Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಂಜಿಮೊಗರು ಜೋಡಿ ಕೊಲೆ ಆರೋಪಿಗಳನ್ನು...

ಪಂಜಿಮೊಗರು ಜೋಡಿ ಕೊಲೆ ಆರೋಪಿಗಳನ್ನು ಇನ್ನಾದರೂ ಪತ್ತೆ ಹಚ್ಚಿ

ವಾರ್ತಾಭಾರತಿವಾರ್ತಾಭಾರತಿ28 Jun 2016 11:43 PM IST
share

ಮಾನ್ಯರೆ,
ರಾಜ್ಯದ ಜನತೆಯು ಬೆಚ್ಚಿ ಬೀಳುವಂತೆ ಮಾಡಿದ್ದ ಪಂಜಿಮೊಗರು ಜೋಡಿ ಕೊಲೆ ನಡೆದು ಜೂನ್ 28 ರಂದು ಐದು ವರ್ಷಗಳಾಗುತ್ತಿದೆ ಆರೋಪಿಗಳ ಪತ್ತೆ ಮಾತ್ರ ಇನ್ನೂ ಆಗಿಲ್ಲ. ಮುಗ್ಧ ತಾಯಿ ಮಗುವಿನ ಕೊಲೆ ಹಾಡ ಹಗಲೇ ನಡೆದರೂ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾದಾಗ ಪಂಜಿಮೊಗರಿನ ನಾಗರಿಕರು ಡಿ.ವೈ.ಎಫ್.ಐ. ಜೊತೆ ಸೇರಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಹಲವಾರು ಪ್ರತಿಭಟನೆ ಕಾಲ್ನಡಿಗೆ ನಡೆಸಿ ಪ್ರಕರಣ ಸಿ.ಐ.ಡಿ.ಗೆ ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಿ.ಐ.ಡಿ. ತನಿಖೆಯಲ್ಲೂ ಯಾವುದೇ ರೀತಿಯ ಪ್ರಗತಿ ಕಾಣುತ್ತಿಲ್ಲ. ಸಿ.ಐ.ಡಿ. ತನಿಖೆಯ ಪ್ರಗತಿಯ ಕಡೆ ರಾಜ್ಯ ಸರಕಾರದ ಪ್ರತಿನಿಧಿಯಾದ ಶಾಸಕರು ಕೂಡಾ ಗಮನ ಹರಿಸುತ್ತಿಲ್ಲ.
ಜೋಡಿ ಕೊಲೆ ನಡೆದ ಸಂದರ್ಭ ರಾಜ್ಯದಲ್ಲಿ ಬಿ.ಜೆ.ಪಿ ಸರಕಾರವಿತ್ತು. ಆ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಚುನಾವಣೆ ದೃಷ್ಟಿಕೋನವನ್ನಿರಿಸಿ ಈಗಿನ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ಕೂಡ ಮಾಡಿತ್ತು. ಶಾಸಕರು ಚುನಾವಣಾ ಪ್ರಚಾರ ಸಂದರ್ಭ ಪಂಜಿಮೊಗರು ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಆಶ್ವಾಸನೆೆ ನೀಡಿ ಗೆದ್ದ ನಂತರ ಎಲ್ಲವನ್ನೂ ಮರೆತಿರುವ ಹಾಗಿದೆ. ಪಂಜಿಮೊಗರಿಗೆ ಭೇಟಿ ನೀಡುವ ಸಂದರ್ಭ ಪ್ರಶ್ನಿಸಿದಾಗ ನುಣುಚಿಕೊಳ್ಳುವ, ಬೇಜವಾಬ್ದಾರಿ ಉತ್ತರ ನೀಡುವ ಶಾಸಕರು ಮುಗ್ಧ ಜೀವಗಳು ಬಲಿಯಾಗಿರುವುದನ್ನೇ ಮರೆತಂತಿದೆ. ಇನ್ನು ಜಿಲ್ಲೆಯಲ್ಲಿನ ಇತರ ಶಾಸಕರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ತಮ್ಮದೇ ರಾಜ್ಯ ಸರಕಾರವಿದ್ದರೂ ಸಿ.ಐ.ಡಿ ತನಿಖೆಯ ಪ್ರಗತಿಯನ್ನೂ ಪರಿಶೀಲಿಸದ ಜಿಲ್ಲಾ ಉಸ್ತುವಾರಿ ಮಂತ್ರಿಯವರು, ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಇದ್ದರೂ ಈ ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲ.
ಜಿಲ್ಲೆಯ ಹಲವಾರು ಪ್ರಕರಣಗಳು ಸಿ.ಐ.ಡಿ ಪಾಲಿಗೆ ಕಬ್ಬಿಣದ ಕಡಲೆಯಂತಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗುತ್ತಿರುವ ಸಿ.ಐ.ಡಿ ಮೇಲಿನ ನಂಬಿಕೆಯನ್ನು ಜನತೆ ಕಳೆದುಕೊಳ್ಳುವಂತಾಗಿದೆ. ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ವೈಫಲ್ಯ ಕಂಡಿರುವ ಸಿ.ಐ.ಡಿ. ತನಿಖೆಯನ್ನು ರದ್ದುಗೊಳಿಸಿ ಉನ್ನತ ಮಟ್ಟದ ತನಿಖೆಗೆ ನಮ್ಮ ಬೇಡಿಕೆಯಾಗಿದೆ. ಪಂಜಿಮೊಗರಿನ ತಮ್ಮದೇ ಸಮುದಾಯದ ತಾಯಿ ಮಗುವಿನ ಎರಡು ಮುಗ್ಧ ಜೀವಗಳ ಕೊಲೆ ಪ್ರಕರಣವನ್ನು ಶಾಸಕರು ಇನ್ನಾದರೂ ಗಮನಹರಿಸಬೇಕಾಗಿದೆ. ಪವಿತ್ರ ರಮಝಾನ್ ತಿಂಗಳ ಈ ಸಂದರ್ಭದಲ್ಲಾದರೂ ಈ ಪ್ರಕರಣಕ್ಕೆ ನ್ಯಾಯ ಒದಗಿಸಿ.
-ನಾಗರಿಕರು
ಪಂಜಿಮೊಗರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X