Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಂಗ್ರೆಸ್ ಮತ್ತು ನೆಹರೂ ಕುಟುಂಬ ಯಾರು...

ಕಾಂಗ್ರೆಸ್ ಮತ್ತು ನೆಹರೂ ಕುಟುಂಬ ಯಾರು ಯಾರಿಗೆ ಅನಿವಾರ್ಯ?

ಕು.ಸ.ಮಧುಸೂದನ ನಾಯರ್ಕು.ಸ.ಮಧುಸೂದನ ನಾಯರ್27 Jun 2016 10:52 PM IST
share
ಕಾಂಗ್ರೆಸ್ ಮತ್ತು ನೆಹರೂ ಕುಟುಂಬ ಯಾರು ಯಾರಿಗೆ ಅನಿವಾರ್ಯ?

ಕಳೆದ ನಾಲ್ಕೂವರೆ ದಶಕಗಳಿಂದಲೂ ಕಾಂಗ್ರೆಸ್ಸೇತರ ಪಕ್ಷಗಳು ಕಾಂಗ್ರೆಸ್‌ನ ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಟೀಕಿಸುತ್ತ್ತಾ, ಕುಟುಂಬ ರಾಜಕಾರಣವನ್ನು ಕೆಲವೊಮ್ಮೆ ತೀರಾ ಕೀಳುಭಾಷೆಯಲ್ಲಿ ಲೇವಡಿ ಮಾಡುತ್ತಲೇ ಬರುತ್ತಿವೆ. ಆದರೆ ಈಗ ನೋಡಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ಎಲ್ಲ ಯೋಗ್ಯತೆಗಳನ್ನೂ ಇಂಡಿಯಾದ ಬಹಳಷ್ಟು ರಾಜಕೀಯ ಪಕ್ಷಗಳು ಕಳೆದುಕೊಂಡಿವೆಯೆನಿಸುತ್ತೆ. ಯಾಕೆಂದರೆ ನೆಹರು ಕುಟುಂಬವನ್ನು ವಿರೋಧಿಸುತ್ತಲೇ ರಾಜಕೀಯ ಮಾಡಿದ ನಾಯಕರು, ಪಕ್ಷಗಳು ಕೂಡ ಕುಟುಂಬ ರಾಜಕಾರಣದ ಬಲೆಯಲ್ಲಿ ಬಿದ್ದಿವೆ. ಹೀಗಾಗಿ ಇವತ್ತು ಕುಟುಂಬ ರಾಜಕಾರಣದ ಬಗ್ಗೆ ಯಾರಾದರೂ ಮಾತಾಡಿದರೆ ಅದನ್ನು ಜನತೆ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಕೆಲವರು ಕಾಂಗ್ರೆಸ್ ಮತ್ತೆ ಸುಧಾರಿಸಿಕೊಳ್ಳಬೇಕಾದರೆ ಆ ಪಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಹಿಡಿತದಿಂದ ಹೊರಬರಬೇಕೆಂದು ಕಿರುಚುತ್ತಿದ್ದಾರೆ. ನೆಹರೂ ಕುಟುಂಬದ ಹೊರತಾದ ಕಾಂಗ್ರೆಸ್ ಭವಿಷ್ಯ ಏನಾಗಬಹುದೆಂಬುದ್ನು ಈಗ ಒಂದಿಷ್ಟು ನೋಡೋಣ:

