Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅನುಚಿತ...

ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅನುಚಿತ ವರ್ತನೆ

ವಾರ್ತಾಭಾರತಿವಾರ್ತಾಭಾರತಿ27 Jun 2016 10:55 PM IST
share
ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅನುಚಿತ ವರ್ತನೆ

ಬೆಂಗಳೂರು, ಜೂ. 27: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಸೋಮವಾರ ಇಲ್ಲಿನ ಕರ್ನಾಟಕ ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದ ವೇಳೆ ಗಾಜಿನ ಪುಡಿ ಸುರಿದು ಅನುಚಿತವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರು, ಪ್ರವೇಶ ದ್ವಾರದಲ್ಲಿದ್ದ ಸಿಬ್ಬಂದಿಗೆ ಲೋಕಾಯುಕ್ತ ಐಜಿ ಪ್ರಣಬ್ ಮೊಹಂತಿ ಹಾಗೂ ಎಸ್ಪಿಅಬ್ದುಲ್ ಅಹದ್ ಅವರು ಕಚೇರಿಯಲ್ಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಕಚೇರಿಯಲ್ಲಿ ಇರಬಹುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ತದನಂತರ ಆವೇಶದಿಂದಲೇ ಇಬ್ಬರು ಅಧಿಕಾರಿಗಳ ಕೊಠಡಿ ಕಡೆ ಹೋದ ಕಪಿಲ್ ಮೋಹನ್, ಅಲ್ಲಿನ ಸಿಬ್ಬಂದಿಗೂ ಪ್ರಶ್ನಿಸಿದ್ದಾರೆ. ಆದರೆ, ಸಿಬ್ಬಂದಿ ಸಾಹೇಬರು ಕಚೇರಿಗೆ ಬಂದಿಲ್ಲ, ಸಭೆಯಿದೆ, ಹೊರಗಡೆ ಹೋಗಿದ್ದಾರೆ ಎಂದು ಉತ್ತರಿಸಿ, ಸರ್, ನೀವು ಇಲ್ಲೇ ಕುಳಿತುಕೊಳ್ಳಿ ಸ್ಪಲ್ಪ ಸಮಯದಲ್ಲಿಯೇ ಬರಬಹುದು ಎಂದಿದ್ದಾರೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಪಿಲ್ ಮೋಹನ್ ಮೊದಲಿಗೆ ಲೋಕಾಯುಕ್ತ ಗ್ರಾಮಾಂತರ ಎಸ್ಪಿಅಬ್ದುಲ್ ಅಹದ್ ಅವರ ಕೊಠಡಿ ಬಳಿ ತೆರಳಿ ಪೇಪರ್‌ನಲ್ಲಿ ತಂದಿದ್ದ ಗಾಜಿನ ಪುಡಿ ಸುರಿದಿದ್ದಾರೆ.

ಅದೇ ರೀತಿ, ಐಜಿ ಪ್ರಣಬ್ ಮೊಹಂತಿ ಅವರ ಕೊಠಡಿ ಬಾಗಿಲ ಬಳಿಯೂ ಗಾಜಿನ ಪುಡಿಯನ್ನು ಹಾಕಿ ತೆರಳಿದ್ದಲ್ಲದೆ, ಈ ಸಂಬಂಧ ಸಿಬ್ಬಂದಿ ಪ್ರಶ್ನಿಸಿದರೂ, ಯಾವುದೇ ಉತ್ತರ ನೀಡದೆ ಕೋಪದಿಂದಲೇ ಅಲ್ಲಿಂದ ತೆರಳಿದ್ದಾರೆ. ಇಂತಹ ಅನುಚಿತ ವರ್ತನೆಯಿಂದ ಲೋಕಾಯುಕ್ತ ಕಚೇರಿ ಸಿಬ್ಬಂದಿಯೂ ಆಂತಕಗೊಂಡಿದ್ದಲ್ಲದೆ, ಅಚ್ಚರಿಗೆ ಕಾರಣವಾಗಿದೆ.

ಈ ಎಲ್ಲ ದೃಶ್ಯಗಳನ್ನು ಲೋಕಾಯುಕ್ತ ಸಿಬ್ಬಂದಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ ಎನ್ನಲಾಗಿದ್ದು, ಇಬ್ಬರು ಅಧಿಕಾರಿಗಳು ಕಚೇರಿಗೆ ಆಗಮಿಸಿದ ಬಳಿಕ ಘಟನೆಯ ಬಗ್ಗೆ ವಿವರಿಸಿದ್ದಾರೆ, ಅಧಿಕಾರಿಗಳ ಸಮ್ಮುಖದಲ್ಲಿ ಗಾಜಿನ ಪುಡಿಯನ್ನು ತೆಗೆದಿದ್ದಾರೆ ಎಂದು ಹೇಳಲಾಗಿದೆ.

ಗೈರು ಆಗಿದ್ದರು: ಐಎಎಸ್ ಅಧಿಕಾರಿ ಕಪಿಲ್ ಮೋಹನ್ ವಿರುದ್ಧ ಲೋಕಾಯುಕ್ತದಲ್ಲಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೂ.23ಕ್ಕೆ ಆಗಮಿಸಿ ಮಾಹಿತಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಕಪಿಲ್ ಮೋಹನ್ ಗೈರು ಹಾಜರಾಗಿದ್ದರು. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಮೋಹನ್ ಹಿನ್ನೆಲೆ: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಸಿಐಡಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳು ಕಪಿಲ್ ಮೋಹನ್ ಅವರ ಯಶವಂತಪುರದ ಗೋಲ್ಡನ್ ಗ್ರಾಂಡ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ್ದರು. 4.5 ಕೋಟಿ ನಗದು, ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣಗಳು, ಮಕ್ಕಳ ನೀಲಿ ಚಿತ್ರಗಳ ಸಿಡಿಗಳು ದೊರಕಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡಲಾಯಿತು.

ತನಿಖೆಗೆ ಆದೇಶ: ಅಬ್ದುಲ್ ಅಹದ್

ಕಪಿಲ್ ಮೋಹನ್ ಅವರು ಲೋಕಾಯುಕ್ತ ಐಜಿ ಪ್ರಣಬ್ ಮೊಹಂತಿ ಹಾಗೂ ತನ್ನ ಕಚೇರಿಗೆ ಬಂದು ಗಾಜಿನ ಪುಡಿಯನ್ನು ಹಾಕಿ ತೆರಳಿದ್ದಾರೆ ಎಂದು ಐಜಿ ಅವರ ಹಾಗೂ ತನ್ನ ಕಚೇರಿಯ ಸಿಬ್ಬಂದಿ ತನಗೆ ವರದಿ ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಇನ್‌ಸ್ಪೆಕ್ಟರ್ ದಯಾನಂದ್ ಅವರಿಗೆ ಸೂಚಿಸಿದ್ದೇನೆ. ಅವರು ಗಾಜಿನ ಪುಡಿಯನ್ನು ಹಾಗೂ ಕಚೇರಿಯ ಸಿಸಿ ಟಿವಿ ರೆಕಾರ್ಡಿಂಗ್ ಅನ್ನು ಪರಿಶೀಲಿಸುತ್ತಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಅಬ್ದುಲ್ ಅಹದ್ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X