Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 200 ಕೋಟಿ ರೂ. ಹಸಿರು ದಂಡ ರದ್ದು ಪಡಿಸಿದ...

200 ಕೋಟಿ ರೂ. ಹಸಿರು ದಂಡ ರದ್ದು ಪಡಿಸಿದ ಕೇಂದ್ರ ಸರಕಾರ

ಅದಾನಿಗೆ ಅಚ್ಛೇ ದಿನ್ ...

ವಾರ್ತಾಭಾರತಿವಾರ್ತಾಭಾರತಿ2 July 2016 12:45 PM IST
share
200 ಕೋಟಿ ರೂ. ಹಸಿರು ದಂಡ ರದ್ದು ಪಡಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಜು.2: :ಹಿಂದಿನ ಯುಪಿಎ ಸರಕಾರ ಅದಾನಿ ಪೋರ್ಟ್ಸ್ ಆ್ಯಂಡ್ ಎಸ್‌ಇಝೆಡ್ ಮೇಲೆ ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಧಿಸಿದ್ದ 200 ಕೋಟಿ ರೂ. ದಂಡವನ್ನು ಕೇಂದ್ರ ಪರಿಸರ ಸಚಿವಾಲಯ ರದ್ದುಪಡಿಸಿದೆಯೆಂದು ಬ್ಯುಸಿನೆಸ್ ಸ್ಟಾಂಡರ್ಡ್ ವರದಿಯೊಂದು ತಿಳಿಸಿದೆ.

ಗುಜರಾತ್‌ನ ಮುಂದ್ರಾದಲ್ಲಿ ಕಂಪೆನಿಯ ಜಲಾಭಿಮುಖ ಅಭಿವೃದ್ಧಿ ಯೋಜನೆಗೆ 2009 ರಲ್ಲಿ ನೀಡಲಾಗಿದ್ದ ಪರಿಸರ ಅನುಮತಿಯನ್ನು ಕೂಡ ಸಚಿವಾಲಯ ವಿಸ್ತರಿಸಿದೆ. ಸಚಿವಾಲಯ ಈ ಹಿಂದೆ ಕಂಪೆನಿಗೆ ವಿಧಿಸಿದ್ದ ಹಲವು ಕಠಿಣ ಷರತ್ತುಗಳನ್ನು ಕೂಡ ಹಿಂಪಡೆಯಲಾಗಿದೆ. ಈ ಬಗೆಗಿನ ನಿರ್ಧಾರವನ್ನು ಸರಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ತೆಗೆದುಕೊಂಡಿದ್ದರೂ, ಪರಿಸರ ಅನುಮತಿಯನ್ನು ಕಳೆದ ಅಕ್ಟೋಬರ್‌ನಲ್ಲಿ ವಿಸ್ತರಿಸಲಾಗಿತ್ತು.

