Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಥಮ ಹಂತದ ಎಡಿಬಿ ಕಾಮಗಾರಿ ಕಳಪೆ:...

ಪ್ರಥಮ ಹಂತದ ಎಡಿಬಿ ಕಾಮಗಾರಿ ಕಳಪೆ: ಒಳಚರಂಡಿ ನೀರು ಬಾವಿಗಳಿಗೆ ಸೇರಿ ಕಲುಷಿತ

ಉನ್ನತ ಮಟ್ಟದ ತನಿಖೆಗೆ ಮನಪಾ ಸದಸ್ಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Jun 2016 9:03 PM IST
share
ಪ್ರಥಮ ಹಂತದ ಎಡಿಬಿ ಕಾಮಗಾರಿ ಕಳಪೆ: ಒಳಚರಂಡಿ ನೀರು ಬಾವಿಗಳಿಗೆ ಸೇರಿ ಕಲುಷಿತ

ಮಂಗಳೂರು, ಜೂ.29: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ)ನ ನೆರವಿನಲ್ಲಿ ಕುಡ್ಸೆಂಪ್‌ನಿಂದ ನಡೆಸಲಾದ ಪ್ರಥಮ ಹಂತದ ಕಾಮಗಾರಿ ಸಂಪೂರ್ಣ ಕಳಪೆ ಹಾಗೂ ಅಸಮರ್ಪಕವಾಗಿದ್ದು, ಒಳಚರಂಡಿ ನೀರು ಚರಂಡಿಗಳಲ್ಲಿ ಹರಿಯುತ್ತಿರುವುದಲ್ಲದೆ, ಬಾವಿಗಳಿಗೆ ಸೇರಿ ಕಲುಷಿತಗೊಂಡಿರುವ ಕುರಿತಂತೆ ಮನಪಾ ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ತೀವ್ರ ಚರ್ಚೆ, ಅಸಮಾಧಾನಕ್ಕೆ ಕಾರಣವಾಯಿತು.

ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಪ್ರಥಮ ಹಂತದ ಎಡಿಬಿ ಯೋಜನೆ ಅಸಮರ್ಪಕವಾಗಿರುವುದರಿಂದ ಕಾಮಗಾರಿ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂಬ ತೀವ್ರ ಆಗ್ರಹವೂ ಸದಸ್ಯರಿಂದ ವ್ಯಕ್ತವಾಯಿತು.

ಸದಸ್ಯ ಅಶೋಕ್ ಶೆಟ್ಟಿಯವರು ತಮ್ಮ ವಿಷಯ ಪ್ರಸ್ತಾಪಿಸುತ್ತಾ, ಇಡ್ಯಾ ರೇಚಕ ಸ್ಥಾವರ (ಎಸ್‌ಟಿಪಿ)ಉದ್ಘಾಟನೆ ನಡೆಸಿ, ವಿದ್ಯುತ್ ಸಂಪರ್ಕ ನೀಡದೆ ಈಗ ಸಮಸ್ಯೆ ಉಂಟಾಗಿದೆ. ಸುರತ್ಕಲ್‌ನಲ್ಲಿ ಹಲವಾರು ಬಾವಿಗಳಲ್ಲಿ ಒಳಚರಂಡಿ ನೀರು ಸೇರಿ ಕುಡಿಯಲು ಅಯೋಗ್ಯವಾಗಿದೆ ಎಂದು ದೂರಿದರು.

ಇದಕ್ಕೆ ಪೂರಕವಾಗಿ ಬಿಜೆಪಿಯ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಬಜಾಲ್ ಹಾಗೂ ಸುರತ್ಕಲ್‌ನಲ್ಲಿ ತರಾತುರಿಯಲ್ಲಿ ಎಸ್‌ಟಿಪಿಗಳನ್ನು ಉದ್ಘಾಟನೆ ಮಾಡಿದ ಪರಿಣಾಮವಾಗಿ ಸಮಸ್ಯೆಯಾಗಿದೆ. ಒಳಚರಂಡಿ ನೀರು ಚರಂಡಿಗಳಲ್ಲಿ ಹರಿದು ಬಾವಿ ಸೇರುತ್ತಿದೆ. ಸಂಪೂರ್ಣ ಕಾಮಗಾರಿಯೇ ಕಳಪೆಯಾಗಿದೆ. ಹಾಗಿದ್ದರೂ ಮನೆ ಸಂಪರ್ಕ ನೀಡಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲಾಗಿದೆ ಎಂದು ಆಕ್ಷೇಪಿಸಿದರು.

