Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ವಿಶಿಷ್ಟವಾಗಿ ನೆಲ-ಜಲದ ಸಂರಕ್ಷಣೆಗೆ...

ಕಡಬ: ವಿಶಿಷ್ಟವಾಗಿ ನೆಲ-ಜಲದ ಸಂರಕ್ಷಣೆಗೆ ಮುಂದಾಗಿದೆ ಯುವಕರ ತಂಡ

ವಾರ್ತಾಭಾರತಿವಾರ್ತಾಭಾರತಿ28 Jun 2016 8:00 PM IST
share
ಕಡಬ: ವಿಶಿಷ್ಟವಾಗಿ ನೆಲ-ಜಲದ ಸಂರಕ್ಷಣೆಗೆ ಮುಂದಾಗಿದೆ ಯುವಕರ ತಂಡ

ಕಡಬ, ಜೂ.28: ಸಾರ್ವಜನಿಕ ಪ್ರದೇಶದಲ್ಲಿ ಗಿಡ ನೆಟ್ಟು ವನ ಮಹೋತ್ಸವ ಆಚರಿಸುವ ಬದಲು ತಮ್ಮ ವ್ಯಾಪ್ತಿಯ ಪ್ರತಿ ಮನೆಮನೆಗೂ ತೆರಳಿ ಗಿಡನೆಟ್ಟು ಅದರ ಪೋಷಣೆ, ನಿರ್ವಹಣೆ ಮಾಡುವ ಮೂಲಕ ಮನೆಯವರಿಗೂ ಜಾಗೃತಿ ಉಂಟುಮಾಡುವ ಮೂಲಕ ಪರಿಸರ, ನೆಲ, ಜಲ ಸಂರಕ್ಷಣೆಯ ಕಾರ್ಯಕ್ಕೆ ಪಾಲ್ತಾಡುವಿನ ಶ್ರೀವಿಷ್ಣು ಮಿತ್ರವೃಂದ ಮಹತ್ವದ ಹೆಜ್ಜೆ ಇಟ್ಟಿದೆ. ಪರಿಸರ ಮಾಲಿನ್ಯ, ಬರ ಪರಿಸ್ಥಿತಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಗಿಡ ನೆಟ್ಟು, ಹಸಿರು ಬೆಳೆಸುವುದರ ಜೊತೆಗೆ ಇಂಗು ಗುಂಡಿ ನಿರ್ಮಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕಾರ್ಯಕ್ಕೆ ಸಣ್ಣ ಹೆಜ್ಜೆ ಇಟ್ಟಿದೆ.

ಕಳೆದ 5 ವರ್ಷದ ಹಿಂದೆ ಸ್ಥಾಪನೆಯಾದ ಸಮಾನ ಮನಸ್ಕ 13 ಮಂದಿ ಯುವಕರು ಸೇರಿ ರಚಿಸಿದ ಈ ಮಿತ್ರವೃಂದ ಅನೇಕ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿಯಾಗಿ ಗುರುತಿಸಿಕೊಂಡಿದೆ.

ಈ ಬಾರಿ ಜಿಲ್ಲೆಯಲ್ಲಿ ಎಂದೂ ಬಾರದ ಬರ ಪರಿಸ್ಥಿತಿ ತಲೆದೋರಿದ್ದು, ಇದರ ಪರಿಣಾಮವನ್ನು ಸ್ವಲ್ಪಮಟ್ಟಿಗಾದರೂ ಕಡಿಮೆ ಮಾಡಬೇಕೆಂಬ ನಿಟ್ಟಿನಲ್ಲಿ ಮನೆಮನೆ ಗಿಡನಾಟಿ, ಇಂಗುಗುಂಡಿ ನಿರ್ಮಾಣಮಾಡಿ ಸಮಾಜಕ್ಕೂ, ಆ ಮನೆಯವರಿಗೂ ಜಾಗೃತಿ ಮೂಡಲು ಈ ಕಾರ್ಯಕ್ಕೆ ಮುಂದಾಗಿದ್ದೇವೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂದು ನಾವು ನಿರೀಕ್ಷೆ ಇಟ್ಟಿಲ್ಲ. ನಾವು ಪರಿಸರದಿಂದ ಹಲವು ಪ್ರಯೋಜನಗಳನ್ನು ಪಡೆಯುತ್ತಿದ್ದೇವೆ. ಅದಕ್ಕಾಗಿ ಸಣ್ಣಮಟ್ಟಿನಲ್ಲಿ ಅದರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ. ಪ್ರತೀ ವರ್ಷ ಗಿಡನೆಟ್ಟು ವನಮಹೋತ್ಸವ ಆಚರಿಸುತ್ತೇವೆ. ಆದರೆ ಗಿಡ ನೆಟ್ಟ ನಂತರ ಅದರ ಕಡೆ ನೋಡುವುದು ಕಡಿಮೆಯಾಗುತ್ತದೆ. ಯಾವುದೇ ಕಾರ್ಯ ಮಾಡಿದರೂ ಅದರ ಉದ್ದೇಶ ಈಡೇರಬೇಕೆಂಬುದು ಮಿತ್ರವೃಂದದ ಆಶಯ. ಈ ನಿಟ್ಟಿನಲ್ಲಿ ಈ ಕೆಲಸಕ್ಕೆ ಸಣ್ಣ ಹೆಜ್ಜೆ ಇಡುತ್ತಿದ್ದೇವೆ. ಮುಂದೆ ಇದನ್ನು ಸ್ಥಳೀಯ ಶಾಲೆಗಳಲ್ಲಿ ನಡೆಸುವ ಇರಾದೆ ಇದೆ ಎನ್ನುತ್ತಾರೆ ಇದರ ಸದಸ್ಯರು.

