Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್‌ಗೆ 11 ಕ್ಷೇತ್ರಗಳಲ್ಲಿ ಗೆಲುವು

ಜೆಡಿಎಸ್‌ಗೆ 11 ಕ್ಷೇತ್ರಗಳಲ್ಲಿ ಗೆಲುವು

ಸೊರಬ ತಾಪಂ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ28 Jun 2016 11:17 PM IST
share
ಜೆಡಿಎಸ್‌ಗೆ 11 ಕ್ಷೇತ್ರಗಳಲ್ಲಿ ಗೆಲುವು

ಸೊರಬ, ಜೂ. 28: ತೀವ್ರ ಕುತೂಹಲ ಕೆರಳಿಸಿದ್ದ ಸೊರಬ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಜೆಡಿಎಸ್ 11 ಕ್ಷೇತ್ರಗಳಲ್ಲಿ ವಿಜಯಗಳಿಸುವುದರೊಂದಿಗೆ ಸ್ಪಷ್ಟ ಬಹುಮತ ಪಡೆದಿದ್ದರೆ, ಬಿಜೆಪಿ 5 ಸ್ಥಾನಗಳನ್ನು ಗೆದ್ದು, ವಿರೋಧ ಪಕ್ಷದಲ್ಲಿದ್ದರೆ, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ತಾಲೂಕಿನಲ್ಲಿ ತನ್ನ ಅಸ್ತಿತ್ವ ತೋರಿಸಿದೆ. ಜೆಡಿಎಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಶಾಸಕ ಮಧುಬಂಗಾರಪ್ಪನವರ ಕೀರೀಟಕ್ಕೆ ಮತ್ತೊಂದು ಗರಿ ಬಂದಂತಾಗಿದೆ. ಜೆಡಿಎಸ್‌ನ ವಿಜಯಿ ಅಭ್ಯರ್ಥಿಗಳು: ಶಕುನವಳ್ಳಿ ಕ್ಷೇತ್ರ: ಅಂಜಲಿ ಸಂಜೀವ್ ಲಕ್ಕವಳ್ಳಿ, ಅಗಸನಹಳ್ಳಿ ಕ್ಷೇತ್ರ: ಡಿ.ನರೇಂದ್ರ ಒಡೆಯರ್, ಭಾರಂಗಿ ಕ್ಷೇತ್ರ:

ಲತಾ ಸುರೇಶ್, ಚಂದ್ರಗುತ್ತಿ ಕ್ಷೇತ್ರ: ನಾಗರಾಜ ಎನ್.ಜೆ., ಎಣ್ಣೆಕೊಪ್ಪ ಕ್ಷೇತ್ರ: ಸುರೇಶ್ ಎಚ್., ಹಳೇಸೊರಬ ಕ್ಷೇತ್ರ: ಇಂದಿರಾ ಕೃಷ್ಣಪ್ಪ, ಕುಬಟೂರು ಕ್ಷೇತ್ರ: ರೇಣುಕಾ ಮಂಜುನಾಥ, ಉಳವಿ ಕ್ಷೇತ್ರ: ನಯನ ಶ್ರೀಪಾದ ಹೆಗಡೆ, ಹೊಸಬಾಳೆ ಕ್ಷೇತ್ರ:

ಜ್ಯೋತಿ ನಾರಾಯಣಪ್ಪ, ಹರೀಶಿ ಸುನೀಲ ಗೌಡ, ಗುಡವಿ ಕ್ಷೇತ್ರ:

ಮಂಜಮ್ಮ ರಾಮಪ್ಪಆಯ್ಕೆಯಾಗಿದ್ದಾರೆ. ಬಿಜೆಪಿ ವಿಜಯಿ ಅಭ್ಯರ್ಥಿಗಳು: ಉದ್ರಿ ಕ್ಷೇತ್ರ: ಬಂಗಾರಪ್ಪ ಗೌಡ ಕೆ.ಎಸ್., ಮಾವಲಿ ಕ್ಷೇತ್ರ: ಮೀನಾಕ್ಷಿ ನಿರಂಜನ್, ತೆಲಗುಂದ ಕ್ಷೇತ್ರ: ಕಮಲಾ ಕುಮಾರ್, ಜಡೆ ಕ್ಷೇತ್ರ: ವಿಜಯ ಕುಮಾರ್ ಹೊಸಕೊಪ್ಪ, ಕುಪ್ಪಗಡ್ಡೆ ಕ್ಷೇತ್ರ: ಪುರುಷೋತ್ತಮ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ವಿಜಯಿ ಅಭ್ಯರ್ಥಿಗಳು:

