ಅಪರಿಚಿತ ವ್ಯಕ್ತಿ ಮೃತ್ಯು
ಉಳ್ಳಾಲ, ಜೂ.29: ಇಲ್ಲಿನ ಠಾಣಾ ವ್ಯಾಪ್ತಿಯ ಓವರ್ಬಿಡ್ಜ್ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗೆಂದು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಜೂ.9ರಂದು ಓವರ್ಬಿಡ್ಜ್ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ವಾರಿಸುದಾರರು ಪತ್ತೆಯಾಗದ ಕಾರಣ ಅಪರಿಚಿತ ವ್ಯಕ್ತಿ ಕಾಣೆಯಾದ ಪ್ರಕರಣ ಯಾವುದಾದರೂ ಠಾಣೆಯಲ್ಲಿ ದಾಖಲಾಗಿದ್ದಲ್ಲಿ, ವಾರಿಸುದಾರರು ಇದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಅಥವಾ ಉಳ್ಳಾಲ ಠಾಣೆ (0824-2466269)ಯನ್ನು ಸಂಪರ್ಕಿಸುವಂತೆ ಕೋರಲಾಗಿದೆ
Next Story