  ಇವತ್ತು ನೂರು ವರ್ಷಗಳ ನಂತರವೂ ಕಾಂಗ್ರೆಸ್ ತನ್ನ ಅಸ್ತಿತ್ವ ಅಂತೇನಾದರೂ ಉಳಿಸಿಕೊಂಡು ಉಸಿರಾಡುತ್ತಿದ್ದರೆ ಅದಕ್ಕೆ ಕಾರಣ ನೆಹರೂ ಕುಟುಂಬದ ಆಕರ್ಷಣೆ ಕಾರಣವೇ ಹೊರತು ಬೇರೆಯೇನಲ್ಲ. ಇದು ಸತ್ಯವಾದ ಸಂಗತಿ. ನೆಹರೂ ಕುಟುಂಬದಾಚೆಗೆ ಪಕ್ಷ ಬಂದು ನಿಂತರೆ ಕೆಲವೇ ವರ್ಷದಲ್ಲಿ ಅದು ತನ್ನ ರಾಷ್ಟ್ರೀಯ ಐಡೆಂಟಿಟಿಯನ್ನು ಕಳೆದು ಕೊಂಡು ಹತ್ತಾರೇನು, ನೂರಾರು ಚೂರುಗಳಾಗಿ ಒಡೆದು ಛಿದ್ರಗೊಳ್ಳುವುದು ಖಚಿತ. ಯಾಕೆಂದರೆ ಎಲ್ಲಿಯವರೆಗೂ ನೆಹರು ಕುಟುಂಬದ ಸದಸ್ಯರು ಅದನ್ನು ಮುನ್ನಡೆಸುತ್ತಾರೊ ಅಲ್ಲಿಯವರೆಗೂ ಅದರ ಒಗ್ಗಟ್ಟು ಬಲವಾಗಿರುತ್ತದೆ. ಆ ಕುಟಂಬವೇ ಅದಕ್ಕೆ ಶಕ್ತಿಕೇಂದ್ರವಾಗಿದೆ. ಅದು ನಾಶವಾದರೆ ಪಕ್ಷವೂ ನಾಶವಾಗುವುದರಲ್ಲಿ ಅನುಮಾನವೇನಿಲ್ಲ. ಇದಕ್ಕೆ ಬಹಳ ಜನ ರಾಜಕೀಯ ಪಂಡಿತರು, ನಾಯಕರು ‘‘ಕಾಂಗ್ರೆಸ್ ಬೇರೆ ನಾಯಕರನ್ನು ಬೆಳೆಸಲಿಲ್ಲ’’ವೆಂದು ಆರೋಪಿಸುತ್ತಾರೆ. ಆದರೆ ಇಂಡಿಯಾದಂತಹ ವಿಶಾಲ ರಾಷ್ಟ್ರದಲ್ಲಿ ನಾಲ್ಕೂ ದಿಕ್ಕುಗಳಿಗೂ ಒಪ್ಪಿತವಾಗುವಂತ ನಾಯಕನನ್ನು ಯಾರೂ ಬೆಳೆಸಲಾಗುವುದಿಲ್ಲ. ಹಾಗೆ ಬೆಳಸುವ ನಾಯಕ ಬಹಳ ದಿನ ಬಾಳಿಕೆ ಬರಲಾರ. ನಾಯಕನಾದವನು ಸ್ವಯಂ ಸೃಷ್ಟಿಯಾಗಬೇಕು. ಬೇಕಾದರೆ ನೀವೇ ನೋಡಿ; ನರೇಂದ್ರ ಮೋದಿಯವರನ್ನು ಭಾಜಪವೇನು ಬೆಳೆಸಲಿಲ್ಲ, ಬದಲಿಗೆ ಬೆಳೆದ ಮೋದಿಯವರನ್ನು ಭಾಜಪ ಬಳಸಿಕೊಂಡಿತಷ್ಟೇ! ಪ್ರಾದೇಶಿಕ ನಾಯಕರು ಬೆಳೆಯಬಹುದೆ ಹೊರತು ರಾಷ್ಟ್ರನಾಯಕರನ್ನು ಯಾರೂ ಬೆಳೆಸಲಾಗುವುದಿಲ್ಲ. ಇವತ್ತು ನಿತೀಶ್ ಕುಮಾರ್ ಅವರನ್ನೇ ನೋಡಿ ಅವರೆಷ್ಟೇ ದೊಡ್ಡ ನಾಯಕರಾದರೂ ದಕ್ಷಿಣದಲ್ಲಿ ಅವರನ್ನು ಒಪ್ಪಿಕೊಳ್ಳುವುದು ಕಷ್ಟದ ಕೆಲಸ. ಹೀಗಾಗಿ ಇಂಡಿಯಾದಂತಹ ಬಹು ಸಂಸ್ಕೃತಿಯ ದೇಶದಲ್ಲಿ ಒಬ್ಬ ನಾಯಕ ಭಾವನಾತ್ಮಕವಾಗಿ ಜನರನ್ನು ಒಲಿಸಿಕೊಂಡು ಬೆಳೆಯಬಹುದೇ ಹೊರತು ಬೇರ್ಯಾವ ಶಕ್ತಿಗಳೂ ಅಂತಹ ನಾಯಕನನ್ನು ಸೃಷ್ಟಿಸಲಾರವು.

