Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೊಡ್ಡ ಮೊತ್ತದ ಆಸೆಗೆ, ಪತಿಗೆ ಹೇಳದೆ 11...

ದೊಡ್ಡ ಮೊತ್ತದ ಆಸೆಗೆ, ಪತಿಗೆ ಹೇಳದೆ 11 ಲಕ್ಷ ಕಳಕೊಂಡ ಬೆಂಗಳೂರಿನ ಗೃಹಿಣಿ ಆತ್ಮಹತ್ಯೆ

ಮಹಿಳೆಯರೇ ಎಚ್ಚರ !

ವಾರ್ತಾಭಾರತಿವಾರ್ತಾಭಾರತಿ29 Jun 2016 1:41 PM IST
share
ದೊಡ್ಡ ಮೊತ್ತದ ಆಸೆಗೆ, ಪತಿಗೆ ಹೇಳದೆ 11 ಲಕ್ಷ ಕಳಕೊಂಡ ಬೆಂಗಳೂರಿನ ಗೃಹಿಣಿ ಆತ್ಮಹತ್ಯೆ

ಬೆಂಗಳೂರು, ಜೂ.29: ವಂಚಕನೊಬ್ಬನ ಮೋಸದ ಜಾಲಕ್ಕೆ ಬಲಿ ಬಿದ್ದು ದೊಡ್ಡ ಮೊತ್ತ ಪಡೆಯುವ ಆಸೆಯಿಂದ ತನ್ನಲ್ಲಿದ್ದ ರೂ 11 ಲಕ್ಷ ಕಳೆದುಕೊಂಡ ಗೃಹಿಣಿಯೊಬ್ಬಳು ಸ್ವಾಮಿ ವಿವೇಕಾನಂದ ರಸ್ತೆ ಪಕ್ಕದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಮೃತ ಗೃಹಿಣಿ ಪಾಲಕ್ ವಿ (44) ಹಿರಿಯ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರ ಪತ್ನಿಯಾಗಿದ್ದಾರೆ.

ಕೆಲವು ಸಮಯದ ಹಿಂದೆ ಆಕೆಯ ಮೊಬೈಲ್ ಫೋನಿಗೆ  ಬಂದ ಸಂದೇಶವೊಂದು ಆಕೆಗೆ ರೂ 45 ಲಕ್ಷ ಬಹುಮಾನ ಬಂದಿದೆಯೆಂದು ತಿಳಿಸಿತ್ತು. ಆಕೆಯನ್ನು ಸಂಪರ್ಕಿಸಿದ್ದ ಆಂಡ್ರೂ ಎಂಬ ವ್ಯಕ್ತಿ ತಾನು ಕೆಲವು ಕಾನೂನು ತೊಡಕುಗಳನ್ನೆದುರಿಸುತ್ತಿದ್ದು ಇಡೀ ಬಹುಮಾನದ ಮೊತ್ತ ಸಿಗಬೇಕಿದ್ದಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಗೆ   ಹಣ ಬೇಕೆಂದು ಹೇಳಿದ್ದನ್ನು ನಂಬಿ ಆತ ಹೇಳಿದಂತೆಯೇ ಆಕೆ ರಾಹುಲ್, ಹಸ್ ನಾಥ್, ಶಬ್ಬೀರ್ ಮತ್ತಿತರರ ಬ್ಯಾಂಕ್ ಖಾತೆಗಳಿಗೆ ಜೂನ್ 6 ರಿಂದ 13 ರ ತನಕ ಹಣ ವರ್ಗಾಯಿಸಿದ್ದಳು. ಹೀಗೆ ಒಟ್ಟು ರೂ 11 ಲಕ್ಷ ವರ್ಗಾಯಿಸಿದ  ಪಾಲಕ್ ಇತ್ತೀಚೆಗೆ ದೆಹಲಿಗೆ ತನ್ನ ಬಹುಮಾನ ಮೊತ್ತ ಪಡೆಯಲು ತೆರಳಿದ್ದಳು. ಅಲ್ಲಿ ಆ ವಂಚಕ ಆಕೆಗೆ ಕರೆ ಮಾಡಿ ಇನ್ನಷ್ಟು ಹಣ ನೀಡುವಂತೆ ಒತ್ತಾಯಿಸಿದಾಗ ಹಾಗೂ ಬಹುಮಾನ ಮೊತ್ತ ನೀಡಲು ನಿರಾಕರಿಸಿದಾಗ ಆಕೆ ಮತ್ತೆ ಬೆಂಗಳೂರಿಗೆ ವಾಪಸಾಗಿದ್ದಳು.

ಕಳೆದ ವಾರ ಆಕೆ ಆತ್ಮಹತ್ಯೆ ಮಾಡಿಕೊಂಡ ಮುನ್ನಾ ದಿನ ಕೀಟನಾಶಕ ಸೇವಿಸಲೆತ್ನಿಸಿದ್ದರೂ ಆಕೆಯ ಮಕ್ಕಳು ಆಕೆಯನ್ನು ತಡೆದಿದ್ದರು.  ಆಗ ತಾನು ಮೋಸ ಹೋದ ಬಗ್ಗೆ ಆಕೆ ತಿಳಿಸಿದ್ದು ಅವರೆಲ್ಲ ಪೊಲೀಸ್ ದೂರು ನೀಡಲು ಮರುದಿನ ತಯಾರಿ ನಡೆಸುತ್ತಿದ್ದಂತೆಯೇ ಆಕೆ ತನ್ನ ಕೋಣೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಪೊಲೀಸರು ತನಿಖೆ ಆರಂಭಿಸಿದ್ದಾರೆ ಹಾಗೂ ಆರೋಪಿಗಳ ಮೇಲೆ ಸೆಕ್ಷನ್ 306 ಹಾಗೂ ಸೆಕ್ಷನ್ 420 ಅನ್ವಯ ಪ್ರಕರಣ ದಾಖಲಿಸಿದ್ದಾರೆ. ಮೃತ ಮಹಿಳೆಯ ಪತಿ ಈ ವಂಚನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆಯೆಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X