Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಡ್ಡದಲ್ಲಿ 50 ಅಡಿ ಆಳದ ಬಾವಿ...

ಗುಡ್ಡದಲ್ಲಿ 50 ಅಡಿ ಆಳದ ಬಾವಿ ನಿರ್ಮಿಸಿದ 60ರ ವೃದ್ಧೆ!

ವಾರ್ತಾಭಾರತಿವಾರ್ತಾಭಾರತಿ3 July 2016 1:41 PM IST
share
ಗುಡ್ಡದಲ್ಲಿ 50 ಅಡಿ ಆಳದ ಬಾವಿ ನಿರ್ಮಿಸಿದ 60ರ ವೃದ್ಧೆ!

ಕುಂದಾಪುರ, ಜು.3: ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಎಲ್ಲರೂ ಜನಪ್ರತಿನಿಧಿಗಳನ್ನು ಬೈಯ್ಯುವುದು, ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಒತ್ತಡ ಹೇರುವುದು ಸಾಮಾನ್ಯ. ಆದರೆ, ಕುಂದಾಪುರದಲ್ಲೊಬ್ಬರು 60ರ ವೃದ್ಧೆ ಗುಡ್ಡದ ತುದಿಯಲ್ಲಿ ಬಾವಿಯನ್ನು ತೋಡಿ ನೀರಿನ ಸಮಸ್ಯೆಗೆ ಮಂಗಳ ಹಾಡಿದ್ದಾರೆ. ಈ ಬಗ್ಗೆ ವಿಜಯಕರ್ನಾಟಕದಲ್ಲಿ ವರದಿಗಾರ ಜಾನ್ ಡಿಸೋಜ ವರದಿ ಮಾಡಿದ್ದಾರೆ.

ಇಲ್ಲಿನ ಅಂಪಾರು ಗ್ರಾಮದ ವಿವೇಕನಗರ ಕಾಲನಿ ನಿವಾಸಿ 60ರ ಹರೆಯದ ಲಕ್ಷ್ಮೀ ಪೂಜಾರ್ತಿ ಎಂಬವರೇ ಗುಡ್ಡದ ತುದಿಯಲ್ಲಿ 50 ಅಡಿ ಆಳದ ಬಾವಿ ತೋಡಿ ನೀರು ದಕ್ಕಿಸಿಕೊಂಡ ಸಾಹಸಿ. ಲಕ್ಷ್ಮೀ ಪೂಜಾರ್ತಿ ಅವರು ಸುಮಾರು 40 ವರ್ಷಗಳ ಹಿಂದೆ ವಿವೇಕನಗರದ ಕಾಲನಿಗೆ ಬಂದು ನೆಲೆಸಿದ್ದರು. ತಮ್ಮ ಮನೆಮಂದಿಯಿಂದ ದೂರವಾದ ಅವರು ಒಬ್ಬಂಟಿಯಾಗಿಯೇ ಮನೆಯಲ್ಲಿ ಜೀವಿಸುತ್ತಿದ್ದರು. ಆದರೆ ಅಲ್ಲಿ ಬೇಸಿಗೆ ಬಂತೆಂದರೆ ಸಾಕು, ಹನಿ ನೀರಿಗೂ ತತ್ವಾರವಿತ್ತು. ಇಂತಹ ಸಂದರ್ಭದಲ್ಲಿ ಇವರ ಪಾಲಿಗೆ ವರವಾದದ್ದು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ.