ತತ್ತೂರು ಕ್ಷೇತ್ರ: ಮೀನಾಕ್ಷಿ ಆರ್., ಅನವಟ್ಟಿ ಕ್ಷೇತ್ರ: ಪಿ.ಹನುಮಂತಪ್ಪ, ಶಿಗ್ಗಾ ಕ್ಷೇತ್ರ: ನಾಗರಾಜ ಚಿಕ್ಕಸವಿ ಆಯ್ಕೆಯಾಗಿದ್ದಾರೆ. ವಿಜೇತ ಅಭ್ಯರ್ಥಿಗಳಿಗೆ ಚುನಾವಣಾಧಿ ಕಾರಿಗಳು ಪ್ರಮಾಣ ಪತ್ರ ವಿತರಿಸಿದರು. ಚುನಾವಣಾಧಿಕಾರಿಗಳಾಗಿ ತಹಶೀಲ್ದಾರ್ ಕವಿತಾ ಯೋಗಪ್ಪನವರ್, ಜಿಪಂ ಎಇಇ ಎನ್.ನಂಜುಂಡಸ್ವಾಮಿ ಸಹಾಯಕ ಚುನಾವಣಾಧಿಕಾರಿಗಳಾಗಿ ಸಂತೋಷ್ ಕುಮಾರ್ ಹಾಗೂ ಟಿ.ಅಂಬಾಜಿ ಕಾರ್ಯನಿರ್ವಹಿಸಿದರು.

ಚುನಾವಣೆಯ ಮತ ಎಣಿಕೆ ಕಾರ್ಯವು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 8ರಿಂದ ಆರಂಭವಾಗುತ್ತಿದ್ದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರು ತಂಡೋಪತಂಡವಾಗಿ ಎಣಿಕೆ ಕೇಂದ್ರದ ಮುಂಭಾಗದಲ್ಲಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಕುತೂಹಲದಿಂದ ಫಲಿತಾಂಶ ವೀಕ್ಷಿಸಿದರು. ತಾಪಂ ಚುನಾವಣೆಯ ಫಲಿತಾಂಶ ಜನರ ನಿರೀಕ್ಷೆಯಂತೆ ಮಧ್ಯಾಹ್ನ 12:30ರ ವರೆಗೆ ನಡೆದು ಅಂತಿಮ ಫಲಿತಾಂಶ ಹೊರಬಿದಿದ್ದೆ. ವಿಶೇಷ ಎಂಬಂತೆ ತಾಲೂಕಿನ ಜನರು ಈ ಮೊದಲೆ ಊಹಿಸಿದಂತೆ ಫಲಿತಾಂಶ ಬಂದಿದೆ. 19 ತಾಪಂ ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಸಾಧಿಸಿದ್ದು, ಕಳೆದ ಬಾರಿಗಿಂತ ಹೆಚ್ಚುವರಿಯಾಗಿ 5 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಶಾಸಕ ಮಧು ಬಂಗಾರಪ್ಪ ರಾಜಕೀಯ ಚಾಣಾಕ್ಷತನ ಮೆರೆದಿದ್ದಾರೆ. ಬಿಜೆಪಿ ಕೇವಲ 5 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಕಳೆದ ಬಾರಿಗಿಂತ ಒಂದು ಕ್ಷೇತ್ರವನ್ನು ಕಳೆದುಕೊಂಡು ತುಸು ಚಿಂತೆಯನ್ನು ಉಂಟುಮಾಡಿದೆ. ಕಾಂಗ್ರೆಸ್ 3 ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಕಳೆದ ಬಾರಿಗಿಂತ 3 ಕ್ಷೇತ್ರಗಳನ್ನು ಕಳೆದುಕೊಂಡು ಶೇ. 50ರಷ್ಟು ತಾಪಂ ಕ್ಷೇತ್ರಗಳನ್ನು ಕಳೆದುಕೊಂಡಿದೆ.

    

ತಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು, ಅದರನ್ವಯ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ ಮಹಿಳೆ ಅಲಂಕರಿಸಲಿದ್ದಾರೆ. ಪ್ರಸ್ತುತ ಫಲಿತಾಂಶವನ್ನು ಗಮನಿಸಿದಾಗ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ಅಲಂಕರಿಸುವುದು ಬಹುತೇಕ ನಿಶ್ಚಿತವಾಗಿದೆ. ಆದರೆ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಲು ಜೆಡಿಎಸ್‌ನಲ್ಲಿ ಯಾವುದೇ ಮಹಿಳಾ ಚುನಾಯಿತ ಪ್ರತಿನಿಧಿಗಳು ಇಲ್ಲದೇ ಇರುವುದು ಆತಂಕಕ್ಕೀಡು ಮಾಡಿದೆ. ಈ ಸ್ಥಾನವನ್ನು ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಸೂಕ್ತ ಅಭ್ಯರ್ಥಿಗಳಿದ್ದು, ಅವರಲ್ಲಿ ಬಿಜೆಪಿ ಅಭ್ಯರ್ಥಿ ಉಪಾಧ್ಯಕ್ಷರಾಗಬಹುದು ಎಂಬ ಊಹೆ ಇದೆ. ಅಧ್ಯಕ್ಷ ಸ್ಥಾನವನ್ನು ಬಹು ನಿರೀಕ್ಷಿತ ಉಳಿವಿ ಕ್ಷೇತ್ರದ ಜೆಡಿಎಸ್ ವಿಜೇತ ಅಭ್ಯರ್ಥಿ ನಯನ ಶ್ರೀಪಾದ ಹೆಗಡೆ ಅಧ್ಯಕ್ಷ ಗಾದಿ ಏರುವ ಸಾಧ್ಯತೆ ಹೆಚ್ಚಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X