Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಪಂನಿಂದ ಮನೆ ನೆಲಸಮ: ವಿಧವೆ ಮಹಿಳೆ...

ಗ್ರಾಪಂನಿಂದ ಮನೆ ನೆಲಸಮ: ವಿಧವೆ ಮಹಿಳೆ ಬೀದಿಪಾಲು

ವಾರ್ತಾಭಾರತಿವಾರ್ತಾಭಾರತಿ29 Jun 2016 11:41 PM IST
share

ಮಂಗಳೂರು, ಜೂ.29: ಗ್ರಾಪಂ ಅಧ್ಯಕ್ಷರ ಕುಮ್ಮಕ್ಕಿನಿಂದ ವಿಧವೆ ಮಹಿಳೆಯೊಬ್ಬರ ಮನೆಯನ್ನು ಕೆಡವಿ ಆಕೆಯನ್ನು ಬೀದಿ ಪಾಲು ಮಾಡಲಾಗಿದೆ ಎಂದು ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಪಂನ ವಿವಿಧ ಸಂಘಟನೆಗಳು ಆರೋಪಿಸಿವೆ. ಗ್ರಾಪಂನ ಶಿವಾಜಿ ನಗರದಲ್ಲಿ ಈ ಕೃತ್ಯ ನಡೆದಿದ್ದು, ಇದರ ವಿರುದ್ಧ ಸಂತ್ರಸ್ತ ಮಹಿಳೆ, ಗ್ರಾಪಂ ಸದಸ್ಯರು ಹಾಗೂ ಸುಗ್ರಾಮ ಮಹಿಳಾ ಸದಸ್ಯರು ರಾಜ್ಯ ಸರಕಾರಕ್ಕೆ ದೂರು ನೀಡಿದ್ದಾರೆ.

ಗ್ರಾಪಂ ಸದಸ್ಯೆ ವೃಂದಾ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗಂಡನನ್ನು ಕಳೆದುಕೊಂಡ ಆ ಅನಕ್ಷರಸ್ಥ ಮಹಿಳೆಗೆ ಗ್ರಾಪಂ ಮನೆ ನಿರ್ಮಿಸಿ ಕೊಡಬೇಕಾಗಿದ್ದು, ಬದಲಿಗೆ ಇದ್ದ ಮನೆಯನ್ನೂ ಕೆಡವಿ ಹಾಕಿದೆ. ಗ್ರಾಪಂ ಅಧ್ಯಕ್ಷ, ಪಿಡಿಓ ಮತ್ತು ಅವರ ಬೆಂಬಲಿಗರ ಸಮ್ಮುಖದಲ್ಲೇ ಇದು ನಡೆದಿದೆ ಎಂದು ಆರೋಪಿಸಿದ್ದಾರೆ.

15ವರ್ಷಗಳ ಹಿಂದೆ ಸರಕಾರಕ್ಕೆ ನಿವೇಶನ ರಹಿತರೆಂದು ಅರ್ಜಿ ಸಲ್ಲಿಸಿ ಈ ಜಾಗವನ್ನು ಶೇಖರ ಎಂಬವರು ಹಕ್ಕುಪತ್ರದ ಮೂಲಕ ಪಡೆದುಕೊಂಡಿದ್ದರು,ಬಳಿಕ ಶೇಖರ ಅವರು ಸರಕಾರಿ ಕೆಲಸಕ್ಕೆ ಸೇರಿಕೊಂಡ ಸಂದರ್ಭದಲ್ಲಿ ಮನೆಯಿಲ್ಲದ ಶೋಭರಿಗೆ ಅದೇ ಜಾಗದಲ್ಲಿ ಮನೆ ಕಟ್ಟಲು ಅನುಮತಿ ನೀಡಿದ್ದು, ಶೋಭಾ ಈ ಸ್ಥಳದಲ್ಲಿ ಮನೆಕಟ್ಟಲು ತಳಪಾಯ ನಿರ್ಮಿಸಿದ್ದರು . ಈ ಸಂದರ್ಭದಲ್ಲಿ ಅವರ ಗಂಡ ಮೃತಪಟ್ಟ ಕಾರಣ ಮನೆಯನ್ನು ಪೂರ್ಣಗೊಳಿಸಲು ಆಗದೆ ಅದೇ ಸ್ಥಳದಲ್ಲಿ ಸಣ್ಣ ಗುಡಿಸಲೊಂದನ್ನು ನಿರ್ಮಿಸಿ ವಾಸವಾಗಿದ್ದರು. ನಂತರ ಈ ಜಾಗವನ್ನು ಹಿಂದಿನ ಖಾತೆದಾರರಿಂದ ತನ್ನ ಹೆಸರಿಗೆ ಮಂಜೂರು ಮಾಡುವಂತೆ ಶೋಭಾ ಕಂದಾಯ ಇಲಾಖೆಗೆ 2014ರಲ್ಲಿ ಅರ್ಜಿ ಸಲ್ಲಿಸಿದ್ದರು. ಹೀಗಿದ್ದರೂ ಇದೀಗ ಗ್ರಾಪಂ ಅಧ್ಯಕ್ಷರು ಅವುಗಳನ್ನು ಪರಿಗಣಿಸದೆ ವಿಧವೆ ಶೋಭ ವಾಸವಾಗಿದ್ದ ಮನೆಯನ್ನು ಸುರಿಯುತ್ತಿದ್ದ ಮಳೆಯ ನಡುವೆ ಕೆಡವಿದ್ದಾರೆ ಎಂದು ವೃಂದಾ ಕಿಡಿಕಾರಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ತುರ್ತು ಕ್ರಮ ಕೈಗೊಂಡು ಬೀದಿ ಪಾಲಾದ ಮಹಿಳೆಗೆ ಆಗಿರುವ ನಷ್ಟವನ್ನು ಭರಿಸಬೇಕು. ಅವರಿಗೆ ಮನೆಯನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಶಾಸಕರಿಗೆ, ಸಚಿವರಿಗೆ, ಜಿಪಂ ಸದಸ್ಯರಿಗೆ ದೂರು ನೀಡಿರುವುದಾಗಿ ಸುಗ್ರಾಮ ಸಂಘಟನೆಯ ಮುಖಂಡರೂ ಆಗಿರುವ ವೃಂದಾ ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X