Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ಜಡಿ ಮಳೆಗೆ ಅಪಾರ ಹಾನಿ

ಹೊನ್ನಾವರ: ಜಡಿ ಮಳೆಗೆ ಅಪಾರ ಹಾನಿ

ವಾರ್ತಾಭಾರತಿವಾರ್ತಾಭಾರತಿ30 Jun 2016 11:15 PM IST
share
ಹೊನ್ನಾವರ: ಜಡಿ ಮಳೆಗೆ ಅಪಾರ ಹಾನಿ

ಹೊನ್ನಾವರ, ಜೂ.30: ತಾಲೂಕಿನಲ್ಲಿ ಹಲವು ದಿನಗಳಿಂದ ಅಹೋರಾತ್ರಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಲವೆಡೆ ನೀರು ತುಂಬಿ ಜನಜೀವನ ಅಸ್ತವ್ಯಸ್ತವಾಗಿದೆ. ನದಿ ಹಳ್ಳಗಳು ತುಂಬಿ ಹರಿಯಲಾರಂಭಿಸಿದೆ. ಶರಾವತಿ ನದಿಯ ಇಕ್ಕೆಲಗಳಲ್ಲಿ ವಾಸಿಸುವ ಜನರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಹಳದೀಪುರದಲ್ಲಿ ಬೃಹತ್ ಆಲದ ಮರವು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಪರಿಣಾಮ ನಾಲ್ಕು ತಾಸು ವಾಹನ ಸಂಚಾರ ಸ್ಥಗಿತಗೊಂಡು ಪ್ರವಾಸಿಗರು ಪರದಾಡುವಂತಾಯಿತು.

ಮಳೆಯಿಂದ ಬಾಸ್ಕೇರಿ ಹೊಳೆ ತುಂಬಿ ಹರಿದು ಶೇಡಿಮೂಲೆ ಹಾಗೂ ಮುಗ್ವಾ ಹರಿಜನಕೇರಿ, ಬಾಸ್ಕೇರಿ ಬಂಕನಹಿತ್ಲ ಹೊಸಾ ಕುಳಿ ಗ್ರಾಮದ ಬಾಸ್ಕೇರಿ ಮಜರೆಗಳಲ್ಲಿ ಹೊಳೆಯ ಎರಡು ದಿಕ್ಕಿನಲ್ಲಿ ಅಜಮಾಸ 75 ರಿಂದ 90 ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿ ಬಂದಿದೆ.

ಸ್ಥಳಕ್ಕೆ ಹೊನ್ನಾವರ ತಹಶೀಲ್ದಾರ್ ಜಿ.ಎಂ. ಬೋರಕರ್, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.     ಅಲ್ಲದೆ, ಹಳದೀಪುರ ಗ್ರಾಪಂ ವ್ಯಾಪ್ತಿಯ ಕರಿಮೂಲೆ, ಕಂಟಂಚಿಕೇರಿ, ತಾರಿಬಾಗಿಲು, ಸಾಲಿಕೇರಿ, ಕಲ್ಕಟ್ಟೆಕೇರಿ ಮಜರೆ ಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ನೆರೆಹಾವಳಿ ಕುರಿತು ಪರಿಶೀಲನೆ ನಡೆಸಿತು.

        