ಸಸ್ಯನಾಟಿ ಕಾರ್ಯಕ್ಕೆ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಚಾಲನೆ ನೀಡಿ ಮಾತನಾಡಿ, ಮನೆಮನೆಗೆ ಭೇಟಿ ನೀಡಿ ಗಿಡ ನೆಡುವ ಕಾರ್ಯಕ್ರಮ ನಡೆಸುವ ಮೂಲಕ ಇಲ್ಲಿನ ಯುವಕರು ಉತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ಅದರ ಮಹತ್ವವನ್ನು, ಅನಿವಾರ್ಯತೆಯನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜೊತೆಗೆ ಅದರ ನಿರ್ವಹಣೆಯ ಹೊಣೆಯನ್ನು ತಾವೇ ವಹಿಸಿ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಯುವ ಸಂಸ್ಥೆಗಳ ಸಮಾಜ ಮುಖಿ ಚಟುವಟಿಕೆಗೆ ಒಕ್ಕೂಟ, ಯುವಜನ ಸೇವಾ ಕ್ರಿಡಾ ಇಲಾಖೆಯ ಮೂಲಕ ಸಂಪೂರ್ಣ ಪ್ರೋತ್ಸಾಹ ನೀಡಲಾಗುವುದು ಎಂದರು.

ಇಂಗುಗುಂಡಿ ನಿರ್ಮಾಣಕ್ಕೆ ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸುಧಾಮ ಮಣಿಯಾಣಿ ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಸುಬ್ರಹ್ಮಣ್ಯ ಬಿ.ಎಸ್.ಬರೆಪ್ಪಾಡಿ, ಸವಣೂರು ಜೆಸಿಐ ಪೂರ್ವಾಧ್ಯಕ್ಷ ಶಶಿಕುಮಾರ್ ಬಿ.ಎನ್., ವಿಷ್ಣು ಮಿತ್ರವೃಂದದ ಮನೀಶ್ ಕುಮಾರ್ ಕೆ., ಶಿವಪ್ರಸಾದ್ ಕೆ., ನವೀನ ನಾಯ್ಕ ಕೆ., ಜಗದೀಶ ಅಂಕತ್ತಡ್ಕ, ಸಂತೋಷ್ ನಾಯ್ಕ, ಪುರಂದರ, ಗಣೇಶ್ ಬೇರಿಕೆ, ತೇಜಸ್, ದೀಕ್ಷಿತ್ ರೈ, ಬಾಲಕೃಷ್ಣ ರೈ ನೆಲ್ಯಾಜೆ ಉಪಸ್ಥಿತರಿದ್ದರು.

ಪರಿಸರದ ಪಾಲ್ತಾಡು, ತಾರಿಪಡ್ಪು, ಕಾಪುತಕಾಡು, ಕಾಪುತಮೂಲೆ, ಬೇರಿಕೆ, ನೆಲ್ಯಾಜೆ, ಮಣಿಕ್ಕರದಲ್ಲಿ ಈ ಕಾರ್ಯವನ್ನು ನಡೆಸಲಾಯಿತು.
ಮಿತ್ರವೃಂದದ ಪ್ರವೀಣ್ ಕುಮಾರ್ ಸ್ವಾಗತಿಸಿ, ದೇವಿಪ್ರಸಾದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X