Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಂಕಿತ ಭಯೋತ್ಪಾದಕಿ ಪ್ರಜ್ಞಾಸಿಂಗ್

ಶಂಕಿತ ಭಯೋತ್ಪಾದಕಿ ಪ್ರಜ್ಞಾಸಿಂಗ್

ವಾರ್ತಾಭಾರತಿವಾರ್ತಾಭಾರತಿ29 Jun 2016 11:44 PM IST
share
ಶಂಕಿತ ಭಯೋತ್ಪಾದಕಿ ಪ್ರಜ್ಞಾಸಿಂಗ್

2008 ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಠಾಕೂರ್‌ಗೆ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಸಾಧ್ವಿ ವಿರುದ್ಧ ಆರೋಪಗಳನ್ನು ನಿರಾಕರಿಸಿರುವುದನ್ನು ನ್ಯಾಯಾಲಯವು ಪ್ರಶ್ನಿಸಿದೆ.

ಎನ್‌ಐಎ ನಿರ್ಧಾರ ವನ್ನು ತಿರಸ್ಕರಿಸಿದ ನ್ಯಾಯಾಲಯ ಪ್ರಜ್ಞಾ ವಿರುದ್ಧ ಕಠಿಣ ಮಹಾರಾಷ್ಟ್ರದ ವ್ಯವಸ್ಥಿತ ಅಪರಾಧ ಕಾಯ್ದೆ ನಿಯಂತ್ರಣದ(ಮೋಕಾ) ಅಡಿಯಲ್ಲಿ ಹೇರಲಾದ ಆರೋಪಗಳು ಉಳಿದು ಕೊಳ್ಳಲಿವೆ ಎಂದು ಹೇಳಿದೆ.
ಪ್ರಜ್ಞಾ ವಿರುದ್ಧ ಪ್ರಾಥಮಿಕವಾಗಿ ದಾಖಲಿಸಲಾದ ಆರೋಪಗಳು ಸರಿಯೆಂದು ಸೂಕ್ತ ನೆಲೆಯಲ್ಲಿ ತಿಳಿಯಲಾಗಿದೆ. ಎನ್‌ಐಎ ಸಾಧ್ವಿ ಪ್ರಜ್ಞಾಗೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ಜಾಮೀನು ಕೊಡುವುದು ಕಷ್ಟ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
  ಕಳೆದ ತಿಂಗಳು ಹೊಸ ಚಾರ್ಜ್‌ಶೀಟ್‌ನಲ್ಲಿ ಎನ್‌ಐಎ ಸಾಧ್ವಿ ಪ್ರಜ್ಞಾ ಮತ್ತು ಇತರ ಐವರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ ಎಂದು ಆರೋಪಗಳನ್ನು ಕೈಬಿಟ್ಟಿತ್ತು.

 2011ರಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಎನ್‌ಐಎ ಮಹಾರಾಷ್ಟ್ರ ಭಯೋತ್ಪಾದಕ ವಿರೋಧಿ ದಳದ ತನಿಖೆಯನ್ನು ಮುಂದುವರಿಸುವುದು ಬಿಟ್ಟು ಹೊಸದಾಗಿ ತನಿಖೆ ನಡೆಸಿದೆ ಎಂದು ನ್ಯಾಯಾಲಯ ಹೇಳಿದೆ.

 2008 ಸೆಪ್ಟಂಬರ್ 29ರಂದು ಮುಂಬೈನಿಂದ 270 ಕಿ.ಮೀ. ದೂರದ ಮಾಲೆಗಾಂವ್‌ನಲ್ಲಿ ಬೈಕಿನಲ್ಲಿ ಇಟ್ಟ ಎರಡು ಬಾಂಬುಗಳು ಸ್ಫೋಟಗೊಂಡಾಗ ಏಳು ಮಂದಿ ಸಾವನ್ನಪ್ಪಿದ್ದಲ್ಲದೆ 101 ಮಂದಿ ಗಾಯಗೊಂಡಿದ್ದರು.

 ಈ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ, ಸೇನಾ ಕರ್ನಲ್ ಶ್ರೀಕಾಂತ್ ಪುರೋಹಿತ್ ಮತ್ತು ಇತರರನ್ನು ಬಂಧಿಸಲಾಯಿತು. ಹಿಂದುತ್ವ ಸಂಘಟನೆ 'ಅಭಿನವ್ ಭಾರತ' ಸಂಘಟನೆಗಾಗಿ ಇವರು ಬಾಂಬ್ ಸ್ಫೋಟಿಸುವ ಯೋಜನೆ ರೂಪಿಸಿದ್ದರು ಎಂದು ಆರೋಪಿಸಲಾಗಿದೆ.
 ಈ ದಾಳಿಯಲ್ಲಿ ಸಾಧ್ವಿ ಪ್ರಜ್ಞಾರ ಬೈಕನ್ನು ಬಳಸಲಾಗಿದೆ ಎಂದು ಭಯೋತ್ಪಾದನೆ ವಿರೋಧಿ ಸಂಘಟನೆ ಹೇಳಿದೆ. ಲೆಫ್ಟಿನಂಟ್ ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಞಾ ಅವರು 2007ರ ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟದ ಮುಖ್ಯ ಆರೋಪಿ ಸ್ವಾಮಿ ಅಸೀಮಾನಂದ್ ಅವರನ್ನೂ ಭೇಟಿಯಾಗಿ ಯೋಜನೆ ರೂಪಿಸಿದ್ದರು ಎಂದು ತನಿಖೆ ಹೇಳಿದೆ. ಆದರೆ ಆನಂತರ ಬಹಳಷ್ಟು ಸಾಕ್ಷಿಗಳು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದರು.
ಎನ್‌ಐಎ ತನ್ನ ತನಿಖೆಯಲ್ಲಿ ಸಾಧ್ವಿ ಪ್ರಜ್ಞಾ ವಿರುದ್ಧ ಸಾಕಷ್ಟು ಸಾಕ್ಷಗಳು ಇಲ್ಲ ಎಂದು ಹೇಳಿದೆ. ಆಕೆಯ ಹೆಸರಲ್ಲಿ ನೋಂದಾಯಿಸಲಾಗಿದ್ದ ಬೈಕ್ ಬಳಸಿದ ಆರೋಪಿ ಕಣ್ಮರೆಯಾಗಿರು ವುದಾಗಿಯೂ ತನಿಖೆ ಹೇಳಿದೆ.

ಸಾಧ್ವಿ ಮತ್ತು ಕರ್ನಲ್ ಪುರೋಹಿತ್ ಅವರನ್ನು ಕಾಂಗ್ರೆಸ್ 'ಕೇಸರಿ ಭಯೋತ್ಪಾದನೆಯ ಮುಖಗಳು' ಎಂದು ಹೇಳಿದೆ. ಈಗ ಏಳು ವರ್ಷಗಳಿಂದ ಇವರಿಬ್ಬರೂ ಜೈಲಿನಲ್ಲಿದ್ದಾರೆ.

ಈ ಪ್ರಕರಣವನ್ನು ಮೊದಲಿಗೆ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ತನಿಖೆ ನಡೆಸುತ್ತಿ ದ್ದರು. ಅವರು 2008 ನವೆಂಬರ್ 26ರಂದು ಲಷ್ಕರೆ ತಯ್ಯಿಬಾ ಭಯೋತ್ಪಾದಕರು ಮುಂಬೈ ಮೇಲೆ ದಾಳಿ ನಡೆಸಿದಾಗ ಕೊಲೆಯಾಗಿದ್ದರು.

ಕೃಪೆ:ndtv.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X