Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದನೆ ಪ್ರಾಯೋಜಕ ದೇಶಗಳನ್ನು...

ಭಯೋತ್ಪಾದನೆ ಪ್ರಾಯೋಜಕ ದೇಶಗಳನ್ನು ಉತ್ತರದಾಯಿಯನ್ನಾಗಿಸಬೇಕು: ಭಾರತ

ವಾರ್ತಾಭಾರತಿವಾರ್ತಾಭಾರತಿ2 July 2016 11:55 PM IST
share

ವಿಶ್ವಸಂಸ್ಥೆ, ಜು.2: ಭಯೋತ್ಪಾದಕ ದಾಳಿಗಳ ಪಿತೂರಿದಾರರು, ಅದರ ಪ್ರಾಯೋಜಕ ದೇಶಗಳು ಹಾಗೂ ಭಯೋತ್ಪಾದಕರಿಗೆ ಸುರಕ್ಷಿತ ನೆಲೆಯನ್ನು ಒದಗಿಸುವವರನ್ನು ಉತ್ತರದಾಯಿಗಳನ್ನಾಗಿಸಬೇಕೆಂದು ಭಾರತವು ವಿಶ್ವಸಂಸ್ಥೆಯಲ್ಲಿ ಆಗ್ರಹಿಸಿದೆ. ಅಂತಾರಾಷ್ಟ್ರೀಯ ಭಯೋತ್ಪಾದನೆಯ ಸಂಬಂಧ ಸಮಗ್ರ ಸನದನ್ನು (ಸಿಸಿಐಟಿ) ಶೀಘ್ರವೇ ಅಳವಡಿಸಬೇಕೆಂದು ಅದು ಕರೆ ನೀಡಿದೆ.

‘‘ನಾವೆಲ್ಲರೂ ಕಳವಳಿಸಲೇಬೇಕಾದ ಜಾಗತಿಕ ಸ್ವರೂಪದ ಎಲ್ಲ ರೀತಿಯ ಬೆದರಿಕೆಗಳಲ್ಲಿ ಭಯೋತ್ಪಾದನೆಯು ಅತ್ಯಂತ ಹೆಚ್ಚು ಗಂಭೀರ ವಿಷಯವಾಗಿದೆ. ಅದು ವಿಶ್ವಾದ್ಯಂತ ಅಮಾಯಕರ ಜೀವಗಳೊಂದಿಗೆ ಚೆಲ್ಲಾಟವಾಡುತ್ತಿದೆ’’ಎಂದು ಶುಕ್ರವಾರ ನಡೆದ ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದನೆ ನಿಗ್ರಹ ಕಾರ್ಯವ್ಯೆಹದ 5ನೆ ಪರಾಮರ್ಶೆಯಲ್ಲಿ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯ ಕೃತ್ಯಗಳನ್ನು ಸಮರ್ಥಿಸಲು ಯಾವುದೇ ನಂಬಿಕೆ, ಸಮರ್ಥನೆ, ರಾಜಕೀಯ ಕಾರಣ ಅಥವಾ ವಾದವನ್ನು ಉಪಯೋಗಿಸುವಂತಿಲ್ಲವೆಂಬ ಭಾರತದ ದೃಢ ತೀರ್ಮಾನವನ್ನು ಅವರು ಧ್ವನಿಸಿದ್ದಾರೆ.

ಭಯೋತ್ಪಾದಕ ದಾಳಿಗಳ ಪಿತೂರಿಗಾರರು, ಭಯೋತ್ಪಾದನೆಯನ್ನು ಪ್ರಾಯೋಜಿಸುವ ಬೆಂಬಲಿಸುವ ಅಥವಾ ಯೋತ್ಪಾದಕರಿಗೆ ಹಾಗೂ ಭಯೋತ್ಪಾದನಾ ಗುಂಪುಗಳಿಗೆ ಸುರಕ್ಷಿತ ನೆಲೆಯನ್ನು ಒದಗಿಸುವ ದೇಶಗಳನ್ನು ಉತ್ತರದಾಯಿಗಳನ್ನಾಗಿಸಲೇಬೇಕು. ಯಾವುದೇ ದೇಶವೂ ಒಬ್ಬಂಟಿಯಾಗಿ ಭಯೋತ್ಪಾದನೆಯ ಸವಾಲನ್ನು ಪರಿಹರಿಸುವುದು ಅಸಾಧ್ಯವೆಂದು ಅಕ್ಬರುದ್ದೀನ್ ತಿಳಿಸಿದ್ದಾರೆ.

ಯಾವುದೇ ದೇಶವೂ ಭಯೋತ್ಪಾದನಾ ಪ್ರತಿರೋಧಿಯಾಗಿರುವುದು ಸಾಧ್ಯವಿಲ್ಲ. ಅಂತಹ ಹೀನ ದಾಳಿಗಳ ಸಂತ್ರಸ್ತರೂ ಸಹ ಕೇವಲ ಒಂದು ರಾಷ್ಟ್ರ ಅಥವಾ ಜನಾಂಗ ಅಥವಾ ಮತಕ್ಕೆ ಸೇರಿದವರಾಗಿಲ್ಲವೆಂದು ಅವರು ಹೇಳಿದ್ದಾರೆ. 193 ಸದಸ್ಯರ ಸಾಮಾನ್ಯ ಸಭೆಯು ಜಾಗತಿಕ ಭಯೋತ್ಪಾದನೆ ನಿಗ್ರಹ ಕಾರ್ಯವ್ಯೆಹದ ತನ್ನ 5ನೆಯ ಪರಾಮರ್ಶೆಯನ್ನು ಮುಂದುವರಿಸಿದೆ ಹಾಗೂ ಈ ಪಿಡುಗನ್ನು ಮೂಲೋತ್ಪಾಟನೆ ಮಾಡುವಕೆಲಸವನ್ನು ತ್ವರಿತವಾಗಿ, ಸಾಮೂಹಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಮಾಡುವ ಪ್ರಯತ್ನವನ್ನು ದ್ವಿಗುಣಗೊಳಿಸುವ ಮಾರ್ಗಗಳ ಕುರಿತು ನಿರ್ಣಯವೊಂದನ್ನು ಅಂಗೀಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X