  ಕರಿಮೂಲೆ ಮಜರೆಯಲ್ಲಿ ಭಾರೀ ಮಳೆಯಿಂದ ಅಜಮಾಸ 80 ರಿಂದ 100 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಕರ್ಕಿ ಗ್ರಾಪಂ ವ್ಯಾಪ್ತಿಯ ನಡುಚಿಟ್ಟೆ ಮಜರೆಗಳ 5 ರಿಂದ 6 ಮನೆಗಳಿಗೆ ನೀರು ನುಗ್ಗಿದ್ದು ಜೆಸಿಬಿಯಿಂದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಗಿದೆ. ಕಡತೋಕಾ ಗ್ರಾಪಂ ವ್ಯಾಪ್ತಿಯ ಹುಜಿಮರಿ, ಗುಡ್ನಕಟ್ಟು, ಬೋಗ್ರಿಹಿತ್ಲ ಮಜರೆಗಳಿಗೆ ಸುತ್ತ ನೆರೆ ನೀರು ಆವರಿಸಿದ್ದು, ಸಾರ್ವಜನಿಕರನ್ನು ಸ್ಥಳಾಂತರಿಸಲು 3 ಮಜರೆಗಳಿಗೆ ದೋಣಿ ವ್ಯವಸ್ಥೆ ಮಾಡಲಾಗಿತ್ತು. ಗುಡ್ನಕಟ್ಟು, ಹುಜಿಮರಿ, ಹೆಬ್ಳೆಕೊಪ್ಪ, ಮೂಲೆಗದ್ದೆ, ಮಾಡಗೇರಿ ಮಜರೆಗಳ ಮನೆಗಳಿಗೆ ನುಗ್ಗಿದ್ದ ನೀರು ಸರಾಗ ವಾಗಿ ಹರಿದು ಹೋಗಲು ಅಧಿಕಾರಿಗಳ ತಂಡ ವ್ಯವಸ್ಥೆ ಮಾಡಿತು. ಕಾಸರಕೋಡ ಗ್ರಾಪಂ ವ್ಯಾಪ್ತಿಯ ರೋಶನ ಮೊಹಲ್ಲಾ, ಟೊಂಕಾ ಮಜರೆಗಳಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ನೀರು ಸರಾಗವಾಗಿ ಹರಿದು ಹೋಗುವಂತೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ನೀರು ಹರಿದು ಹೋಗಲು ಅನುವು ಮಾಡಿಕೊಟ್ಟಿದ್ದಾರೆ. ಮಂಕಿ ಗ್ರಾಮದ ಕುಂಬಾರ ಕೇರಿಯಲ್ಲಿ ನೀರು ತುಂಬಿ ಜನರು ಪರದಾಡುವಂತಾಯಿತು. ಕೆಳಗಿನೂರು ಗ್ರಾಪಂ ವ್ಯಾಪ್ತಿಯ ನಾಜಗಾರ ಮಜರೆಯಲ್ಲಿ ಶ್ರೀಧರ ಸುಬ್ಬು ನಾಯ್ಕ ರವರ ಮನೆಯ ಮೇಲೆ ಹಲಸಿನ ಮರ ಬಿದ್ದು 40 ಸಾವಿರ ರೂ. ವೌಲ್ಯದ ಹಾನಿ ಸಂಭವಿಸಿದೆ ಎನ್ನಲಾಗಿದೆ.

ಮಂಜುನಾಥ ಮಾದೇವ ನಾಯ್ಕ ರವರಿಗೆ ಸೇರಿದ 20 ಪೂಟ್ ಕಾಂಪೌಂಡ್ ಗೋಡೆ ಕುಸಿದು, ರೂ. 60 ಸಾವಿರ ಹಾನಿ ಸಂಭವಿಸಿರುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

ಮೋಹನ ದಾಮೋದರ ಶ್ಯಾನಬಾಗ ಮನೆಯ ಮೇಲೆ ಮಾವಿನಮರ ಬಿದ್ದು ಹಾನಿ ಆಗಿದ್ದು ರೂ. 15 ಸಾವಿರ ಹಾನಿ ಸಂಭವಿಸಿರುವ ಬಗ್ಗೆ ಅಂದಾಜಿಸಲಾಗಿದೆ.

  

ಮೇಲಿನ ಇಡಗುಂಜಿ ಗ್ರಾಮ ಪಂಚಾಂುತ ವ್ಯಾಪ್ತಿಯ ವಿದ್ಯಾಧರ ಕ್ಷೇತ್ರಪಾಲ ಹೆಗಡೆ ರವರ ಮನೆಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿರುವ ಪರಿಣಾಮ ರೂ. 20 ಸಾವಿರ ಅಂದಾಜಿಸಲಾಗಿದೆ. ಈ ಸಂಬಂಧ ಬುಧವಾರ ಸಭೆ ನಡೆಸಿದ ತಹಶೀಲ್ದಾರ್, ಆಯಾ ಗ್ರಾಮಗಳಿಗೆ ನಿಯೋಜಿಸಿದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಭವಿಸಬಹುದಾದ ಅನಾಹುತ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮ ವಹಿಸಲು ಸೂಕ್ತ ನಿರ್ದೇಶನ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X