Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭತ್ತವನ್ನು ಕಾಳುಮೆಣಸು ಎಂದು...

ಭತ್ತವನ್ನು ಕಾಳುಮೆಣಸು ಎಂದು ಬ್ಯಾಂಕ್‌ನ್ನು ಯಾಮಾರಿಸಿ ಸಾಲಪಡೆದ ಗ್ರಾಹಕ!

ಸೊಸೈಟಿಯಲ್ಲಿ ಲಕ್ಷಾಂತರ ರೂ. ವಂಚನೆ ಪ್ರಕರಣ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ1 July 2016 9:03 PM IST
share
ಭತ್ತವನ್ನು ಕಾಳುಮೆಣಸು ಎಂದು ಬ್ಯಾಂಕ್‌ನ್ನು ಯಾಮಾರಿಸಿ ಸಾಲಪಡೆದ ಗ್ರಾಹಕ!

ಸುಳ್ಯ, ಜು.1: ಕಾಳುಮೆಣಸು ಎಂದು ಭತ್ತವನ್ನು ಸಹಕಾರಿ ಸಂಘದಲ್ಲಿ ಅಡವಿರಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿದ ಘಟನೆ ಸುಳ್ಯ ತಾಲೂಕಿನ ಸೊಸೈಟಿಯೊಂದರಲ್ಲಿ ನಡೆದಿದ್ದು, ಗ್ರಾಹಕ ತಪ್ಪನ್ನು ಒಪ್ಪಿಕೊಂಡು ಸಾಲ ಹಿಂತಿರುಗಿಸಿ ಭತ್ತವನ್ನು ಕೊಂಡೊಯ್ದ ಘಟನೆ ನಡೆದಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮದ ನೂಜಾಲು ಸುಬ್ರಹ್ಮಣ್ಯ ಭಟ್ ಎಂಬವರು ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಾಲ್ಕು ಚೀಲ ಕಾಳುಮೆಣಸು ಅಡಿವಿರಿಸಿ ಅಡಮಾನ ಸಾಲ ಪಡೆದಿದ್ದರು. ಬಳಿಕ ತನ್ನ ಪತ್ನಿ, ಸಂಬಂಧಿಕರು ಹಾಗೂ ಕೆಲಸದವರ ಹೆಸರಿನಲ್ಲಿ ಸುಮಾರು 30 ಚೀಲ ಕಾಳುಮೆಣಸು ಅಡವಿರಿಸಿ ಲಕ್ಷಾಂತರ ರೂ. ಸಾಲ ಪಡೆದಿದ್ದರು. ಬಳಿಕ ಮೊದಲಿರಿಸಿದ್ದ ನಾಲ್ಕು ಚೀಲ ಕಾಳುಮೆಣಸನ್ನು ಬಿಡಿಸಿ ಸಾಲ ಚುಕ್ತಾ ಮಾಡಿದ್ದರು. ಉಳಿದಂತೆ 30 ಚೀಲ ಕಾಳುಮೆಣಸುವಿನ ಸಾಲ ಬಾಕಿ ಇತ್ತು. ಆದರೆ, 30 ಚೀಲ ಕಾಳುಮೆಣಸು ಎಂದು ನಂಬಿಸಿ ಭತ್ತವನ್ನು ತುಂಬಿಸಿ ವಂಚಿಸಿದ ಪ್ರಕರಣ ಬುಧವಾರ ಬೆಳಕಿಗೆ ಬಂದಿದ್ದು, ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡು ಸಾಲ ಮರುಪಾವತಿಸಿ ಭತ್ತವನ್ನು ಕೊಂಡೊಯ್ದಿದ್ದಾರೆ.

ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್‌ರಿಗೆ ವಿಷಯ ತಿಳಿಯುತ್ತಿದ್ದಂತೆ ಅವರು ಸಾಲ ಪಡೆದ ನೂಜಾಲ ಸುಬ್ರಹ್ಮಣ್ಯ ಭಟ್‌ರಿಗೆ ಕರೆ ಮಾಡಿ ವಂಚನೆ ವಿಷಯ ತಿಳಿಸಿದ್ದು, ತಪ್ಪೊಪ್ಪಿಕೊಂಡ ಭಟ್ ಅವರು ಸಾಲ ಮರುಪಾವತಿಸಿ ಭತ್ತವನ್ನು ಕೊಂಡೊಯ್ದರೆನ್ನಲಾಗಿದೆ. ಆರೋಪಿ ಸಹಕಾರಿ ಸಂಘದಿಂದ ವರ್ಷದ ಹಿಂದೆ ಚಿನ್ನವನ್ನೂ ಅಡವಿರಿಸಿ ಲಕ್ಷಾಂತರ ರೂ. ಸಾಲವನ್ನು ಪಡೆದಿದ್ದು, ಅನುಮಾನ ಬಂದು ಪರೀಕ್ಷಿಸಿದಾಗ ಅದೂ ನಕಲಿ ಚಿನ್ನ ಎಂಬ ವಿಷಯ ಗೊತ್ತಾಗಿದೆ.

ಈ ಎರಡೂ ಪ್ರಕರಣಗಳ ಬಗ್ಗೆ ಚರ್ಚಿಸಲು ಸಂಘದ ಆಡಳಿತ ಮಂಡಳಿಯ ತುರ್ತು ಸಭೆ ಗುರುವಾರ ನಡೆದಿದೆ. ವಿಚಾರಣೆ ನಡೆಸಿ ಎಲ್ಲಾ ಸಾಲವನ್ನು ವಸೂಲಿ ಮಾಡಲಾಗಿದೆ. ಹಾಗಾಗಿ ಪೊಲೀಸ್ ದೂರು ನೀಡಿಲ್ಲ ಎನ್ನುವುದು ಸಂಘದ ಅಧ್ಯಕ್ಷ ವಿಷ್ಣು ಭಟ್ ಅವರ ಹೇಳಿಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X