Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವರ ಘನತೆ ಉಳಿಸಲು ಹೋದರೆ ನನ್ನ...

ಸಚಿವರ ಘನತೆ ಉಳಿಸಲು ಹೋದರೆ ನನ್ನ ವಿರುದ್ಧವೇ ದೂರು!

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ1 July 2016 8:39 PM IST
share
ಸಚಿವರ ಘನತೆ ಉಳಿಸಲು ಹೋದರೆ ನನ್ನ ವಿರುದ್ಧವೇ ದೂರು!

ಮಂಗಳೂರು,ಜು.1: ಸಚಿವ ಯು ಟಿ ಖಾದರ್ ಘನತೆ ಉಳಿಸಲು ಹೋದರೆ ನನ್ನ ವಿರುದ್ಧವೇ ಪೊಲೀಸರಿಗೆ ಸಚಿವರ ಆಪ್ತ ಸಹಾಯಕರು ದೂರು ನೀಡಿದ್ದಾರೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಮ್ಮ ಮೇಲೆ ನೀಡಲಾಗಿರುವ ದೂರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಮುನೀರ್ ಕಾಟಿಪಳ್ಳ, ಕೊಲೆ ಆರೋಪದಲ್ಲಿ ಬಂಧಿತನಾಗಿರುವ ಯುವ ಬ್ರಿಗೇಡ್ ನಾಯಕ ನರೇಂದ್ರ ಶೆಣೈಯನ್ನು ಜೈಲಿನಲ್ಲಿ ಚೆನ್ನಾಗಿ ನೋಡಿಕೊಳ್ಳುವಂತೆ ಸಚಿವ ಯು.ಟಿ. ಖಾದರ್ ಆಪ್ತ ಸಹಾಯಕ ದೂರವಾಣಿಯಲ್ಲಿ ಸೂಚಿಸಿದ್ದಾರೆ ಎಂದು ಜೈಲಾಧಿಕಾರಿಗಳು ಹಿರಿಯ ವಕೀಲರಿಗೆ ಮಾಹಿತಿ ನೀಡಿರುವುದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೆ. ಸಚಿವ ಯು.ಟಿ. ಖಾದರ್ ಬಗ್ಗೆ ಗಮನ ಹರಿಸಲಿ ಮತ್ತು ಯು. ಟಿ. ಖಾದರ್ ಹೆಸರನ್ನು ಯಾರಾದರೂ ದುರುಪಯೋಗ ಮಾಡಿಕೊಂಡಿದ್ದರೆ ಈ ಬಗ್ಗೆ ತನಿಖೆ ನಡೆಸಲಿ ಎಂಬುದಷ್ಟೇ ಫೇಸ್‌ಬುಕ್ ಸ್ಟೇಟಸ್‌ನ ಉದ್ದೇಶವಾಗಿತ್ತು.

ಇಷ್ಟಕ್ಕೂ ಯು.ಟಿ.ಖಾದರ್ ಆಪ್ತ ಸಹಾಯಕರು ಅಥವಾ ಅವರ ಕಚೇರಿ ಈ ಕೃತ್ಯದಲ್ಲಿ ಇರಲಿಕ್ಕಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಲೂ ಸಾಧ್ಯವಿಲ್ಲ. ಯಾಕೆಂದರೆ ಯು.ಟಿ. ಖಾದರ್ ಮತ್ತು ಅವರ ಕಚೇರಿ, ಸರಕಾರಿ ನಿವಾಸದಲ್ಲಿ ಹಿಂದುತ್ವ ಸಂಘಟನೆಯ ಪ್ರಮುಖ ಸ್ಥಾನದಲ್ಲಿರುವ ಶಿಕ್ಷಣ ಸಂಸ್ಥೆಯ ಮಾಲಕರು, ಆಸ್ಪತ್ರೆಗಳ ಮಾಲಕರು ಅಡ್ಡಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಹಿನ್ನೆಲೆಯಲ್ಲಿ ನರೇಶ್ ಶೆಣೈ ಜೊತೆ ಆತ್ಮೀಯತೆಯನ್ನು ಹೊಂದಿರುವ ಹಿಂದುತ್ವ ಸಂಘಟಕರು ಯು.ಟಿ. ಖಾದರ್ ಆಪ್ತ ಸಹಾಯಕರ ಆತ್ಮೀಯ ಸಂಪರ್ಕವನ್ನು ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಗಳು ಇಲ್ಲವೆಂದಿಲ್ಲ. ಇದು ಯು.ಟಿ.ಖಾದರ್ ಅರಿವಿಗೆ ಬಂದು ನಡೆದಿದೆಯೋ ಅಥವಾ ಗಮನಕ್ಕೆ ಬಾರದೆ ನಡೆದಿದೆಯೋ ಅಥವಾ ಫೇಕುಗಳ ಕೃತ್ಯವೋ ಅನ್ನೋದು ತನಿಖೆಯಿಂದಷ್ಟೇ ತಿಳಿಯಬಹುದು.

