Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ : ಅವಶೇಷಗಳ ಅಡಿಯಿಂದ ಎರಡು...

ಉತ್ತರಾಖಂಡ : ಅವಶೇಷಗಳ ಅಡಿಯಿಂದ ಎರಡು ದಿನಗಳ ಬಳಿಕ ಜೀವಂತ ಬಂದ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ4 July 2016 9:14 AM IST
share
ಉತ್ತರಾಖಂಡ : ಅವಶೇಷಗಳ ಅಡಿಯಿಂದ ಎರಡು ದಿನಗಳ ಬಳಿಕ ಜೀವಂತ ಬಂದ ಮಹಿಳೆ!

ಡೆಹ್ರಾಡೂನ್, ಜು.4: ಉತ್ತರಾಖಂಡದ ಪಿಥೋರ್ಗಢ ಜಿಲ್ಲೆಯಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ ಆಗಿರುವ ಅನಾಹುತಗಳ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಎರಡು ದಿನಗಳ ಕಾಲ ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯೊಬ್ಬರನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ಅಸ್ಸಾಂ ರೈಫಲ್ ರೆಜಿಮೆಂಟ್ ನ ಯೋಧರು ಯಶಸ್ವಿಯಾಗಿದ್ದಾರೆ.

"ಈ ಮಹಿಳೆ ಪಿಥೋರ್ಗಢ ಜಿಲ್ಲೆಯ ಬಸ್ತದಿ ಗ್ರಾಮದಲ್ಲಿ ಕುಸಿದು ಬಿದ್ದ ಮನೆಯೊಂದರ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದರು. ಪರಿಹಾರ ಕಾರ್ಯಾಚರಣೆ ಬಳಿಕ ಸೇನೆಯ ಯೋಧರು ಆಕೆಯನ್ನು ಸುರಕ್ಷಿತವಾಗಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ" ಎಂದು ಜಿಲ್ಲಾ ನಿರ್ವಹಣಾಧಿಕಾರಿ ಆರ್.ಎಸ್.ರಾಣಾ ಪ್ರಕಟಿಸಿದರು. ಈ ವೃದ್ಧ ಮಹಿಳೆಯನ್ನು ಪತ್ತೆ ಮಾಡುವ, ಹೊರತೆಗೆಯುವ ಕಾರ್ಯಾಚರಣೆ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ವತ್ರ ಮೆಚ್ಚುಗೆ ವ್ಯಕ್ತವಾಗಿದೆ. ಸುಮಾರು 2.13 ಲಕ್ಷ ಮಂದಿ ಫೇಸ್ಬುಕ್ ನಲ್ಲಿ ಈ ವಿಡಿಯೊ ವೀಕ್ಷಿಸಿದ್ದಾರೆ.

ಈ ಮಧ್ಯೆ ರಾಷ್ಟ್ರೀಯ ವಿಕೋಪ ಸ್ಪಂದನೆ ಪಡೆ, ರಾಜ್ಯ ವಿಕೋಪ ಸ್ಪಂದನೆ ಪಡೆ, ಇಂಡೋ- ಟಿಬೇಟಿಯನ್ ಪೊಲೀಸ್ ಪಡೆ, ಸೀಮಾ ಸುರಕ್ಷಾ ಬಲ್ ಹಾಗೂ ಭಾರತೀಯ ಸೇನೆ ಸಮರೋಪಾದಿ ಕಾರ್ಯಾಚರಣೆ ಮುಂದುವರಿಸಿವೆ. ಪಿಥೋರ್ಗಢ ಹಾಗೂ ಚಮೋಲಿ ಜಿಲ್ಲೆಯಲ್ಲಿ ಭಾನುವಾರವಿಡೀ ಪರಿಹಾರ ಕಾರ್ಯಾಚರಣೆ ನಡೆಯಿತು. ರಾಜ್ಯ ವಿಕೋಪ ಸ್ಪಂದನೆ ಪಡೆಯ ಪ್ರಕಾರ, ಈ ದುರಂತದಲ್ಲಿ ಇದುವರೆಗೆ ಪಿಥೋರ್ಗಢ ಜಿಲ್ಲೆಯಲ್ಲಿ 15 ಮಂದಿ ಸಾವಿಗೀಡಗಿದ್ದಾರೆ. ಚಮೋಲಿ ಜಿಲ್ಲೆಯ ಘಾಟಿಯ ಬಳಿ ಮೂವರ ಶವ ಪತ್ತೆಯಾಗಿದೆ. ಇನ್ನೂ ಸುಮಾರು 17 ಮಂದಿ ನಾಪತ್ತೆಯಾಗಿದ್ದಾರೆ.
ಡೆಹ್ರಾಡೂನಲ್ಲಿ, ವಿಕೋಪ ನಿರ್ವಹಣೆ ವಿಭಾಗದ ಕಾರ್ಯದರ್ಶಿಯಾಗಿರುವ ಶೈಲೇಶ್ ಬಗೋಲಿ ಮಾಧ್ಯಮಗಳಿಗೆ ವಿವರ ನೀಡಿ, ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ವಿಮಾನದ ಮೂಲಕ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಒಯ್ಯಲಾಗಿದೆ ಎಂದು ಹೇಳಿದ್ದಾರೆ. ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ 160ಕ್ಕೂ ಹೆಚ್ಚು ಕುಟುಂಬಗಳಿಗೆ ಪರಿಹಾರ ಶಿಬಿರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 164 ಜಾನುವಾರುಗಳು ಕೂಡಾ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಮಂದಿಯನ್ನು ಪತ್ತೆ ಮಾಡುವ ಸಲುವಾಗಿ ಕರೆತಂದಿದ್ದ ಒಂದು ಶ್ವಾನದಳ ಕೂಡಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಜುಲೈ ಒಂದರಂದು ಬಿದ್ದ ಕುಂಭದ್ರೋಣ ಮಳೆಯಿಂದ ಸುಮಾರು 969 ಗ್ರಾಮಗಳು ಹಾನಿಗೀಡಾಗಿದ್ದು, 333 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಮರು ಕಲ್ಪಿಸಲಾಗಿದ್ದು, 646 ಗ್ರಾಮಗಳು ಇನ್ನೂ ಕತ್ತಲಲ್ಲೇ ಇವೆ. 79 ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾನಿಗೀಡಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X