್ ಮತ್ತು ಉಪುಲ್ ತರಂಗ ದಾಖಲಿಸಿದ ಅರ್ಧಶತಕಗಳ ಸಹಾಯದಿಂದ ಶ್ರೀಲಂಕಾ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 254 ರನ್ ಗಳಿಸಿತ್ತು.
ಶ್ರೀಲಂಕಾದ ತಂಡದ ಅಗ್ರ ಸರದಿ ವೈಫಲ್ಯದ ಹಿನ್ನೆಲೆಯಲ್ಲಿ ದೊಡ್ಡ ಮೊತ್ತದ ಸವಾಲು ಸೇರಿಸಲು ಸಾಧ್ಯವಾಗಲಿಲ್ಲ.
 ಲಿಯಾಮ್ ಪ್ಲೆಂಕೆಟ್ ಮತ್ತು ಆದಿಲ್ ರಶೀದ್ ತಲಾ ಎರಡು ವಿಕೆಟ್ ಪಡೆದರು. ಧನುಶ್ಕ ಗುಣತಿಲಕೆ ಅವರು ಡೇವಿಡ್ ವಿಲ್ಲಿ ಅವರ ಐದನೆ ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಸಿಡಿಸಿದ್ದರು. ಗುಣತಿಲಕೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. 22 ರನ್ ಗಳಿಸಿದರು. ಕುಸಾಲ್ ಮೆಂಡಿಸ್ 9 ಎಸೆತಗಳನ್ನು ಎದುರಿಸಿದರೂ ಅವರಿಂದ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.
  ಚಾಂಡಿಮಾಲ್ ಮತ್ತು ಕುಶಲ್ ಪೆರೆರಾ (37) ಅವರು 30 ರನ್‌ಗಳ ಜೊತೆಯಾಟ ನೀಡಿದರು. ಸ್ಕೋರ್ ಬೋರ್ಡ್‌ನಲ್ಲಿ 77 ರನ್ ದಾಖಲಾಗುವಷ್ಟರಲ್ಲಿ 3 ವಿಕೆಟ್ ಪತನಗೊಂಡಿತ್ತು.
ನಾಯಕ ಆ್ಯಂಜೆಲೊ ಮ್ಯಾಥ್ಯೂಸ್ ಮತ್ತು ಉಪನಾಯಕ ಚಾಂಡಿಮಾಲ್ ನಾಲ್ಕನೆ ಬಾರಿ 50ಕ್ಕೂ ಅಧಿಕ ರನ್‌ಗಳ ಜೊತೆಯಾಟ ನೀಡಿದರು. ತರಂಗ 29ನೆ ಅರ್ಧಶತಕ ದಾಖಲಿಸಿದರು.
 ಆದಿಲ್ ರಶೀದ್ 34ಕ್ಕೆ 2 ಮತ್ತು ಪ್ಲೆಂಕೆಟ್ 49ಕ್ಕೆ 2 ವಿಕೆಟ್ ಹಂಚಿಕೊಂಡರು.
ಸಂಕ್ಷಿಪ್ತ ಸ್ಕೋರ್ ವಿವರ
ಶ್ರೀಲಂಕಾ 50 ಓವರ್‌ಗಳಲ್ಲಿ 254/7( ತರಂಗ ಔಟಾಗದೆ 53, ಚಾಂಡಿಮಲ್ 52; ರಶೀದ್ 34ಕ್ಕೆ 2, ಪ್ಲೆಂಕೆಟ್ 49ಕ್ಕೆ 2).
ಇಂಗ್ಲೆಂಡ್ 34.1 ಓವರ್‌ಗಳಲ್ಲಿ 256/0(ಅಲೆಕ್ಸ್ ಹೇಲ್ಸ್ ಔಟಾಗದೆ 133 , ರಾಯ್ ಔಟಾಗದೆ 112).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X