ಇದೊಂದು ಗಂಭೀರ ಪ್ರಕರಣ. ಈ ಪ್ರಕರಣದ ಹಾದಿ ತಪ್ಪಿಸಲು ಹಲವು ಶಕ್ತಿಗಳು ಯತ್ನಿಸುತ್ತಿವೆ ಮತ್ತು ಕೋಮುವಾದಿಗಳ ಜೊತೆ ಅಪವಿತ್ರ ಮೈತ್ರಿಯನ್ನು ಹೊಂದಿರುವ ಸರಕಾರದ ಉನ್ನತ ಸ್ಥಾನದಲ್ಲಿರುವವರು ಕೆಲವರು ಪ್ರಯತ್ನಿಸಿದ ಆರೋಪಗಳು ಈಗಾಗಲೇ ಕೇಳಿ ಬಂದಿರುತ್ತದೆ. ಅಂತಹ ಸಂದರ್ಭದಲ್ಲಿ ಈ ಪ್ರಕರಣದ ರೂವಾರಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಮತ್ತು ಅವರಿಗೆ ಯಾವುದೇ ರಿಯಾಯಿತಿಗಳು ದೊರೆಯದಂತೆ ಜಾಗರೂಕನಾಗಿರುವುದು ನನ್ನ ಕರ್ತವ್ಯವೆಂದು ನಾನು ಭಾವಿಸಿರುತ್ತೇನೆ. ಆ ನಿಟ್ಟಿನಲ್ಲಿ ಸಮಾನ ಮನಸ್ಕರು ಮತ್ತು ನನ್ನ ಸಂಘಟನೆಯೊಂದಿಗೆ ಕ್ರೀಯಾಶೀಲನಾಗಿರುತ್ತೇನೆ. ಇದೇ ಹಿನ್ನೆಲೆಯಲ್ಲಿ ಯು.ಟಿ.ಖಾದರ್ ಹೆಸರಿನ ಬಳಕೆಯ ಬಗ್ಗೆ ಮಾಹಿತಿ ಬಂದಾಗ ಅದನ್ನು ಸಾಮಾಜಿಕ ಜವಾಬ್ದಾರಿಯಿಂದ ಹಂಚಿಕೊಂಡಿದ್ದೇನೆ. ಇದನ್ನು ಶ್ಲಾಘಿಸಬೇಕಿದ್ದ ಸಚಿವ ಯು.ಟಿ.ಖಾದರ್ ತನ್ನ ಮೂವರು ಆಪ್ತ ಸಹಾಯಕರ ಹೆಸರಿನಲ್ಲಿ ನನ್ನ ವಿರುದ್ಧ ಕದ್ರಿ ಠಾಣೆಯಲ್ಲಿ ಮೊಕದ್ದಮೆ ಹೂಡಿದ್ದಾರೆ.

ನಾನು ನೀಡಿದ ಮಾಹಿತಿಯನ್ವಯ ತನಿಖೆ ಆಗಬಹುದು ಎಂದುಕೊಂಡಿದ್ದರೆ ಸಚಿವರು ಆಪ್ತ ಸಹಾಯಕರ ಮೂಲಕ ನನ್ನ ವಿರುದ್ಧವೇ ದೂರು ನೀಡಿರುವುದು ವಿಪರ್ಯಾಸ. ಇದು ಸಚಿವ ಖಾದರ್‌ರ ಪ್ರಾಮಾಣಿಕತೆ, ಬದ್ಧತೆಯ ಬಗ್ಗೆ ನನ್ನಲ್ಲಿ ಅನುಮಾನಗಳನ್ನು ಹುಟ್ಟಿಸಿದೆ ಎಂದು ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X