Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ಮಾರಲು ಮುಂದಾಗಿರುವ ಪ್ರಧಾನಿ:...

ದೇಶ ಮಾರಲು ಮುಂದಾಗಿರುವ ಪ್ರಧಾನಿ: ಅನಂತಸುಬ್ಬರಾವ್

ವಾರ್ತಾಭಾರತಿವಾರ್ತಾಭಾರತಿ26 Jun 2016 11:19 PM IST
share
ದೇಶ ಮಾರಲು ಮುಂದಾಗಿರುವ ಪ್ರಧಾನಿ: ಅನಂತಸುಬ್ಬರಾವ್

ಬೆಂಗಳೂರು, ಜೂ.26: ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾ ಹೆಸರಿನಲ್ಲಿ ದೇಶದ ನೆಲ, ಜಲವನ್ನು ಮಾರಲು ಮುಂದಾಗಿದ್ದಾರೆ ಎಂದು ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಆಪಾದಿಸಿದ್ದಾರೆ.
ರವಿವಾರ ನಗರದ ಗಾಂಧಿ ಭವನದಲ್ಲಿ ವಕೀಲರ ಸಂಘ ಆಯೋಜಿಸಿದ್ದ ಉದ್ದೇಶಿತ ಕಾರ್ಮಿಕ ಕಾನೂನು ಗಳ ತಿದ್ದುಪಡಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಸ್ಟ್ ಇಂಡಿಯಾ ಕಂಪೆನಿ ದೇಶದ ಜನರನ್ನು ಗುಲಾ ಮರನ್ನಾಗಿ ಮಾಡಿತ್ತು. ಅವರನ್ನು ದೇಶದಿಂದ ತೊಲಗಿ ಸಲು ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿ ನಡೆಸಿ ದರು. ಆದರೆ, ಈಗ ಸಾವಿರಾರು ಈಸ್ಟ್ ಇಂಡಿಯಾ ಕಂಪೆನಿಗಳಿಗೆ ಅವಕಾಶ ಮಾಡಿಕೊಡುತ್ತಿರುವ ಪ್ರಧಾನಿ ದೇಶದ ನೆಲ, ಜಲ, ಕಾರ್ಮಿಕರ ಬೆವರು ಉಚಿತ ವಾಗಿ ಸಿಗುತ್ತದೆ ಎಂದು ರತ್ನಗಂಬಳಿ ಹಾಸುತ್ತಿದ್ದಾರೆ. ಅವರ ವಿರುದ್ಧ ದೇಶದ ಜನ ಪ್ರಕರಣ ದಾಖಲಿಸಬೇ ಕಾಗಿದೆ ಎಂದು ಹೇಳಿದರು.
ಕೇಂದ್ರ ಸರಕಾರ ಅನೇಕ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕ ವಲಯದ ಕಂಪೆನಿಗಳನ್ನು ಸಾಯಿಸಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದೆ. ಅಲ್ಲದೆ, ಅಂಪ್ರಟೈಸ್, ಟ್ರೈನೀಸ್, ಗುತ್ತಿಗೆ ಹೆಸರಲ್ಲಿ ನೌಕರರನ್ನು ಶೋಷಣೆ ಮಾಡಲಾಗು ತ್ತಿದೆ. ಆ ಮೂಲಕ ದರೋಡೆ ಮಾಡುವವನಿಗೆ ತಿಜೋರಿಯ ಕೀ ಕೊಟ್ಟಂತಾಗಿದೆ ಎಂದು ಕಿಡಿಕಾರಿದರು. ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ಮೂಲಭೂತ ಹಕ್ಕುಗಳ ವಿರುದ್ಧ ದಾಳಿ ಮಾಡಲಾಗುತ್ತಿವೆ. ಹೆಣ್ಣು ಮಕ್ಕಳಿಗೆ ರಾತ್ರಿ ಪಾಳಿ ಯಲ್ಲಿ ಕೆಲಸ ಮಾಡುವ ಅವಕಾಶವನ್ನೂ ಕಲ್ಪಿಸ ಲಾಗಿದೆ. ಕೆಲಸ ಮಾಡದಿದ್ದವರನ್ನು ಕೆಲಸದಿಂದ ತೆಗೆ ಯುವ ಬೆದರಿಕೆ ಹಾಕಲಾಗುತ್ತಿದೆ ಇವೆಲ್ಲಾ ಮಾಲಕರ ಪರವಾಗಿ ಇರುವ ಕಾಯ್ದೆಗಳು ಇಂತಹುಗಳ ವಿರುದ್ಧ ಮತ್ತಷ್ಟು ಹೋರಾಟ ಮಾಡುವ ಅಗತ್ಯವಿದೆ ಎಂದರು.

 ಪ್ರಧಾನಿ ಕಳೆದೆರಡು ವರ್ಷಗಳಲ್ಲಿ ಮಾತನಾಡುವು ದರಲ್ಲಿ, ದೇಶ ಸುತ್ತುವುದರಲ್ಲಿ ದಾಖಲೆ ಮಾಡಿದ್ದಾರೆ. ಇದನ್ನು ಎಂತವರೂ ಒಪ್ಪುತ್ತಾರೆ ಎಂದು ಕುಹಕವಾಡಿದ ಅವರು ಕಾರ್ಮಿಕ ವಿರೋಧಿ ನಿಲುವನ್ನು ಅನುಸರಿಸು ತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಕೊಲಿನ್ ಗೋನ್ಸಾಲ್ವೆಸ್, ಕಾರ್ಮಿಕ ಮುಖಂಡ ರಾದ ವಿಲಾಸ್‌ಕುಮಾರ್, ವಿಶ್ವನಾಥ್‌ನಾಯಕ್, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್, ಭಾರತೀಯ ವಕೀಲರ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ಉಪಸ್ಥಿತರಿದ್ದರು.

ಈಸ್ಟ್ ಇಂಡಿಯಾ ಕಂಪೆನಿ ದೇಶದ ಜನರನ್ನು ಗುಲಾಮರನ್ನಾಗಿ ಮಾಡಿತ್ತು. ಅದನ್ನು ದೇಶದಿಂದ ತೊಲಗಿಸಲು ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿ ನಡೆಸಿದರು. ಆದರೆ, ಈಗ ಸಾವಿರಾರು ಈಸ್ಟ್ ಇಂಡಿಯಾ ಕಂಪೆನಿಗಳಿಗೆ ಅವಕಾಶ ಮಾಡಿಕೊಡುತ್ತಿರುವ ಪ್ರಧಾನಿ ದೇಶದ ನೆಲ, ಜಲ, ಕಾರ್ಮಿಕರ ಬೆವರು ಉಚಿತವಾಗಿ ಸಿಗುತ್ತದೆ ಎಂದು ರತ್ನಗಂಬಳಿ ಹಾಸುತ್ತಿದ್ದಾರೆ. ಅವರ ವಿರುದ್ಧ ದೇಶದ ಜನ ಪ್ರಕರಣ ದಾಖಲಿಸಬೇಕಾಗಿದೆ.
-ಎಚ್.ವಿ. ಅನಂತ ಸುಬ್ಬರಾವ್, ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X