ಹೀಗಾಗಿಯೇ ನಾನು ಹೇಳುವುದು ಸೋನಿಯಾರಾಗಲಿ, ರಾಹುಲ್ ಆಗಲಿ ಕಾಂಗ್ರೆಸ್‌ನ ನಾಯಕತ್ವವನ್ನು ಬಿಟ್ಟುಕೊಟ್ಟರೆ ಅದು ಭಾಜಪದಂತಹ ಪಕ್ಷಗಳಿಗೆ ಹಾಸಿಕೊಡುವ ಕೆಂಪುಹಾಸಿನ ಸ್ವಾಗತವಾಗುತ್ತದೆ. ಜೊತೆಗೆ ಏಕ ಪಕ್ಷದ ಸರ್ವಾಧಿಕಾರಿ ಆಡಳಿತಕ್ಕೂ ಹಾದಿಯಾಗುತ್ತದೆ. ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಠಿಯಿಂದ ಇದು ಒಳ್ಳೆಯದಲ್ಲದಿದ್ದರೂ ಪ್ರಜಾಪ್ರಭುತ್ವ ಬದುಕಿರಲಾದರೂ ಕಾಂಗ್ರೆಸ್ ಜೀವಂತವಾಗಿರುವ ಅಗತ್ಯವಿದೆ. ಹಾಗೇನಾದರೂ ನಾಳೆ ಸೋನಿಯಾ ಮತ್ತು ರಾಹುಲ್ ಕಾಂಗ್ರೆಸ್‌ನ ಅಧಿಕಾರ ಬಿಟ್ಟುಕೊಟ್ಟು ಹೊರಬಂದರೆ ಬಹುಶ: ಕರ್ನಾಟಕದಲ್ಲಿಯೇ ಸಿದ್ದರಾಮಯ್ಯನವರ ಕಾಂಗ್ರೆಸ್, ಪರಮೇಶ್ವರ್ ಕಾಂಗ್ರೆಸ್, ವೀರಪ್ಪಮೊಯ್ಲಿ ಕಾಂಗ್ರೆಸ್ ಎಂಬಂತಹ ಹತ್ತಾರು ಕಾಂಗ್ರೆಸ್‌ಗಳು ಜನಿಸುವುದು ಗ್ಯಾರಂಟಿ. ಉದಾಹರಣೆಗಾಗಿ ಇತಿಹಾಸವನ್ನೊಮ್ಮೆ ತಿರುವಿ ಹಾಕಿ ನೋಡಿ. ಎಪ್ಪತ್ತರ ದಶಕದಿಂದ ಇದುವರೆಗೂ ಯಾರ್ಯಾರು ಕಾಂಗ್ರೆಸ್ ತೊರೆದು ಮರಿ ಕಾಂಗ್ರೆಸ್ ಪಕ್ಷಗಳನ್ನು ಕಟ್ಟಿದರೋ ಅವರೆಲ್ಲ ರಾಜಕೀಯದಲ್ಲಿ ಮೇಲೆರಲು ಸಾದ್ಯವೇ ಆಗಿಲ್ಲ. ಜೊತೆಗೆ ಅವರಲ್ಲಿ ಬಹಳಷ್ಟು ಜನ ಮತ್ತೆ ಕಾಂಗ್ರೆಸ್‌ನ ತೆಕ್ಕೆಗೆ ಹೋಗಿದ್ದಾರೆ. ಇವೆಲ್ಲವನ್ನೂ ನೋಡುತ್ತಿದ್ದರೆ ಅದು ಸೋನಿಯಾ ಗಾಂಧಿಯವರೋ, ರಾಹುಲ್ ಗಾಂಧಿಯವರೋ ಮಾತ್ರ ಕಾಂಗ್ರೆಸನ್ನು ಕಾಪಾಡಬಲ್ಲರೆನಿಸುತ್ತೆ. ನೆಹರೂ ಕುಟುಂಬದವರ ಬಗ್ಗೆ ಪೂರ್ವಾಗ್ರಹವಿಲ್ಲದೆ ನೋಡಿದರೆ ಮಾತ್ರ ಈ ಸತ್ಯ ಅರ್ಥವಾಗುತ್ತದೆ. ಎರಡು ಕಾರಣಗಳಿಗಾಗಿ ಕಾಂಗ್ರೆಸ್ ಮುಂದೆಯೂ ತನ್ನ ಅಸ್ತಿತ್ವ ಉಳಿಸಿಕೊಂಡಿರಬೇಕು:

