Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎವರೆಸ್ಟ್ ಏರಿದ್ದೇವೆಂದು ಎಲ್ಲರ ಕಿವಿಗೆ...

ಎವರೆಸ್ಟ್ ಏರಿದ್ದೇವೆಂದು ಎಲ್ಲರ ಕಿವಿಗೆ ಹೂವಿಟ್ಟರು ಪುಣೆಯ ಪೊಲೀಸ್ ದಂಪತಿ

ಪೊಲೀಸ್ ತನಿಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ30 Jun 2016 8:56 AM IST
share
ಎವರೆಸ್ಟ್ ಏರಿದ್ದೇವೆಂದು ಎಲ್ಲರ ಕಿವಿಗೆ ಹೂವಿಟ್ಟರು ಪುಣೆಯ ಪೊಲೀಸ್ ದಂಪತಿ

ಪುಣೆ, ಜೂ.30: ನಗರದ ಪೊಲೀಸ್ ಅಧಿಕಾರಿಗಳಾದ ದಿನೇಶ್ ಹಾಗೂ ತಾರಕೇಶ್ವರಿ ರಾಥೋಡ್ ಈ ತಿಂಗಳ ಆರಂಭದಲ್ಲಿ, ವಿಶ್ವದ ಅತಿ ಎತ್ತರದ ಪರ್ವತವಾದ ವೌಂಟ್ ಎವರೆಸ್ಟ್ ಏರಿದ್ದಾಗಿ ವರದಿಗಾರರಲ್ಲಿ ಹೇಳಿಕೊಂಡಿದ್ದರು. 30ರ ಆಸುಪಾಸಿನ ಈ ಪೊಲೀಸ್ ದಂಪತಿ, 29,035 ಅಡಿ ಎತ್ತರದ ಈ ಅತ್ಯುನ್ನತ ಪರ್ವತವನ್ನು ಏರಿದ ಮೊಟ್ಟಮೊದಲ ಭಾರತೀಯ ದಂಪತಿ ಎಂದು ಬೆನ್ನುತಟ್ಟಿಕೊಂಡಿದ್ದರು. ಈ ಮಹದುದ್ದೇಶ ಸಾಧಿಸುವ ಸಲುವಾಗಿ ಇದುವರೆಗೂ ಮಕ್ಕಳನ್ನು ಪಡೆದಿರಲಿಲ್ಲ ಎಂದು ಜೂನ್ 5ರಂದು ಪತ್ರಿಕಾಗೋಷ್ಠಿಯಲ್ಲಿ ದಿನೇಶ್ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಈ ಹೆಮ್ಮೆಯೊಂದಿಗೆ ನಾವು ಮಗುವನ್ನು ಪಡೆಯಲು ಮುಂದಾಗಿದ್ದೇವೆ ಎಂದು ಪ್ರಕಟಿಸಿದರು.

ಇದು ಸಹಜವಾಗಿಯೇ ಎಲ್ಲರಿಗೂ ಹೆಮ್ಮೆಯ ವಿಷಯವಾಗಿತ್ತು. ಕಳೆದ ಋತುವಿನಲ್ಲಿ 70 ಮಂದಿ ಭಾರತೀಯರು ಮೌಂಟ್ ಎವರೆಸ್ಟ್ ಏರಿದ್ದರು. ಈ ವೇಳೆ ಪಶ್ಚಿಮ ಬಂಗಾಳದ ಮೂವರು ಮೃತಪಟ್ಟಿದ್ದರು. ಪುಣೆ ಪೊಲೀಸ್ ಪಡೆ ಹಾಗೂ ಮಹಾರಾಷ್ಟ್ರದ ರಾಜ್ಯ ಸಚಿವ ರಾಮ್ ಶಿಂಧೆ ಅವರು ಪೊಲೀಸ್ ದಂಪತಿಯ ಸಾಹಸವನ್ನು ಮೆಚ್ಚಿದ್ದರು.

ಆದರೆ ಇದೀಗ ಹಲವು ಮಾಧ್ಯಮಗಳು ಪೊಲೀಸ್ ದಂಪತಿ ಹೇಳಿಕೆ ನೈಜತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇಡೀ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದು, ಈ ದಂಪತಿ ಎವರೆಸ್ಟ್ ಏರಿರುವುದು ನಿಜವೇ ಎಂದು ಖಚಿತಪಡಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಪರ್ವತಾರೋಹಿ ಸುರೇಂದ್ರ ಶೆಳ್ಕೆ ಪೊಲೀಸ್ ದಂಪತಿಯ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ದಿನೇಶ್ ಮೇ 23ರಂದು ಎವರೆಸ್ಟ್‌ನ ತುತ್ತತುದಿ ಏರಿದ್ದಾಗಿ ಜೂನ್ 5ರಂದು ಪತ್ರಿಕಗೋಷ್ಠಿ ನಡೆಸಿ ಪ್ರಕಟಿಸಿದ್ದರು. ಈ ದಂಪತಿ ಪರ್ವತಾರೋಹಣದ ಬೇಸ್ ಕ್ಯಾಂಪ್‌ನಲ್ಲಿದ್ದರೂ, ಯಾರೂ ಪರ್ವತದ ಮೇಲೆ ಅವರನ್ನು ನೋಡಿಲ್ಲ. ಇವರಿದ್ದ ತಂಡದ ಸದಸ್ಯರೇ ಹೇಳುವಂತೆ 17,999 ಅಡಿ ಎತ್ತರದಲ್ಲಿ ಮೇ 10ರಂದು ಹಿಮಪಾತವಾದ ಜಾಗಕ್ಕೂ ಈ ದಂಪತಿ ತಲುಪಿಲ್ಲ ಎಂದು ಹೇಳಿದರು. ಆದ್ದರಿಂದ ಮೇ 23ರಂದು ಅವರು ತುತ್ತತುದಿ ತಲುಪುವುದು ಸಾಧ್ಯವೇ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದರಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾಥೋಡ್ ಹಾಕಿರುವ ಪರ್ವತಾರೋಹಣ ಚಿತ್ರಗಳ ನೈಜತೆ ಬಗ್ಗೆಯೂ ಸಂಶಯ ಮೂಡಿದೆ. ಬಝ್‌ಫೀಡ್ ಇಂಡಿಯಾ ಕೂಡಾ ದಿನೇಶ್ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಚಿತ್ರದ ನೈಜತೆಯನ್ನು ಪ್ರಶ್ನಿಸಿದೆ. ಅವರು ಶೇರ್ ಮಾಡಿದ ಚಿತ್ರದಲ್ಲಿ ಈ ದಂಪತಿ ಬೇರೆ ಬಗೆಯ ಕಿಟ್, ಬೂಟು ಹೊಂದಿದ್ದರು. ಅವುಗಳೊಂದಿಗೆ ಎವರೆಸ್ಟ್ ಏರುವುದು ಸಾಧ್ಯವಿಲ್ಲ. ಶೆಳ್ಕೆ ವಾದ ಸರಿ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X