ಯೋಜನೆಯ ಕೃಷಿ ಕಾರ್ಮಿಕರಾಗಿ ನೋಂದಣಿಯಾಗಿರುವ ಲಕ್ಷ್ಮೀ ಪೂಜಾರ್ತಿಯವರು ವೈಯಕ್ತಿಕ ಕಾಮಗಾರಿಯಡಿ ಬಾವಿ ನಿರ್ಮಿಸುವ ಬೇಡಿಕೆಯನ್ನು ಆಡಳಿತ ವರ್ಗದ ಎದುರು ಇರಿಸಿದ್ದರು. ಆಡಳಿತದಿಂದ ಹಸಿರು ನಿಶಾನೆ ಪಡೆದುಕೊಂಡ ಅವರು, ತನ್ನಲ್ಲಿದ್ದ 40 ಸಾವಿರ ರೂ. ಇಟ್ಟುಕೊಂಡು ಬಾವಿ ತೋಡುವ ಕೆಲಸ ಆರಂಭಿಸಿದರು. ಆಗ ನರೇಗಾ ಯೋಜನೆಯ ಸಹೋದ್ಯೋಗಿ ಕಾರ್ಮಿಕರೂ ಇವರಿಗೆ ಸಾಥ್ ನೀಡಿದರು. ಮಹಿಳಾ ಕಾರ್ಮಿಕರೇ ಸೇರಿಕೊಂಡು ಬಾವಿ ತೋಡುವ ಕೆಲಸ ಮುಂದುವರೆಸಿದರು. ಎಲ್ಲಾ ಕಾರ್ಮಿಕರ ಪ್ರಯತ್ನದ ಫಲವಾಗಿ ಮನೆಯಂಗಳದಲ್ಲಿ 50 ಅಡಿ ಆಳದ, ಹೇರಳ ನೀರು ಇರುವ ಬಾವಿ ನಿರ್ಮಾಣಗೊಂಡಿತು.

ನೀರು ಲಭಿಸಿದುದನ್ನು ಕಂಡು ಪಂಚಾಯತ್ ಆಡಳಿತ ಇನ್ನಷ್ಟು ಪ್ರೋತ್ಸಾಹ ನೀಡಿತು. ಬಾವಿಗೆ ರಿಂಗ್ ಅಳವಡಿಕೆಗಾಗಿ 80 ಸಾವಿರ ರೂ. ಸಹಾಯಧನ ಕೂಡಾ ನೀಡಿತು. ಪಂಚಾಯತ್‌ನ ಸಹಕಾರ ಮತ್ತು ಲಕ್ಷ್ಮೀ ಪೂಜಾರ್ತಿಯವರ ಛಲದ ಫಲವಾಗಿ ಬರ ಪೀಡಿತ ಗುಡ್ಡದಲ್ಲಿ ಹೇರಳವಾಗಿ ನೀರಿರುವ ಬಾವಿಯೊಂದು ನಿರ್ಮಾಣವಾಗಿದೆ. ಇದೀಗ ಬಾವಿಯಲ್ಲಿ ನೀರು ತುಂಬಿದ್ದು, ರಾಟೆಯಿಲ್ಲದೆ, ಕೈಯಿಂದಲೇ ಕೊಡಪಾನದ ಮೂಲಕ ನೀರು ಮೇಲೆತ್ತಬಹುದಾಗಿದೆ.

ನನಗೆ ನನ್ನವರು ಎಂದು ಯಾರೂ ಇಲ್ಲ. ವೃದ್ಧಾಪ್ಯ ವೇತನ 500 ರೂ. ಸಿಗುತ್ತಿದೆ. ನಾನು ಶಾಲೆಯ ಮೆಟ್ಟಿಲು ಹತ್ತಿಲ್ಲ. ಬದುಕಿನ ಅನುಭವಗಳೇ ನನಗೆ ಪಾಠಶಾಲೆ ಎನ್ನುವ ಲಕ್ಷ್ಮೀ ಪೂಜಾರ್ತಿ ಅವರು ಇಳಿವಯಸ್ಸಿನಲ್ಲೂ ಮಾಡಿರುವ ಕೆಲಸ ಎಲ್ಲರಿಗೂ ಮಾದರಿಯಾಗಿದೆ.

ಚಿತ್ರ: ಐಶ್ವರ್ಯ ಬೀಜಾಡಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X