Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ : ಸುಶ್ಮಾ ಬಿಜೆಪಿಯ...

ಉತ್ತರ ಪ್ರದೇಶ : ಸುಶ್ಮಾ ಬಿಜೆಪಿಯ ಅಚ್ಚರಿಯ ಸಿಎಂ ಅಭ್ಯರ್ಥಿ ?

ವಾರ್ತಾಭಾರತಿವಾರ್ತಾಭಾರತಿ4 July 2016 4:57 PM IST
share
ಉತ್ತರ ಪ್ರದೇಶ : ಸುಶ್ಮಾ ಬಿಜೆಪಿಯ ಅಚ್ಚರಿಯ ಸಿಎಂ ಅಭ್ಯರ್ಥಿ ?

ಹೊಸದಿಲ್ಲಿ, ಜು. 4: ಮುಂದಿನ ವರ್ಷದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈವರೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದೆ ಲೆಕ್ಕಾಚಾರದಲ್ಲಿ ತೊಡಗಿರುವ ಬಿಜೆಪಿ ಕೊನೆಗೆ ತನ್ನ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯಗಳಲ್ಲಿ ವದಂತಿ ಹರಡಿದೆ. ಈ ಅಚ್ಚರಿಯ ಅಭ್ಯರ್ಥಿ ಬೇರೆ ಯಾರೂ ಅಲ್ಲ, ಪಕ್ಷದ ಅತ್ಯಂತ ಹಿರಿಯ ಮಹಿಳಾ ನಾಯಕಿ, ಬಿಜೆಪಿಯಲ್ಲಿ ಎಲ್ಲರ ಸಮಾನ ಗೌರವಕ್ಕೆ ಪಾತ್ರವಾಗಿರುವ ಹಾಲಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ! 

ಉತ್ತರ ಪ್ರದೇಶ ಮೋದಿ ಹಾಗೂ ಅಮಿತ್ ಶಾ ಪಾಲಿಗೆ ಅತ್ಯಂತ ಮಹತ್ವದ ರಾಜ್ಯ. ಕಳೆದ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ 72 ಸ್ಥಾನಗಳನ್ನು ಗೆದ್ದ ದೇಶದ ಬಹುದೊಡ್ಡ ರಾಜ್ಯದಲ್ಲಿ ಸರಕಾರ ರಚಿಸುವುದು ಬಿಜೆಪಿಯ ಈ ನಂಬರ್ ಒನ್ ಜೋಡಿಯ ಪಾಲಿಗೆ ಎಲ್ಲಕ್ಕಿಂತ ಮುಖ್ಯವಾಗಿದೆ. ರಾಜ್ಯದಲ್ಲಿ ಎಸ್ಪಿ  ಹಾಗೂ ಬಿಎಸ್ಪಿ ಯಂತಹ ಪ್ರಬಲ ಪಕ್ಷಗಳ ಸವಾಲಿದೆ. ಜೊತೆಗೆ ನೆಲಕಚ್ಚಿರುವ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಮೂಲಕ ಅಚ್ಚರಿಯ ರಣತಂತ್ರ ರೂಪಿಸುವಲ್ಲಿ ನಿರತವಾಗಿದೆ. ಅದರ ಭಾಗವಾಗಿ ಪ್ರಿಯಾಂಕಾ ಗಾಂಧಿಯನ್ನು ಪ್ರಚಾರಕ್ಕೆ ಇಳಿಸುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ಬಿಜೆಪಿ ಎಲ್ಲರಿಗೂ ಸ್ವೀಕಾರಾರ್ಹ ಹಾಗೂ ಜನಪ್ರಿಯ ಮಹಿಳಾ ಮುಖವನ್ನೇ ಕಣಕ್ಕಿಳಿಸಿ ಉಳಿದ ಪಕ್ಷಗಳಿಗೆ ಶಾಕ್ ನೀಡಲಿದೆ ಎಂದು ಹೇಳಲಾಗಿದೆ. 

ಹರ್ಯಾಣ ಮೂಲದ ಈಗ ಮಧ್ಯ ಪ್ರದೇಶದಿಂದ ಸಂಸದರಾಗಿ ಆಯ್ಕೆಯಾಗಿ ವಿದೇಶಾಂಗ ಸಚಿವೆಯಾಗಿರುವ ಸುಶ್ಮಾ ಮೋದಿ ಸಂಪುಟದಲ್ಲಿ ಟಾಪರ್ ಆಗಿದ್ದಾರೆ. ಜೊತೆಗೆ ಬಿಜೆಪಿಯಲ್ಲಿ ಅವರಿಗೆ ದೇಶಾದ್ಯಂತ ಎಲ್ಲ ನಾಯಕರ ಬೆಂಬಲ, ವಿಶ್ವಾಸ ಇದೆ. ಇನ್ನು ಉತ್ತರ ಪ್ರದೇಶದಲ್ಲಿ ಸಿಎಂ ಅಭ್ಯರ್ಥಿಯಾಗಲು ಸ್ಪರ್ಧಿಸುತ್ತಿರುವ ಸ್ಮೃತಿ ಇರಾನಿ, ವರುಣ್ ಗಾಂಧಿ, ಆದಿತ್ಯನಾಥ್  ಮತ್ತಿತರರಿಗೆ ಹೋಲಿಸಿದರೆ ಸುಶ್ಮಾ ಅವರ ವರ್ಚಸ್ಸು ಬಹುದೊಡ್ಡದು. ಅವರನ್ನು ಈ ಹುದ್ದೆಗೆ ