Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನನ್ನ ಮಗಳ ರಕ್ಷಣೆಗೆ ಯಾರೂ...

‘ನನ್ನ ಮಗಳ ರಕ್ಷಣೆಗೆ ಯಾರೂ ಪ್ರಯತ್ನಿಸಲಿಲ್ಲ’ ಹತ ಇನ್ಫೋಸಿಸ್ ಟೆಕ್ಕಿಯ ತಂದೆಯ ಅಳಲು

ವಾರ್ತಾಭಾರತಿವಾರ್ತಾಭಾರತಿ28 Jun 2016 8:23 PM IST
share
‘ನನ್ನ ಮಗಳ ರಕ್ಷಣೆಗೆ ಯಾರೂ ಪ್ರಯತ್ನಿಸಲಿಲ್ಲ’ ಹತ ಇನ್ಫೋಸಿಸ್ ಟೆಕ್ಕಿಯ ತಂದೆಯ ಅಳಲು

ಚೆನ್ನೈ,ಜೂ.28: ಕಳೆದ ಶುಕ್ರವಾರ ಬೆಳ್ಳಂಬೆಳಿಗ್ಗೆ ಇಲ್ಲಿಯ ನುಂಗಂಬಾಕಂ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಇನ್ಫೋಸಿಸ್ ಉದ್ಯೋಗಿ ಸ್ವಾತಿ(24) ಯುವಕನೋರ್ವನಿಂದ ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದುಕೊಂಡಿದ್ದರೂ ಅಲ್ಲಿದ್ದ ಯಾರೂ ಆಕೆಯ ನೆರವಿಗೆ ಧಾವಿಸಿರಲಿಲ್ಲ. ಎಲ್ಲರೂ ಮಾನವೀಯತೆಯನ್ನು ಕಳೆದುಕೊಂಡುಬಿಟ್ಟಿದ್ದರು. ಸಿನಿಮಾದ ದೃಶ್ಯದಂತೆ ಅದನ್ನು ವೀಕ್ಷಿಸಿ ಮುಂದಿನ ರೈಲು ಬಂದಾಗ ಏನೂ ನಡೆದೇ ಇಲ್ಲವೆಂಬಂತೆ ಅದರಲ್ಲಿ ಪ್ರಯಾಣ ಬೆಳೆಸಿದ್ದರು. ಪೊಲೀಸರೂ ಬಂದಿದ್ದು ವಿಳಂಬವಾಗಿ. ಅವರು ಬರುವವರೆಗೂ ಎರಡು ಗಂಟೆಗಳ ಕಾಲ ಸ್ವಾತಿಯ ಶವ ಅಲ್ಲಿಯೇ ಬಿದ್ದುಕೊಂಡಿತ್ತು.
ಈ ಬರ್ಬರ ಹತ್ಯೆ ನಡೆದ ನಾಲ್ಕು ದಿನಗಳ ಬಳಿಕ ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಸ್ವಾತಿಯ ತಂದೆ ಸಂತಾನ ಗೋಪಾಲಕೃಷ್ಣನ್, ಮೂಕಪ್ರೇಕ್ಷರಾಗಿದ್ದ ಅಲ್ಲಿದ್ದವರು ನಮ್ಮ ಮಗಳನ್ನು ಜೀವಂತ ನೋಡುವ ಅವಕಾಶದಿಂದ ನಮ್ಮನ್ನು ವಂಚಿಸಿದರು ಎಂದು ನೋವು ತೋಡಿಕೊಂಡರು.
ಸ್ವಾತಿ ತುಂಬ ಮೃದು ಸ್ವಭಾವದ ಹುಡುಗಿಯಾಗಿದ್ದಳು,ಕರುಣೆಯ ಸ್ವಭಾವದವಳಾಗಿದ್ದಳು. ತನ್ನ ಅಂಗಾಂಗಗಳನ್ನು ದಾನ ಮಾಡಲು ಆಕೆ ಬಯಸಿದ್ದಳು. ನಮಗೆ ಅವು ಲಭ್ಯವಿದ್ದಿದ್ದರೆ ಅಗತ್ಯವುಳ್ಳವರಿಗೆ ನಾವು ನೀಡುತ್ತಿದ್ದೆವು. ಅವರನ್ನು ನೋಡಿಯಾದರೂ ನನ್ನ ಮಗಳು ಬದುಕಿದ್ದಾಳೆ ಎಂದು ನಾವು ಸಮಾಧಾನ ಪಟ್ಟುಕೊಳ್ಳಬಹುದಾಗಿತ್ತು ಎಂದರು.
ನನ್ನ ಮಗಳ ಮೇಲೆ ದಾಳಿ ನಡೆದಾಗ ಯಾರಾದರೂ ಪ್ರತಿಕ್ರಿಯಿಸಿದ್ದರೆ ಅಥವಾ ವಿರೋಧಿಸಿದ್ದರೆ ಈ ಹತ್ಯೆಯನ್ನು ತಡೆಯಬಹುದಿತ್ತು. ಆದರೆ ಅಲ್ಲಿದ್ದವರು ಕಲ್ಲಾಗಿ ನಿಂತಿದ್ದೇಕೆ ಎನ್ನುವುದು ನನಗೆ ಗೊತ್ತಿಲ್ಲ, ಬಹುಶಃ ಹೇವರಿಕೆ ಅಥವಾ ಒಂದು ಬಗೆಯ ಸ್ವಾರ್ಥ ಕಾರಣವಿರಬಹುದು. ಯಾರೂ ಹೀಗಿರಬಾರದು ಎಂದರು.
ಸ್ವಾತಿಯ ಹಂತಕನನ್ನು ಎರಡು ದಿನಗಳಲ್ಲಿ ಪತ್ತೆ ಹಚ್ಚುವಂತೆ ಮದ್ರಾಸ ಉಚ್ಚ ನ್ಯಾಯಾಲಯವು ಸೋಮವಾರ ಚೆನ್ನೈ ಪೊಲೀಸರಿಗೆ ತಾಕೀತು ಮಾಡಿದೆ. ಇಲ್ಲದಿದ್ದರೆ ಕ್ರಮ ಎದುರಿಸುವಂತೆ ಎಚ್ಚರಿಕೆ ನೀಡಿದೆ.
ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದ ನ್ಯಾಯಾಲಯವು,ಎಲ್ಲಿದ್ದಾರೆ ನಿಮ್ಮ ಪೊಲೀಸ್ ಅಧಿಕಾರಿಗಳು? ಸ್ವಾತಿಯ ಶವ ಪ್ರದರ್ಶನಕ್ಕಿಟ್ಟಂತೆ ಎರಡು ಗಂಟೆಗಳ ಕಾಲ ಅಲ್ಲಿಯೇ ಬಿದ್ದಿತ್ತು. ಸಂವಿಧಾನದಡಿ ಮೃತರಿಗೂ ಘನತೆಯ ಹಕ್ಕಿದೆ ಎಂದು ಕಿಡಿಕಾರಿತ್ತು.
ಪೊಲೀಸರು ಬಿಡುಗಡೆಗೊಳಿಸಿರುವ ವೀಡಿಯೊ ಫೂಟೇಜ್‌ಗಳಲ್ಲಿ ಬೆನ್ನಿಗೆ ಚೀಲವನ್ನು ಏರಿಸಿಕೊಂಡಿದ್ದ ಶಂಕಿತ ಹಂತಕ ಲಗುಬಗೆಯಿಂದ ನಡೆದುಕೊಂಡು ಹೋಗುತ್ತಿರುವ ಮತ್ತು ಬಳಿಕ ನಿಲ್ದಾಣದಿಂದ ಓಡುತ್ತಿರುವ ದೃಶ್ಯಗಳಿವೆ.
ಹಂತಕನನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ನಮಗೆ ಅವರ ಮೇಲೆ ಸಂಪೂರ್ಣ ನಂಬಿಕೆಯಿದೆ ಎಂದು ಸ್ವಾತಿಯ ತಂದೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X