ಅದಾನಿ ಕಂಪೆನಿಯ ಜಲಾಭಿಮುಖ ಅಭಿವೃದ್ಧಿ ಯೋಜನೆಯ ವಿರುದ್ಧ ಗುಜರಾತ್ ಹೈಕೋರ್ಟಿನಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅಂದಿನ ಪರಿಸರ ಸಚಿವಾಲಯ 2012 ರಲ್ಲಿ ಯೋಜನೆಯಿಂದಾಗಿ ಪರಿಸರಕ್ಕಾಗುವ ಹಾನಿಯ ಬಗ್ಗೆ ಪರಿಶೀಲಿಸಲು ಸುನೀತಾ ನಾರಾಯಣ್ ಸಮಿತಿಯನ್ನು ನೇಮಿಸಿತು. ಯೋಜನೆ ಜಾರಿಯಲ್ಲಿ ಹಲವಾರು ನಿಮಮಗಳ ಉಲ್ಲಂಘನೆ ಹಾಗೂ ಪರಿಸರ ಹಾನಿಯನ್ನು ದೃಢೀಕರಿಸಿದ ಸಮಿತಿ ಈ ಯೋಜನೆಯಂಗವಾಗಿ ನಿರ್ಮಿಸಲುದ್ದೇಶಿಸಿದ್ದ ಉತ್ತರ ಬಂದರನ್ನು ನಿಷೇಧಿಸಲು ಶಿಫಾರಸು ಮಾಡಿತ್ತಲ್ಲದೆ, 200 ಕೋಟಿ ರೂ. ಅಥವಾ ಯೊಜನಾ ವೆಚ್ಚದ ಶೇಕಡಾ ಒಂದರಷ್ಟು ಪರಿಹಾರಾರ್ಥವಾಗಿ ದಂಡ ವಿಧಿಸಬೇಕೆಂದು ಹೇಳಿತ್ತು. ಈ ಶಿಫಾರಸುಗಳನ್ನು ಒಪ್ಪಿದ ಸಚಿವಾಲಯ ಅದಾನಿ ಕಂಪೆನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದರೂ ಕಂಪೆನಿ ತಾನೇನೂ ಪರಿಸರಕ್ಕೆ ಹಾನಿಗೈದಿಲ್ಲ ಎಂದು ವಾದಿಸಿತ್ತು. ಆದರೆ ಆಗ ವೀರಪ್ಪ ಮೊಯ್ಲಿ ಬದಲು ಜಯಂತಿ ನಟರಾಜ್ ಪರಿಸರ ಸಚಿವರಾಗಿ ಅಧಿಕಾರ ವಹಿಸಿದ್ದರಿಂದ ಈ ದಂಡ ವಿಧಿಸುವಿಕೆ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗಿತ್ತು.


ತರುವಾಯ ಆರ್‌ಟಿಐ ಮೂಲಕ 2012 ರಿಂದ 2016 ರ ನಡುವೆ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನ ಕಂಚಿ ಕೊಹ್ಲಿಯವರು ಪಡೆದುಕೊಂಡ ಮಾಹಿತಿಯಂತೆ ಸಚಿವಾಲಯದಲ್ಲಿ ಹಲವಾರು ಹೊಸದಾಗಿ ನೇಮಕಗೊಂಡ ಅಧಿಕಾರಿಗಳು ಅದಾನಿ ಪೋರ್ಟ್ಸ್ ಆ್ಯಂಡ್ ಎಸ್‌ಇಝಡ್ ಸಂಬಂಧ ಅಭಿಪ್ರಾಯಗಳನ್ನು ತಿರುವು ಮುರುವು ಮಾಡುವಲ್ಲಿ ಯಶಸ್ವಿಯಾಗಿದ್ದು, ಈಗಿನ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಕೂಡ ಅದಾನಿ ಸಂಸ್ಥೆ ಪರಿಸರಕ್ಕೆ ಹಾನಿಗೈದಿದೆಯೇ ಎಂಬುದು ದೃಢ ಫಟ್ಟಿದೆಯೇ ಎಂದು ಪ್ರಶ್ನಿಸಿದ್ದರೆನ್ನಲಾಗಿದೆ.

ಯೊಜನೆಯ ಹತ್ತಿರದ ಮರದ ತೋಪುಗಳಿಗೆ ಹಾನಿಯಾಗಿದೆಯೆಂಬುದನ್ನು ಅಧಿಕಾರಿಗಳು ಒಪ್ಪಿಕೊಂಡರೂ ಅದಾನಿ ಕಂಪೆನಿಯೇ ಇದಕ್ಕೆ ಕಾರಣವೆಂದು ಹೇಳಲು ಅಸಾಧ್ಯವೆಂದರು. ಈ ವಾದವನ್ನು ಸಚಿವರು ಒಪ್ಪಿಕೊಂಡ ಹಿನ್ನೆಲೆಯಲ್ಲಿ 200 ಕೋಟಿ ರೂ. ದಂಡವನ್ನು ರದ್ದುಪಡಿಸಲಾಯಿತೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X