Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ಜಾತಿ ವಿವಾಹ ದೇಶಕ್ಕೆ ದೊಡ್ಡ...

ಅಂತರ್ಜಾತಿ ವಿವಾಹ ದೇಶಕ್ಕೆ ದೊಡ್ಡ ಕೊಡುಗೆ: ಅಗ್ನಿ ಶ್ರೀಧರ್

‘ಜಾತಿ-ಪ್ರೀತಿ: ಭವಿಷ್ಯದ ನೆಲೆ ಯಾವುದು?’ ಚಿಂತನಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ2 July 2016 10:58 PM IST
share
ಅಂತರ್ಜಾತಿ ವಿವಾಹ ದೇಶಕ್ಕೆ ದೊಡ್ಡ ಕೊಡುಗೆ: ಅಗ್ನಿ ಶ್ರೀಧರ್

ಬೆಂಗಳೂರು, ಜು.2: ಇಂದಿನ ಯುವಜನತೆ ಅಂತರ್ಜಾತಿ ವಿವಾಹವಾಗುವುದರ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಬೇಕೆಂದು ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಅಭಿಪ್ರಾಯಿಸಿದ್ದಾರೆ.
 ಅಂತರ್ಜಾತಿ ವಿವಾಹವಾದ ಉನ್ನತಿ ಮತ್ತು ರಾಕೇಶ್‌ರವರಿಗೆ ಏರ್ಪಡಿಸಿದ್ದ ಔತಣಕೂಟದ ಸಲುವಾಗಿ ಸಮತಾ ಸೈನಿಕ ದಳ ಹಾಗೂ ನ್ಯಾಯಕ್ಕಾಗಿ ನಾವು ವತಿಯಿಂದ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ‘ಜಾತಿ-ಪ್ರೀತಿ: ಭವಿಷ್ಯದ ನೆಲೆ ಯಾವುದು?’ ಚಿಂತನಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
 ದೇಶದಲ್ಲಿ ಸಂಭವಿಸುವ ಪ್ರತಿಯೊಂದು ಆಗುಹೋಗುಗಳು ಜಾತಿಯ ಮೇಲೆ ನಿರ್ಧರಿತವಾಗಿರುತ್ತವೆೆ. ಅಧಿಕಾರಿಗಳ ನೇಮಕ, ಸಂಪತ್ತಿನ ಹಂಚಿಕೆ, ಭ್ರಷ್ಟಾಚಾರ, ದಲಿತರ ಮೇಲಿನ ಹಲ್ಲೆಗಳು, ಲೈಂಗಿಕ ಅತ್ಯಾಚಾರಗಳು ಸೇರಿದಂತೆ ಪುರುಷ ಪ್ರಧಾನ ವ್ಯವಸ್ಥೆಯ ಮೂಲ ಇರುವುದೇ ಜಾತಿ ವ್ಯವಸ್ಥೆಯಲ್ಲಿ. ಹೀಗಾಗಿ ಜಾತಿ ನಿರ್ಮೂಲನೆ ಗೊಂಡರೆ ಮಾತ್ರವೇ ಭವಿಷ್ಯದ ಭಾರತವನ್ನು ಸುಭದ್ರವಾಗಿ ಕಟ್ಟಬಹುದು ಎಂದು ಅವರು ಹೇಳಿದರು.
 ಪ್ರೀತಿಸುವುದು ಮನುಷ್ಯನ ಸಹಜ ಧರ್ಮ. ಅದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಆದರೆ, ಮೂಲಭೂತವಾದಿಗಳು ಪ್ರೀತಿಗೆ ದೊಡ್ಡ ಅಡ್ಡಗೋಡೆಯಾಗಿದ್ದು, ಪ್ರೀತಿಸುವ ಯುವ ಜನತೆಗೆ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತಿದ್ದಾರೆ. ಹೀಗಾಗಿ ಪ್ರೀತಿಸಿ ಮದುವೆಯಾಗಲು ಬಯಸುವ ಯುವ ಪ್ರೇಮಿಗಳಿಗೆ ಜನಪರ ಸಂಘಟನೆಗಳು ಬೆಂಬಲ ಕೊಡಬೇಕೆಂದು ಅವರು ಅಗ್ನಿ ಶ್ರೀಧರ್ ಹೇಳಿದರು.
