Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಮ್ಮೆಯಿಂದ ಬೀಗುತ್ತಿರುವ ಬ್ರಹ್ಮಪುರ

ಹೆಮ್ಮೆಯಿಂದ ಬೀಗುತ್ತಿರುವ ಬ್ರಹ್ಮಪುರ

ತೇಜಸ್ ಯಶಸ್ಸು

ವಾರ್ತಾಭಾರತಿವಾರ್ತಾಭಾರತಿ4 July 2016 12:03 AM IST
share
ಹೆಮ್ಮೆಯಿಂದ ಬೀಗುತ್ತಿರುವ ಬ್ರಹ್ಮಪುರ

ಬ್ರಹ್ಮಪುರ(ಒಡಿಶಾ),ಜು.3: ಭಾರತೀಯ ವಾಯುಪಡೆಯಲ್ಲಿ ದೇಶಿ ನಿರ್ಮಿತ ಲಘು ಯುದ್ಧವಿಮಾನ ‘ತೇಜಸ್’ನ ಸೇರ್ಪಡೆ ಒಡಿಶಾದ ಜನರಿಗೆ ವಿಶೇಷ ಸಂಭ್ರಮವನ್ನು ತಂದಿದೆ. ತೇಜಸ್‌ನ ಮುಖ್ಯ ವಿನ್ಯಾಸಕ ಕೋಟಾ ಹರಿನಾರಾಯಣ ಅವರು ಮೂಲತಃ ಬ್ರಹ್ಮಪುರದವರಾಗಿದ್ದಾರೆ.

ತೇಜಸ್ ಅನ್ನು ವಿನ್ಯಾಸಗೊಳಿಸಲು ನಾವು ಎರಡು ದಶಕಗಳಿಗೂ ಅಧಿಕ ಕಾಲ ಶ್ರಮಿಸಿದ್ದೆವು. ನಮ್ಮ ಕಠಿಣ ದುಡಿಮೆ ಕೊನೆಗೂ ಫಲ ನೀಡಿದೆ. ತೇಜಸ್ ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ವಾಯುಪಡೆಯು ಅದನ್ನು ಸಂಪೂರ್ಣವಾಗಿ ಬಳಸಿಕೊಂಡರೆ ನನಗೆ ನಿಜಕ್ಕೂ ಖುಷಿಯಾಗಲಿದೆ ಎಂದು ಬೆಂಗಳೂರಿನಿಂದ ದೂರವಾಣಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಹರಿನಾರಾಯಣ ಹೇಳಿದರು.ಸದಿಂದ ಆಗಸಕ್ಕೆ ಮತ್ತು ಆಗಸದಿಂದ ಭೂಮಿಗೆ ಚಿಮ್ಮುವ ಕ್ಷಿಪಣಿಗಳು ಮತ್ತು ಹಡಗು ನಿಗ್ರಹ ಕ್ಷಿಪಣಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ತೇಜಸ್ ಹೊಂದಿದೆ. ಗೋಚರ ವ್ಯಾಪ್ತಿಯನ್ನೂ ಮೀರಿ ಶತ್ರುವಿಮಾನವನ್ನು ಅದು ಪತ್ತೆ ಹಚ್ಚಬಲ್ಲುದು ಮತ್ತು ಗಡಿಯಾಚೆ ಸೇನಾ ಕಾರ್ಯಾಚರಣೆಯನ್ನು ಬೆಂಬಲಿಸಬಲ್ಲುದು ಎಂದರು.

