Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳ ಸರ್ವಾಂಗೀಣ...

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರವೂ ಇದೆ: ಮುಹಮ್ಮದ್ ಮೋನು

ವಾರ್ತಾಭಾರತಿವಾರ್ತಾಭಾರತಿ29 Jun 2016 5:36 PM IST
share
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರವೂ ಇದೆ: ಮುಹಮ್ಮದ್ ಮೋನು

ಕೊಣಾಜೆ, ಜೂ.29: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಒಂದು ವಿದ್ಯಾಸಂಸ್ಥೆ ಬೆಳಗಬೇಕಾದರೆ ಕೇವಲ ಆಡಳಿತ ಮಂಡಳಿ, ಅಧ್ಯಾಪಕರು, ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಸಾಲದು. ಅದರೊಂದಿಗೆ ಹೆತ್ತವರು ಜಾಗೃತರಾಗಿ ತಮ್ಮ ಮಕ್ಕಳನ್ನೇ ಸಂಪತ್ತನ್ನಾಗಿ ರೂಪಿಸುವ ಜವಬ್ಧಾರಿ ಇದೆ ಎಂದು ಮಂಗಳೂರು ತಾಲೂಕು ಪಂಚಾಯತ್‌ನ ಅಧ್ಯಕ್ಷ ಮುಹಮ್ಮದ್ ಮೋನು ಹೇಳಿದರು.

ಅವರು ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ಪೋಷಕರ ಸಭೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪಜೀರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಪಜೀರುಗುತ್ತು ಭರತ್‌ರಾಜ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಆಯಿಷಾ ಮತ್ತು ಮಧ್ವರಾಜ್ ಶೆಟ್ಟಿ, ಕೋಶಾಧಿಕಾರಿಯಾಗಿ ಪ್ರಭಾವತಿ, ಜೊತೆ ಕೋಶಾಧಿಕಾರಿಯಾಗಿ ಜಾರ್ಜ್ ಡಿಸೋಜ, ಜೊತೆ ಕಾರ್ಯದರ್ಶಿಯಾಗಿ ಶ್ರೀಜರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಡಿಸ್ಟಿಂಕ್ಷನ್ ಪಡೆದ ಏಳು ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕ ಜಯರಾಮ ಆಳ್ವ ಪೋಡಾರು ನೀಡಿದ ಪ್ರೋತ್ಸಾಹಧನವನ್ನು ಹಸ್ತಾಂತರಿಸಲಾಯಿತು. ಹಾಗೂ ಕಡೆಂಜ ಸೋಮಶೇಖರ್ ಚೌಟ ಹದಿನೈದು ವಿದ್ಯಾರ್ಥಿಗಳಿಗೆ ನೀಡಿದ ಶಾಲಾ ಶುಲ್ಕವನ್ನು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು. ಅಲ್ಲದೆ ಇದೇ ಸಂದರ್ಭದಲ್ಲಿ ಶಾಲಾ ದತ್ತು ನಿಧಿಯಿಂದ ಎಂಟು ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಜಯರಾಮ ಆಳ್ವ ಪೋಡಾರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್, ಶಾಲಾ ಮುಖ್ಯೋಪಾಧ್ಯಾಯ ಕೆ.ರವೀಂದ್ರ ರೈ ಹರೇಕಳ ಭಾಗವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರಾದ ಕೃಷ್ಣಶಾಸ್ತ್ರಿ, ಮೋಹಿನಿ, ಸ್ಮಿತಾ, ಉಷಾಲತಾ, ಕುಮುದಾ, ಸುದರ್ಶನ್, ನೂತನ, ಪ್ರತಿಭಾಸ ಪುರಸ್ಕಾರದ ವಿವರವನ್ನು ವಾಚಿಸಿದರು. ಅಧ್ಯಾಪಕ ರವಿಶಂಕರ್ ಪ್ರಾರ್ಥನೆಗೈದರು. ಅಧ್ಯಾಪಕ ಶಿವಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X