Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರಿ ನೌಕರರಿಗೆ ‘ಬಂಪರ್’

ಕೇಂದ್ರ ಸರಕಾರಿ ನೌಕರರಿಗೆ ‘ಬಂಪರ್’

7ನೆ ವೇತನ ಆಯೋಗದ ಶಿಫಾರಸಿಗೆ ಕೇಂದ್ರ ಸಂಪುಟ ಅಸ್ತು

ವಾರ್ತಾಭಾರತಿವಾರ್ತಾಭಾರತಿ29 Jun 2016 12:21 PM IST
share
ಕೇಂದ್ರ ಸರಕಾರಿ ನೌಕರರಿಗೆ ‘ಬಂಪರ್’

ಹೊಸದಿಲ್ಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ನಿವೃತ್ತರ ಪಿಂಚಣಿಯನ್ನು ಶೇಕಡ 24ರಷ್ಟು ಹೆಚ್ಚಳವಾಗಲಿದೆ. ಆದರೆ ಈ ದೊಡ್ಡ ವಂಚನೆಯ ಕಥೆಯ ಪ್ರಮುಖ ಹತ್ತು ಅಂಶಗಳು ಇಲ್ಲಿವೆ ನೋಡಿ.

ಕೇಂದ್ರ ಸರ್ಕಾರದ ಈ ಕ್ರಮದಿಂದ 60 ಲಕ್ಷ ಪಿಂಚಣಿದಾರರೂ ಸೇರಿದಂತೆ ಒಂದು ಕೋಟಿ ನೌಕರರಿಗೆ ಲಾಭವಾಗಲಿದೆ. 2016ರ ಜನವರಿ ಒಂದರಿಂದ ಪೂರ್ವಾನ್ವಯವಾಗುವಂತೆ ವೇತನವನ್ನು ಶೇಕಡ 23.5ರಷ್ಟು ಮತ್ತು ಪಿಂಚಣಿಯನ್ನು ಶೇಕಡ 24ರಷ್ಟು ಹೆಚ್ಚಿಸಲಾಗಿದೆ.

ಹಿಂದಿನ ಏರಿಕೆಗಳಿಗೆ ಹೋಲಿಸಿದರೆ ಈ ಬಾರಿಯ ಏರಿಕೆ ಪ್ರಮಾಣ ಕಡಿಮೆ. ಆದರೂ ಸರ್ಕಾರಕ್ಕೆ ಇದು ಒಂದು ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಹೊರೆಗೆ ಕಾರಣವಾಗಲಿದೆ. ಅಂದರೆ ದೇಶದ ಒಟ್ಟು ಜಿಡಿಪಿಯ ಶೇಕಡ 0.7ರಷ್ಟು ಈ ಉದ್ದೇಶಕ್ಕೆ ವ್ಯಯವಾಗಲಿದೆ. ಕಳೆದ ಏಳು ದಶಕದಲ್ಲೇ ಆಗಿರುವ ಕಡಿಮೆಏರಿಕೆ ಇದಾಗಿದೆ.

ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹಾಗೂ ಭತ್ಯೆ ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.

ಪ್ರತಿ ಆರು ತಿಂಗಳಿಗೊಮ್ಮೆ ಬೆಲೆ ಏರಿಕೆಗೆ ಅನುಗುಣವಾಗಿ ವೇತನ ಪರಿಷ್ಕರಣೆಯಾಗುವುದಲ್ಲದೇ ಸ್ವಾತಂತ್ರ್ಯದ ಬಳಿಕ ಪ್ರತಿ 10 ವರ್ಷಗಳಿಗೊಮ್ಮೆ ಆಕರ್ಷಕ ವೇತನ ಹೆಚ್ಚಳ ಸರ್ಕಾರಿ ನೌಕರರಿಗೆ ಸಿಗುತ್ತಿದೆ. ಹೊಸ ಯೋಜನೆಯ ಅನ್ವಯ ಸರ್ಕಾರಿ ನೌಕರರ ಗರಿಷ್ಠ ವೇತನ ಮಾಸಿಕ 2.5 ಲಕ್ಷ ರೂಪಾಯಿ ಆಗಿದ್ದು, ಇದು ಗರಿಷ್ಠ ವೇತನವಾದ 90 ಸಾವಿರಕ್ಕಿಂತ ದುಪ್ಪಟ್ಟಿಗಿಂತಲೂ ಅಧಿಕ. ಸರ್ಕಾರಿ ನೌಕರರ ಕನಿಷ್ಠ ವೇತನ ಮಾಸಿಕ 18 ಸಾವಿರ ಆಗಲಿದ್ದು, ಹಾಲಿ ಇರುವ ಕಿರಿಯ ಉದ್ಯೋಗಿಗಳಿಗೆ ನೀಡುವ 7000 ರೂಪಾಯಿಗಿಂತ ಎರಡುಪಟ್ಟಿಗಿಂತಲೂ ಅಧಿಕ. ವೇತನ ಹೆಚ್ಚಳ ಪರಿಣಾಮವಾಗಿ ಗ್ರಾಹಕರ ಖರ್ಚು ಹೆಚ್ಚಿ, ಆರ್ಥಿಕ ಪ್ರಗತಿಗೆ ಪೂರಕವಾಗುತ್ತದೆ ಎಂಬ ನಿರೀಕ್ಷೆ ಸರ್ಕಾರದ್ದು.