ಹಿರಿಯ ಲೇಖಕಿ ಲಲಿತಾ ನಾಯಕ್ ಮಾತನಾಡಿ, ಜಾತಿ ಎನ್ನುವುದು ದೇಶಕ್ಕಂಟಿದ ದೊಡ್ಡ ಪಿಡುಗಾಗಿದೆ. ವಿಶ್ವದ ಎಲ್ಲ ದೇಶಗಳು ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗುತ್ತಿದೆ. ಆದರೆ, ಭಾರತದಲ್ಲಿ ಪ್ರೀತಿಸಿ ಮದುವೆಯಾದ ಒಂದೇ ಕಾರಣಕ್ಕೆ ತಂದೆ, ತಾಯಿಗಳೇ ತಮ್ಮ ಮಕ್ಕಳನ್ನು ಕೊಲೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಅಂಬೇಡ್ಕರ್, ಗಾಂಧೀಜಿ ಸೇರಿದಂತೆ ಎಲ್ಲ ನಾಯಕರು ಜಾತಿ ನಿರ್ಮೂಲನೆಗೆ ಪಣ ತೊಟ್ಟಿದ್ದರು. ಅಂತರ್ಜಾತಿ ವಿವಾಹವೊಂದೇ ಜಾತಿ ನಾಶಕ್ಕಿರುವ ಪ್ರಮುಖ ಮಾರ್ಗವೆಂದು ನಂಬಿದ್ದರು. ಅವರ ಆಶಯದಂತೆ ಅಂತರ್ಜಾತಿ ವಿವಾಹವಾಗುವ ಯುವ ದಂಪತಿಯನ್ನು ಬೆಂಬಲಿಸಬೇಕು. ಹಾಗೂ ಅವರಿಗೆ ಅಗತ್ಯವಿರುವ ನೆರವನ್ನು ನೀಡುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯವೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ಸಾಮಾಜಿಕ ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ, ಜಾನಪದ ಗಾಯಕ ಬಾನಂದೂರು ಕೆಂಪಯ್ಯ, ದಲಿತ ಮುಖಂಡ ವಿ.ನಾಗರಾಜ್, ವಕೀಲ ಅನಂತ್ ನಾಯಕ್, ರುದ್ರಪ್ಪ ಹನಗವಾಡಿ ಮತ್ತಿತರರು ಉಪಸ್ಥಿತರಿದ್ದರು.

ಜಾತಿ ನಿರ್ಮೂಲನೆಗೆ ಅಂತರ್ಜಾತಿ ವಿವಾಹವೊಂದೇ ಪರಿಹಾರ. ಹೀಗಾಗಿ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸು ವುದು ಪ್ರಜ್ಞಾವಂತ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಪ್ರೀತಿಸಿ ಮದುವೆಯಾಗಿರುವ ದಂಪತಿಗಳನ್ನು ಒಂದು ವೇದಿಕೆಗೆ ತರುವ ನಿಟ್ಟಿನಲ್ಲಿ ಮುಂದಿನ ಆಗಸ್ಟ್‌ನಲ್ಲಿ ರಾಷ್ಟ್ರಮಟ್ಟದ ಸಮ್ಮೇಳನ ನಡೆಸಲಾಗುವುದು.
-ಡಾ.ಎಂ.ವೆಂಕಟಸ್ವಾಮಿ, ರಾಜ್ಯಾಧ್ಯಕ್ಷ, ಸಮತಾ ಸೈನಿಕ ದಳ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X