ಈ ಸಂದರ್ಭ ಮನಪಾ ಹಿರಿಯ ಅಭಿಯಂತರರು ಮಾತನಾಡುತ್ತಾ, ಸುರತ್ಕಲ್ ಪ್ರದೇಶಧಲ್ಲಿ ವೆಟ್‌ವೆಲ್‌ಗಳ ನೀರಿನಿಂದಾಗಿ 15 ಬಾವಿಗಳು ಕಲುಷಿತಗೊಂಡಿರುವುದು ದೃಢಪಟ್ಟಿದೆ ಎಂದು ಒಪ್ಪಿಕೊಂಡರು. ಎಡಿಬಿ ಪ್ರಥಮ ಹಂತದ ಕಾಮಗಾರಿ ಬಗ್ಗೆ ಉನ್ನತ ಮಟ್ಟ ತನಿಖೆ ಆಗಬೇಕು. ಜನರ ತೆರಿಗೆಯ ಕೋಟ್ಯಾಂತರ ರೂ. ಹಣವನ್ನು ವ್ಯಯಿಸಿ ಈ ರೀತಿ ಬೇಕಾಬಿಟ್ಟಿಯಾಗಿ ಕೆಲಸ ಮಾಡಿರುವ ಬಗ್ಗೆ ಜನರಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರೂ ದನಿಗೂಡಿಸಿದರು.

ಮೇಯರ್ ಹರಿನಾಥ್‌ರವರು ಕೂಡಾ ಈ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ, ಸುರತ್ಕಲ್ ಭಾಗದ ಜನರು ಈಗಾಗಲೇ ತಮ್ಮ ಬಳಿಗೆ ಬಂದು ಬಾವಿ ನೀರು ಕಲುಷಿತಗೊಂಡರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣಕ್ಕೆ ಯಾವ ಕ್ರಮಕೈಗೊಳ್ಳಬಹುದು ಎಂಬುದನ್ನು ತಿಳಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಹಲವು ಕಡೆಗಳಲ್ಲಿ ಮ್ಯಾನ್‌ಹೋಲ್‌ಗಳು ಕುಸಿದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಇದರ ವೀಡಿಯೊ ಚಿತ್ರೀರಣವನ್ನು ಮಾಡಿ ಕುಡ್ಸೆಂಪ್ ಆಡಳಿತ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ. ಗುತ್ತಿಗೆದಾರರಿಂದ ಸರಿಪಡಿಸುವಂತೆ ಅವರು ತಿಳಿಸಿದ ಹಿನ್ನೆಲೆಯಲ್ಲಿ ಗುತ್ತಿಗೆದಾರರನ್ನು ಸಂಪರ್ಕಿಸಿ, ದುರಸ್ತಿಗೆ ಒಪ್ಪಿಕೊಂಡಿದ್ದಾರೆ. ಸುಮಾರು ಶೇ. 70ರಷ್ಟು ಕಾಮಗಾರಿ ದುರಸ್ತಿ ಆಗಬೇಕು. ಕುಡ್ಸೆಂಪ್ ಹಾಗೂ ನಮ್ಮ ಅಧಿಕಾರಿಗಳು ಜತೆಯಾಗಿ ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿ ಸಭೆಯಲ್ಲಿ ತಿಳಿಸಿದರು.

