Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಕ್ರಿಕೆಟ್ ಸಮಿತಿಯ ಮಾಧ್ಯಮ...

ಐಸಿಸಿ ಕ್ರಿಕೆಟ್ ಸಮಿತಿಯ ಮಾಧ್ಯಮ ಪ್ರತಿನಿಧಿ ಹುದ್ದೆಗೆ ರವಿ ಶಾಸ್ತ್ರಿ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ1 July 2016 11:37 PM IST
share
ಐಸಿಸಿ ಕ್ರಿಕೆಟ್ ಸಮಿತಿಯ ಮಾಧ್ಯಮ ಪ್ರತಿನಿಧಿ ಹುದ್ದೆಗೆ ರವಿ ಶಾಸ್ತ್ರಿ ರಾಜೀನಾಮೆ

ಹೊಸದಿಲ್ಲಿ, ಜು.1: ಐಸಿಸಿಯ ಪ್ರತಿಷ್ಠಿತ ಕ್ರಿಕೆಟ್ ಸಮಿತಿಯಲ್ಲಿ ಮಾಧ್ಯಮ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಮಾಜಿ ನಾಯಕ ಹಾಗೂ ಮಾಜಿ ಟೀಮ್ ಡೈರೆಕ್ಟರ್ ರವಿ ಶಾಸ್ತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗೆ ಟೀಮ್ ಇಂಡಿಯಾ ಕೋಚ್ ಆಗಿ ನೇಮಕಗೊಂಡಿರುವ ಅನಿಲ್ ಕುಂಬ್ಳೆ ಅವರೇ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಕೋಚ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಶಾಸ್ತ್ರಿಯವರನ್ನು ಕಡೆಗಣಿಸಿದ್ದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಕುಂಬ್ಳೆ ಅವರಿಗೆ ಕೋಚ್ ಹುದ್ದೆಗೆ ಆಯ್ಕೆ ಮಾಡಿತ್ತು.

ನಾನು ಈಗಾಗಲೇ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ನನಗೆ ವೈಯಕ್ತಿಕ ಬದ್ಧತೆಯಿರುವ ಕಾರಣ ಈ ನಿರ್ಧಾರಕ್ಕೆ ಬಂದಿರುವೆ. ಕಳೆದ ಆರು ವರ್ಷಗಳಿಂದ ನಾನು ಐಸಿಸಿ ಕ್ರಿಕೆಟ್ ಸಮಿತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಸುದ್ದಿಸಂಸ್ಥೆಗೆ ಶಾಸ್ತ್ರಿ ತಿಳಿಸಿದ್ದಾರೆ.

ವೀಕ್ಷಕವಿವರಣೆ, ಟಿವಿಗಳಲ್ಲಿ ಚರ್ಚಾಗೋಷ್ಠಿ ಹಾಗೂ ಅಂಕಣಗಾರರಾಗಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಶಾಸ್ತ್ರಿ ಪ್ರತಿಷ್ಠಿತ ಹುದ್ದೆ ತೊರೆಯಲು ಇರುವ ಅಧಿಕೃತ ಕಾರಣ. ಆದರೆ, ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯ ಸೌರವ ಗಂಗುಲಿ ಅವರೊಂದಿಗೆ ಬಹಿರಂಗವಾಗಿ ವಾಕ್ಸಮರ ನಡೆಸಿರುವುದು ಮಾಜಿ ಆಲ್‌ರೌಂಡರ್ ಶಾಸ್ತ್ರಿ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂಬ ವದಂತಿಯೂ ಹಬ್ಬಿದೆ.

ಸೌರವ್ ಅವರಂತೆಯೇ ರವಿ ಕೂಡ ಒಂದು ಹಂತದಲ್ಲಿ ಭಾವಜೀವಿ. ಅವರು ಈವರೆಗೆ ಐಸಿಸಿಯಲ್ಲಿ ಮಾಧ್ಯಮ ಪ್ರತಿನಿಧಿಯಾಗಿ ಬಿಸಿಸಿಐಯನ್ನು ಪ್ರತಿನಿಧಿಸುತ್ತಿದ್ದರು. ಬಹುಶಃ ಅವರಿಗೆ ಆ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ. ಕುಂಬ್ಳೆ ಐಸಿಸಿ ಕ್ರಿಕೆಟ್ ಮುಖಸ್ಥರಾಗಿ ಮುಂದುವರಿಯಲು ಬಯಸಿದ್ದಾರೆ. ಕುಂಬ್ಳೆ ಅವರೊಂದಿಗೆ ಸಭೆಯಲ್ಲಿ ಭಾಗವಹಿಸುವುದು ಶಾಸ್ತ್ರಿಗೆ ಇಷ್ಟವಾಗಿಲ್ಲ ಎಂದು ಕಾಣುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಶಾಸ್ತ್ರಿ ಭಾರತದ ಕೋಚ್ ಹುದ್ದೆಯ ಸಂದರ್ಶನಕ್ಕೆ ಟೆಲಿಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಕೋಚ್ ಹುದ್ದೆಯ ಆಯ್ಕೆ ಜವಾಬ್ದಾರಿ ಹೊತ್ತಿದ್ದ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರ ಪೈಕಿ ಓರ್ವರಾಗಿರುವ ಗಂಗುಲಿ ಸಂದರ್ಶನದ ವೇಳೆ ಗೈರಾಗಿದ್ದರು. ಗಂಗುಲಿ ಗೈರು ಹಾಜರಾಗಿದ್ದು, ಸಂದರ್ಶನದ ಪ್ರಕ್ರಿಯೆಗೆ, ಸಲಹಾ ಸಮಿತಿಯ ಸದಸ್ಯ ಸ್ಥಾನಕ್ಕೆ ಮಾಡಿರುವ ಅಗೌರವ ಎಂದು ಶಾಸ್ತ್ರಿ ಬಹಿರಂಗವಾಗಿ ಟೀಕಿಸಿದ್ದರು.

‘‘ಮುಂಬೈಕರ್ ರವಿ ಶಾಸ್ತ್ರಿ ಮೂರ್ಖರ ಜಗತ್ತಿನಲ್ಲಿದ್ದಾರೆ. ಒಂದು ವೇಳೆ ರವಿ ಭಾರತದ ಕ್ರಿಕೆಟ್ ಕೋಚ್ ಹುದ್ದೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ, ವಿದೇಶ ಪ್ರವಾಸಕ್ಕೆ ತೆರಳುವ ಬದಲು ಕೋಲ್ಕತಾದಲ್ಲಿ ಸಂದರ್ಶನಕ್ಕೆ ಖುದ್ದು ಹಾಜರಾಗಬೇಕಾಗಿತ್ತು’’ ಎಂದು ಗಂಗುಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X