Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಳಿಫಾರಂ ತೆರವಿಗೆ ಆಗ್ರಹಿಸಿ ಗ್ರಾಮಸ್ಥರ...

ಕೋಳಿಫಾರಂ ತೆರವಿಗೆ ಆಗ್ರಹಿಸಿ ಗ್ರಾಮಸ್ಥರ ಧರಣಿ

ಕ್ರಿಮಿಕೀಟಗಳ ಹಾವಳಿಯಿಂದ ದುಸ್ತರವಾಗಿರುವ ಗ್ರಾಮಸ್ಥರ ಬದುಕು

ವಾರ್ತಾಭಾರತಿವಾರ್ತಾಭಾರತಿ2 July 2016 11:17 PM IST
share

  ಶಿವಮೊಗ್ಗ, ಜು.2: ಶಿವಮೊಗ್ಗ ತಾಲೂಕಿನ ಕಡೇಕಲ್ ಗ್ರಾಪಂ ವ್ಯಾಪ್ತಿಯ ಯರಗನಾಳ್ ಗ್ರಾಮದಲ್ಲಿರುವ ಕೋಳಿಫಾರಂ ತೆರವುಗೊಳಿಸಬೇಕೆಂದು ಆಗ್ರಹಿಸಿ, ಶನಿವಾರ ನಗರದ ಜಿಪಂ ಕಚೇರಿ ಮುಂಭಾಗ ಧರಣಿ ನಡೆಸಿದ ಸ್ಥಳೀಯ ಗ್ರಾಮಸ್ಥರು ಜಿಪಂ ಉಪ ಕಾರ್ಯದರ್ಶಿಗಳಾದ ಕೆ.ಎಸ್.ಮಣಿ ಹಾಗೂ ಚಂದ್ರಶೇಖರ್‌ರವರಿಗೆ ಮನವಿ ಪತ್ರ ಅರ್ಪಿಸಿದರು. ಈ ಹಿಂದೆ ನಾಗರಿಕರ ವಿರೋಧದ ಹೊರತಾಗಿಯೂ ಕೋಳಿಫಾರಂ ಸ್ಥಾಪನೆಗೆ ಅವಕಾಶ ನೀಡಲಾಗಿತ್ತು. ಪ್ರಸ್ತುತ ಕೋಳಿಫಾರಂನಿಂದ ನೊಣ, ಇತರೆ ಕ್ರಿಮಿಕೀಟಗಳ ಹಾವಳಿ ವಿಪರೀತವಾಗಿದೆ. ಇದರಿಂದ ನಾನಾ ರೀತಿಯ ಅನಾರೋಗ್ಯ ಸಮಸ್ಯೆಗಳು ಗ್ರಾಮಸ್ಥರಲ್ಲಿ ಕಂಡುಬರುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ನೊಣ, ಕ್ರಿಮಿಕೀಟಗಳ ಹಾವಳಿಯಿಂದ ಜೀವನ ನಡೆಸುವುದೆ ದುಸ್ತರವಾಗಿ ಪರಿಣಮಿಸಿದೆ. ಮನೆಗಳಲ್ಲಿ ನೆಮ್ಮದಿಯಾಗಿ ಊಟ ಮಾಡುವುದಿರಲಿ, ನೀರು ಕೂಡ ಕುಡಿಯಲು ಆಗುತ್ತಿಲ್ಲ. ಎಲ್ಲೆಲ್ಲೂ ನೊಣಗಳ ಹಾವಳಿ ಕಂಡುಬರುತ್ತಿದೆ. ನಮ್ಮ ಗೋಳು ಆಲಿಸುವವರ್ಯಾರು ಇಲ್ಲವಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಕೋಳಿಫಾರಂ ತೆರವುಗೊಳಿಸುವಂತೆ ಹಲವು ಬಾರಿ ಜಿಪಂ ಆಡಳಿತಕ್ಕೆ ಮನವಿ ಅರ್ಪಿಸಲಾಗಿದೆ. ಆದರೆ ಇಲ್ಲಿಯವರೆಗೂ ಈ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ಜನರು ನಾನಾ ರೋಗಕ್ಕೆ ತುತ್ತಾಗುವಂತಹಗಿದ್ದು, ಜನರ ಜೀವದೊಂದಿಗೆ ಚೆಲ್ಲಾಟವಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ತತ್‌ಕ್ಷಣವೇ ಕೋಳಿಫಾರಂ ತೆರವುಗೊಳಿಸಲು ಆಡಳಿತ ವ್ಯವಸ್ಥೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಪಂ ಆಡಳಿತದ ವಿರುದ್ಧ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರ ಅಹವಾಲು ಆಲಿಸಿದ ನಂತರ ಉಪ ಕಾರ್ಯದರ್ಶಿಗಳಾದ ಕೆ.ಎಸ್.ಮಣಿ ಹಾಗೂ ಚಂದ್ರಶೇಖರ್‌ರವರು ಮಾತನಾಡಿ, ಈ ಹಿಂದೆ ಕೋಳಿಫಾರಂ ತೆರವಿಗೆ ಕ್ರಮಕೈಗೊಳ್ಳಲಾಗಿತ್ತು. ಆದರೆ ಸಂಬಂಧಿಸಿದವರು ನ್ಯಾಯಾಲಯಕ್ಕೆ ತೆರಳಿ ತಡೆಯಾಜ್ಞೆ ತಂದಿದ್ದಾರೆ. ಗ್ರಾಪಂ ಆಡಳಿತದಿಂದ ವಕೀಲರ ನೇಮಕ ಮಾಡಿ ತಡೆಯಾಜ್ಞೆ ತೆರವಿಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮನವಿ ಅರ್ಪಿಸುವ ಸಂದಭರ್ದಲ್ಲಿ ಮಾಜಿ ಜಿಪಂ ಸದಸ್ಯ ಪ್ರೇಂಕುಮಾರ್, ಕಡೇಕಲ್ಲು ಗ್ರಾಪಂ ಸದಸ್ಯ ಅಝೀಝ್ ಖಾನ್, ಉಪಾಧ್ಯಕ್ಷೆ ಸುಮಂಗಲಮ್ಮ, ಸ್ಥಳೀಯ ಮುಖಂಡರಾದ ಸುಶೀಲಮ್ಮ, ರವಿ, ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X