ತೇಜಸ್ ಚೀನಾ ಮತ್ತು ಪಾಕಿಸ್ತಾನಗಳಂತಹ ಇತರ ರಾಷ್ಟ್ರಗಳ ಯಾವುದೇ ಯುದ್ಧವಿಮಾನಕ್ಕಿಂತ ಉತ್ತಮವಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅದನ್ನು ರೂಪಿಸಲಾಗಿದೆ. ಖರಗಪುರ, ಕಾನಪುರ ಮತ್ತು ಬಾಂಬೆ ಐಐಟಿಗಳಂತಹ ಸುಮಾರು 20 ಶಿಕ್ಷಣ ಸಂಸ್ಥೆಗಳು, 40 ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು ಮತ್ತು 500ಕ್ಕೂ ಅಧಿಕ ಇಂಜಿನಿಯರ್‌ಗಳು ದೇಶಿಯ ವಿಮಾನವನ್ನು ಅಭಿವೃದ್ಧಿಗೊಳಿಸಲು ವರ್ಷಗಳ ಕಾಲ ಶ್ರಮಿಸಿದ್ದಾರೆ. ಹೆಚ್ಚಿನ ಬಿಡಿಭಾಗಗಳನ್ನು ಭಾರತದಲ್ಲಿಯೇ ತಯಾರಿಸಲಾಗಿದ್ದು, ಕೆಲವೇ ಬಿಡಿಭಾಗಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದರು. ಹರಿನಾರಾಯಣ ಈಗ ಬೆಂಗಳೂರಿನಲ್ಲಿ ವಾಸವಾಗಿದ್ದರೂ ಹುಟ್ಟೂರು ಬ್ರಹ್ಮಪುರಕ್ಕೆ ಆಗಾಗ್ಗೆ ಭೇಟಿ ನೀಡುತ್ತಿರುತ್ತಾರೆ.

ಲೈಂಗಿಕ ಕಿರುಕುಳ ದೂರುಜೆಎನ್‌ಯು ವಿದ್ಯಾರ್ಥಿನಿಯ ಅಮಾನತಿಗೆ ಹೈಕೋರ್ಟ್ ತಡೆಹೊಸದಿಲ್ಲಿ, ಜು.3: ಹಾಸ್ಟೆಲ್ ವಾರ್ಡನ್ ಒಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳ ಅಮಾನತಿಗೆ ದಿಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿರ್ಣಯ ಕೈಗೊಳ್ಳುವ ವೇಳೆ ವಿಶ್ವವಿದ್ಯಾನಿಲಯವು ನಿಗದಿತ ಪ್ರಕ್ರಿಯೆಯನ್ನು ಅನುಕರಿಸಿಲ್ಲವೆಂದು ಅದು ಹೇಳಿದೆ.

ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲು ವಿದ್ಯಾರ್ಥಿನಿಗೆ ವಿವಿ ಸಾಕಷ್ಟು ಕಾಲಾವಕಾಶ ನೀಡಿಲ್ಲ. ಆದೇಶವನ್ನು ವಿಚಾರಣೆ ನಡೆಸದೆಯೇ ನೀಡಿರುವಂತೆ ತೋರುತ್ತಿದೆ ಎಂದಿರುವ ನ್ಯಾಯಮೂರ್ತಿ ಸಂಜೀವ ಸಚ್‌ದೇವ್, ವಿದ್ಯಾರ್ಥಿನಿಯನ್ನು ಒಂದು ಸೆಮಿಸ್ಟರ್‌ಗೆ ಅಮಾನತುಗೊಳಿಸುವ ವಿವಿಯ ಮೇ 30ರ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಜಾಗೃತಿ ಸಮಿತಿಯ (ಜಿಎಸ್‌ಸಿಎಎಸ್‌ಎಚ್) ವರದಿಯೊಂದರ ಪ್ರಕಾರ ವಿದ್ಯಾರ್ಥಿನಿಯನ್ನು ಒಂದು ಸೆಮಿಸ್ಟರ್‌ಗೆ ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆಕೆ ವಾರ್ಡನ್ ವಿರುದ್ಧ ನೀಡಿರುವ ದೂರು ಸುಳ್ಳೆಂದು ಸಮಿತಿ ವರದಿ ನೀಡಿತ್ತು. ನ್ಯಾಯಾಲಯವು ವಿದ್ಯಾರ್ಥಿನಿಯ ಮನವಿಯ ಮೇರೆಗೆ ವಿವಿಗೆ ನೋಟಿಸ್ ಜಾರಿಗೊಳಿಸಿದ್ದು, ಉತ್ತರಿಸುವಂತೆ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X