Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಚಾರಿ ಮೀನು ಮಾರಾಟ ವಾಹನಕ್ಕೆ ಸಚಿವ...

ಸಂಚಾರಿ ಮೀನು ಮಾರಾಟ ವಾಹನಕ್ಕೆ ಸಚಿವ ಮಧ್ವರಾಜ್‌ರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 Jun 2016 11:38 PM IST
share
ಸಂಚಾರಿ ಮೀನು ಮಾರಾಟ ವಾಹನಕ್ಕೆ ಸಚಿವ ಮಧ್ವರಾಜ್‌ರಿಂದ ಚಾಲನೆ

ಬೆಂಗಳೂರು, ಜೂ.30: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮೊಬೈಲ್ ಮತ್ಸದರ್ಶಿನಿ ಹಾಗೂ ಮೊಬೈಲ್ ಮೀನು ಮಾರಾಟ ವಾಹನಕ್ಕೆ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಈ ವಾಹನ ಬೆಂಗಳೂರು ಉತ್ತರದಲ್ಲಿ ಮಾರಾಟ ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ನಗರದ ಇತರೆಡೆಯಲ್ಲೂ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಇದೊಂದು ವಿನೂತನ ಯೋಜನೆಯಾಗಿದೆ. ಈ ವಾಹನದಲ್ಲಿ ತಾಜಾ ಮೀನು ಇರಲಿದ್ದು, ನಗರದ ಪ್ರತೀ ಬಡಾವಣೆಗೂ ಹೋಗಲಿದೆ. ಬೆಂಗಳೂರಿಗೆ ಕನಿಷ್ಠ ಇಂತಹ 100 ವಾಹನಗಳ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ 100 ವಾಹನದಲ್ಲಿ ಮಾರಾಟ ಮಾಡುವಂತೆ ನಿಗಮ ಪ್ರಯತ್ನಿಸಬೇಕು ಎಂದು ಹೇಳಿದರು.
 ಜಗತ್ತಿನಲ್ಲಿ ಮೀನು ಅತ್ಯಂತ ಪೌಷ್ಟಿಕಾಂಶ ಇರುವ ಆಹಾರವಾಗಿದ್ದು, ಅತೀ ಬೇಡಿಕೆಯ ಪದಾರ್ಥವಾಗಿದೆ. ವಾಹನದ ಸಿಬ್ಬಂದಿ ಮೀನು ಶುಚಿಗೊಳಿಸಿ ನೀಡುತ್ತಾರೆ. ಬೆಲೆ ಕೂಡ ಕಡಿಮೆ ಇರುತ್ತದೆ ಎಂದು ಮಾಹಿತಿ ನೀಡಿದರು.
  ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಕೆ.ಶೆಟ್ಟಿ ಮಾತನಾಡಿ, ತಾಜಾ ಮೀನು ಮಾತ್ರ ಈ ವಾಹನದಲ್ಲಿ ಮಾರಾಟ ಮಾಡಲಾಗುತ್ತದೆ. 10ಕ್ಕೂ ಅಧಿಕ ವಿಧದ ಮೀನು ಇದರಲ್ಲಿರುತ್ತವೆ. 300 ಕೆ.ಜಿ.ಗೂ ಅಧಿಕ ಮೀನುಗಳನ್ನು ಶೇಖರಣೆ ಮಾಡುವ ವ್ಯವಸ್ಥೆಯನ್ನು ಈ ವಾಹನ ಹೊಂದಿದೆ ಎಂದು ತಿಳಿಸಿದರು.
ವಾಹನದ ವಿಶೇಷತೆಗಳು:  ಮೀನಿನ ಪ್ರದರ್ಶನ, ಮೀನು ಶೇಖರಣ ವ್ಯವಸ್ಥೆ, ನೀರಿನ ವ್ಯವಸ್ಥೆ ಹಾಗೂ ಘನ ಮತ್ತು ದ್ರವ ತ್ಯಾಜ್ಯ ಶೇಖರಿಸುವ ವ್ಯವಸ್ಥೆ ಹೊಂದಿದೆ. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚಾಗಲಿದೆ.
  ಮೊಬೈಲ್ ಮತ್ಸ್ಯದರ್ಶಿನಿಯಲ್ಲಿ ಗ್ರಾಹಕರಿಗೆ ಉತ್ತಮ ಪರಿಸರದಲ್ಲಿ ಮೀನು ಮತ್ತು ಮೀನಿನ ಮೌಲ್ಯ ವರ್ಧಿತ ಖಾದ್ಯಗಳನ್ನು ನೀಡಲಾಗುತ್ತದೆ. ಇದರಲ್ಲಿ ಮೀನನ್ನು ಸಂರಕ್ಷಿಸಲು ಇಡಲು ಬೇಕಾದ ಫೈಯರ್‌ಗಳು, ಓವರ್ ಹೆಡ್ ಟ್ಯಾಂಕ್, ತ್ಯಾಜ್ಯ ವಸ್ತು ಶೇಖರಣೆ, ಬ್ಯಾಟರಿ ಚಾಲಿತ ವ್ಯವಸ್ಥೆ ಇರುತ್ತದೆ.
 ಮೊಬೈಲ್ ಮೀನು ಮಾರಾಟ ವಾಹನದಲ್ಲಿ ತಾಜಾ ಮೀನನ್ನು ಶುದ್ಧೀಕರಿಸಿಕೊಡಲಾಗುತ್ತದೆ. ಇದರಲ್ಲಿ ಮೀನು ಸಂರಕ್ಷಿಸಿಡಲು ಬೇಕಾದ ಚಿಲ್ಲರ್, ನೀರಿನ ವ್ಯವಸ್ಥೆ, ಮೀನು ಶುಚಿಗೊಳಿಸಲು ಬೇಕಾದ ವ್ಯವಸ್ಥೆ ಇರುತ್ತದೆ. 12 ಲಕ್ಷ ರೂ.ವೆಚ್ಚದಲ್ಲಿ ಇದನ್ನು ತಯಾರಿಸಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X