Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ: ಬಾರಾಡಿಯ ಮಹಿಳೆ ಆತ್ಮಹತ್ಯೆ...

ಕಾರ್ಕಳ: ಬಾರಾಡಿಯ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ವಾರ್ತಾಭಾರತಿವಾರ್ತಾಭಾರತಿ29 Jun 2016 10:07 PM IST
share

ಕಾರ್ಕಳ, ಜೂ.29: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿಯಲ್ಲಿ ಜೂ.23ರಂದು ಸಾವನ್ನಪ್ಪಿದ್ದ ಗೀತಾ(25)ರ ಸಾವು ಆತ್ಮಹತ್ಯೆ ಅಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜೂ.23ರಂದು ಮಧ್ಯಾಹ್ನದ ವೇಳೆ ಸಂಶಯಾಸ್ಪದ ರೀತಿಯಲ್ಲಿ ಗೀತಾ ಸಾವನ್ನಪ್ಪಿದ್ದರು. ಗೀತಾ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಗೀತಾಳ ತವರು ಮನೆಯವರು ಇದೊಂದು ಕೊಲೆ ಎಂದು ಆರೋಪಿಸಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡ ಗ್ರಾಮಾಂತರ ಪೊಲೀಸರು ನಡೆಸಿದ ವಿಚಾರಣೆ ಹಾಗೂ ಗೀತಾಳ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಕೊಲೆ ಎನ್ನುವ ವಿಚಾರ ಬಹಿರಂಗಗೊಂಡಿದೆ ಎನ್ನಲಾಗಿದೆ.

ಘಟನೆ ವಿವರ

ಬಾರಾಡಿ ನಿವಾಸಿ ಹರೀಶ್ ಪಾಣಾರ(29) ಎಂಬಾತ ಕಳೆದ ಐದು ವರ್ಷಗಳ ಹಿಂದೆ ಮೂಡುಬೆಳ್ಳೆಯ ನಿವಾಸಿ ಗೀತಾರನ್ನು ಪ್ರೇಮ ವಿವಾಹವಾಗಿದ್ದ. ಆರಂಭದಲ್ಲಿ ಪತಿ-ಪತ್ನಿಯು ಹೊಂದಾಣಿಕೆಯಿಂದಿದ್ದು, ಬಳಿಕ ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದು, ಇವರಿಬ್ಬರ ದಾಂಪತ್ಯದಲ್ಲಿ ವಿರಸ ಕಂಡಿತ್ತು ಎನ್ನಲಾಗಿದೆ. ಗೀತಾ ತನ್ನ ಪತಿ ನೀಡುತ್ತಿದ್ದ ಹಿಂಸೆಯ ವಿರುದ್ಧ ಮಹಿಳಾ ಸಹಾಯವಾಣಿಗೆ ದೂರು ನೀಡಿದ್ದು, ಹರೀಶನನ್ನು ಕರೆದು ಎರಡು ಬಾರಿ ಎಚ್ಚರಿಕೆ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಗೀತಾ ತನ್ನ ತವರು ಮನೆ ಮೂಡುಬೆಳ್ಳೆಗೆ ಹೋಗಿದ್ದು, ಜೂ.23ರಂದು ಹರೀಶ ಆಕೆಗೆ ಪೋನಾಯಿಸಿ ಇಂದೇ ತವರು ಮನೆಗೆ ವಾಪಸ್ಸಾಗುವಂತೆ ಒತ್ತಾಯಿಸಿದ್ದ. ಅಂದು ತವರು ಮನೆಯಿಂದ ಗೀತಾ ಪತಿಯ ಮನೆಗಾಗಮಿಸಿದ್ದರು. ಗೀತಾ ತವರು ಮನೆಗೆ ಹೋಗಿ ನಾಲ್ಕೈದು ದಿನಗಳಿಂದ ಬಂದಿಲ್ಲ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ಕುಪಿತನಾದ ಆರೋಪಿ ಹರೀಶ್ ಅಂದೇ ಮಧ್ಯಾಹ್ನದ ವೇಳೆ ಕಪ್ಪುದಾರ(ಪಟ್ಟೆ ನೂಲು)ದಿಂದ ಗೀತಾಳ ಕುತ್ತಿಗೆಯನ್ನು ಬಿಗಿದು ಕೊಂದಿದ್ದಾನೆ ಎಂದು ಹೇಳಲಾಗಿದೆ.

ಬಳಿಕ ಯಾರಿಗೂ ತಿಳಿಯಬಾರದೆಂದು ಮನೆಯ ಮುಂಭಾಗದಲ್ಲಿ ಬಟ್ಟೆ ಒಣಗಿಸಲು ಹಾಕಿದ್ದ ನೈಲಾನ್ ಹಗ್ಗದಿಂದ ಆಕೆಯ ಕುತ್ತಿಗೆಗೆ ನೇಣು ಬಿಗಿದು ಹತ್ತಿರದಲ್ಲೇ ಉಷಾ ಎಂಬವರಿಗೆ ಸೇರಿದ ರಾಜೀವ ಗಾಂಧಿ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಯೊಳಗಿರುವ ಜಂತಿಗೆ ನೇತು ಹಾಕಿದ್ದ. ಬಳಿಕ ತಾನೇ ನೇಣಿನ ಕುಣಿಕೆಯಿಂದ ಆಕೆಯ ಶವವನ್ನು ಬಿಚ್ಚಿ, ಆಕೆಯನ್ನು ನೆಲದಲ್ಲಿ ಮಲಗಿಸಿ, ನೇಣಿಗೆ ಬಳಸಿದ ಹಗ್ಗವನ್ನು ಹರಿಯುವ ನೀರಿನಲ್ಲಿ ಬಿಟ್ಟು ಸಾಕ್ಷಿ ನಾಶಕ್ಕೆ ಪ್ರಯತ್ನಿಸಿದ್ದ ಎಂಬುದು ಪೊಲೀಸರ ವಿಚಾರಣೆಯ ವೇಳೆ ತಿಳಿದುಬಂದಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X