ಮೊದಲನೆಯದು, ಕಾಂಗ್ರೆಸ್ ನಮ್ಮ ಸ್ವಾತಂತ್ರ ಹೋರಾಟದ ನೆನಪಾಗಿದ್ದು ಅದು ನಮ್ಮ ಜೊತೆ ಭಾವನಾತ್ಮಕವಾಗಿ ಥಳುಕು ಹಾಕಿಕೊಂಡಿದೆ (ಈ ಪೀಳಿಗೆಯನ್ನು ಹೊರತುಪಡಿಸಿ). ಎರಡನೆಯದು, ಕಾಂಗ್ರೆಸ್ ಇಲ್ಲವಾಗಿ ಬಿಟ್ಟರೆ ಭಾಜಪ ಏಕೈಕ ರಾಷ್ಟ್ರೀಯ ಪಕ್ಷವಾಗಿ ಹಿಂದೆ ಕಾಂಗ್ರೆಸ್ ಹೇಗೆ ಆರು ದಶಕಗಳವರೆಗೂ ನಮ್ಮನ್ನು ಆಳಿತ್ತೋ ಅದೇ ರೀತಿ ಭಾಜಪವೂ ಸಹ ಆಗಿಬಿಡುವ ಸಾಧ್ಯತೆಯಿದೆ. ಭಾಜಪಕ್ಕೊಂದು ಪರ್ಯಾಯ ರಾಜಕೀಯ ಶಕ್ತಿಯನ್ನು ಕಂಡುಕೊಳ್ಳಲಾಗದೆ ಭಾರತೀಯ ಮತದಾರ ಅಸಹಾಯಕನಾಗಬೇಕಾಗುತ್ತದೆ.
ಆದ್ದರಿಂದಲೇ ಕಾಂಗ್ರೆಸ್‌ನ ಉಳಿವು ಈ ನೆಲದ ಪ್ರಜಾತಂತ್ರದ ಉಳಿವಿಗೂ ಸಂಬಂಧವಿದೆಯೆಂಬುದನ್ನು ಕಾಂಗ್ರೆಸಿಗರು ಮರೆಯಬಾರದು.

share
ಕು.ಸ.ಮಧುಸೂದನ ನಾಯರ್
ಕು.ಸ.ಮಧುಸೂದನ ನಾಯರ್
Next Story
X