ಆದರೆ ಹೆಚ್ಚುವರಿ ಹಣದ ಹರಿವಿನಿಂದ ಹಣದುಬ್ಬರ ಏರಿಕೆಯಾಗುವ ಸಾಧ್ಯತೆಯನ್ನು ತಜ್ಞರು ಅಂದಾಜು ಮಾಡುತ್ತಾರೆ. ಹಣದುಬ್ಬರ ನಿಯಂತ್ರಿಸುವ ಸಲುವಾಗಿ ಬಂಡವಾಳ ಮಾರುಕಟ್ಟೆ ಮೇಲೆ ನಿಗಾ ಇಡಲು ಸರ್ಕಾರ ನಿರ್ಧರಿಸಿದೆ.

ಸಾಮಾನ್ಯವಾಗಿ ವೇತನ ಹೆಚ್ಚಳವಾದಾಗ ನೌಕರರು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುವುದು ಹೆಚ್ಚು. ಈ ಬಾರಿಯೂ ಅದು ನಿಜವಾದರೆ, ಬೇಡಿಕೆ ಕುಸಿದಿರುವ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪುನಶ್ಚೇತನ ಸಿಗಲಿದೆ ಎಂದು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಏಳನೇ ವೇತನ ಆಯೋಗದ ಶಿಫಾರಸ್ಸಿಗೆ ಅಸ್ತು

ಏಳನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಆಂಗೀಕಾರ ನೀಡಿದ್ದು, ಇದರಿಂದ ಒಂದು ಕೋಟಿ ಮಂದಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ವೇತನ ಆಯೋಗ ಕಳೆದ ನವೆಂಬರ್‌ನಲ್ಲಿ ನೀಡಿದ ವರದಿಯಲ್ಲಿ ಶೇಕಡ 14.27ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಿತ್ತು. ಇದು 70 ವರ್ಷಗಳಲ್ಲೇ ಕನಿಷ್ಠ ಏರಿಕೆ. ಆರನೇ ವೇತನ ಆಯೋಗ ಶೇಕಡ 20ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಿತ್ತು. 2008ರಲ್ಲಿ ಅದನ್ನು ಜಾರಿಗೆ ತರುವಾಗ ಸರ್ಕಾರ ಅದನ್ನು ದ್ವಿಗುಣಗೊಳಿಸಿತು.

ಈ ಶಿಫಾರಸ್ಸುಗಳ ಬಗ್ಗೆ ಅಗತ್ಯ ವಿಧಿವಿಧಾನಗಳನ್ನು ನೆರವೇರಿಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿಯಿಯೊಂದನ್ನು ಜನವರಿಯಲ್ಲಿ ನೇಮಕ ಮಾಡಿತ್ತು. ಏಳನೇ ವೇತನ ಆಯೋಗದ ಪ್ರಯೋಜನ ಸುಮಾರು 50 ಲಕ್ಷ ಮಂದಿ ಕೇಂದ್ರ ಸರ್ಕಾರಿ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ದೊರಕಲಿದೆ.

ಹೊಸ ಯೋಜನೆಯ ಅನ್ವಯ ಸರ್ಕಾರಿ ನೌಕರರ ಗರಿಷ್ಠ ವೇತನ ಮಾಸಿಕ 2.5 ಲಕ್ಷ ರೂಪಾಯಿ ಆಗಿದ್ದು, ಇದು ಹಾಲಿ ಇರುವ ಗರಿಷ್ಠ ವೇತನವಾದ 90 ಸಾವಿರಕ್ಕಿಂತ ದುಪ್ಪಟ್ಟಿಗಿಂತಲೂ ಅಧಿಕ. ಸರ್ಕಾರಿ ನೌಕರರ ಕನಿಷ್ಠ ವೇತನ ಮಾಸಿಕ 18 ಸಾವಿರ ಆಗಲಿದ್ದು, ಹಾಲಿ ಇರುವ ಕಿರಿಯ ಉದ್ಯೋಗಿಗಳಿಗೆ ನೀಡುವ 7000 ರೂಪಾಯಿಗಿಂತ ಎರಡುಪಟ್ಟಿಗಿಂತಲೂ ಅಧಿಕ. 2016ರ ಜನವರಿ ಒಂದರಿಂದ ಪೂರ್ವಾನ್ವಯವಾಗುವಂತೆ ವೇತನವನ್ನು ಶೇಕಡ 23.5ರಷ್ಟು ಮತ್ತು ಪಿಂಚಣಿಯನ್ನು ಶೇಕಡ 24ರಷ್ಟು ಹೆಚ್ಚಿಸಲಾಗಿದೆ. ಇದರಿಂದ ಸರ್ಕಾರಕ್ಕೆ 1.02 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಇದು ಒಟ್ಟು ಜಿಡಿಪಿಯ ಶೇಕಡ 0.7ರಷ್ಟು.

2006-17ನೇ ಸಾಲಿನ ಬಜೆಟ್‌ನಲ್ಲಿ ಏಳನೇ ಹಣಕಾಸು ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಹಣ ನಿಗದಿಪಡಿಸಿಲ್ಲ. ಆದ್ದರಿಂದ ಹತ್ತು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಅನಿವಾರ್ಯವಾಗಿರುವುದರಿಂದ ಇತರ ಸಚಿವಾಲಯಗಳ ಅನುದಾನದಲ್ಲಿ ಪರಿಷ್ಕರಣೆ ಮಾಡಿ, ಈ ಉದ್ದೇಶಕ್ಕೆ ನೀಡಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X