ದ್ವಿತೀಯ ಹಂತದ ಎಡಿಬಿ ಯೊಜನೆಗೆ ಮೊದಲು ಪ್ರಥಮ ಹಂತದ ಯೋಜನೆಯ ಪುನರ್ ಪರಿಶೀಲನೆಯಾಗಬೇಕು ಎಂದು ವಿಪಕ್ಷ ಸದಸ್ಯ ಪ್ರೇಮಾನಂದ ಶೆಟ್ಟಿ ಈ ಸಂದರ್ಭ ಒತ್ತಾಯಿಸಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ ಪ್ರತಿಕ್ರಿಯಿಸಿ, ಕುಡ್ಸೆಂಪ್‌ಗೆ ಪಾವತಿಯಾಗಲು 5 ಕೋ.ರೂ. ಬಾಕಿ ಇರುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಅಸಮರ್ಪಕವಾಗಿ ಒಳಚರಂಡಿ ಮಾಡಿದ ಕಾರಣಕ್ಕಾಗಿ ಅದರ ಸುಸ್ಥಿತಿಗೆ ಈ 5 ಕೋ.ರೂ.ಗಳನ್ನು ಬಳಸಿಕೊಳ್ಳಬೇಕು ಎಂದರು. ಮೇಯರ್ ಹರಿನಾಥ್ ಮಾತನಾಡಿ, ಸದ್ಯ ಸುರತ್ಕಲ್ ಪ್ರದೇಶದ ಜನರಿಗೆ ಆಗಿರುವ ತೊಂದರೆಯನ್ನು ತಕ್ಷಣ ಬಗೆಹರಿಸಬೇಕು. ಹೀಗಾಗಿ ತಾತ್ಕಾಲಿಕವಾಗಿ ಎಸ್‌ಟಿಪಿಗೆ ಹೊಸದಾಗಿ ಮನೆ ಸಂಪರ್ಕ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಧಿಕಾರಿಗಳ ತಪ್ಪಿಗೆ ಜನಪ್ರತಿನಿಧಿಗಳನ್ನು ಹೊಣೆಯಾಗಿಸುವ ಕೆಲಸ ಆಗುವುದು ಬೇಡ ಎಂದು ಎಚ್ಚರಿಸಿದರು.

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಮಾತನಾಡಿ,  ಫ್ಲಾಟ್‌ಗಳ ನಿರ್ಮಾಣದ ಸಂದರ್ಭ 24ಕ್ಕಿಂತ ಹೆಚ್ಚಿನ ಫ್ಲಾಟ್‌ಗಳನ್ನು ಹೊಂದಿದ್ದರೆ ಸ್ವತ ಎಸ್‌ಟಿಪಿ ನಿರ್ಮಾಣ ಮಾಡಬೇಕೆಂಬ ನಿಯವಿದೆ. ಆದರೆ ಬಿಲ್ಡರ್‌ಗಳು ಕೇವಲ ಹೆಸರಿಗೆ ಮಾತ್ರ ಎಸ್‌ಟಿಪಿ ನಿರ್ಮಾಣ ಮಾಡಿ, ಬಳಿಕ ತಮ್ಮ ಫ್ಲಾಟ್‌ಗಳ ನೀರನ್ನು ಡ್ರೈನೇಜ್‌ಗೆ ಬಿಡುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಆಪಾದಿಸಿದರು.

ಭವಂತಿ ಸ್ಟ್ರೀಟ್- ಜಿಎಚ್‌ಎಸ್ ರಸ್ತೆ ಅಗಲೀಕರಣ 15 ದಿನಗಳಲ್ಲಿ ಕಾಮಗಾರಿ!

ಮಂಗಳೂರಿನ ಬಹುಮುಖ್ಯ ರಸ್ತೆಯಾಗಿರುವ ಜಿಎಚ್‌ಎಸ್ ಹಾಗೂ ಭವಂತಿ ಸ್ಟ್ರೀಟ್ ರಸ್ತೆಯನ್ನು ಅಗಲೀಕರಣಕ್ಕೆ ಮನಪಾ ಮುಂದಾಗುತ್ತಿಲ್ಲ. ಅಲ್ಲಿ ಖಾಸಗಿಯವರೊಬ್ಬರ ವಿರೋಧದಿಂದ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ಸದಸ್ಯೆ ಪೂರ್ಣಿಮಾ ಸಭೆಯಲ್ಲಿ ಆರೋಪಿಸಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಪಾಲಿಕೆ ಅಧಿಕಾರಿ, ಈ ಎರಡೂ ರಸ್ತೆಗಳ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಮಳೆಯ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲು ವಿಳಂಬವಾಗಿದೆ. 15 ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಅಗಲೀಕರಣಕ್ಕೆ ಸಂಬಂಧಿಸಿ ಸ್ಥಳದಲ್ಲಿ ಜಾಗ ನೀಡುವಂತೆ ಸಂಬಂಧಪಟ್ಟವರಿಗೆ ನೋಟೀಸ್ ನೀಡಲಾಗಿದೆ ಎಂದರು.

ಉಪ ಮೇಯರ್ ಸುಮಿತ್ರಾ ಕೆ., ಸ್ಥಾಯಿ ಸಮಿತಿ ಅಧ್ಯಕ್ಷರಾದ ಲ್ಯಾನ್ಸಿ ಲೋಟ್ ಪಿಂಟೋ, ಕವಿತಾ ಸನಿಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X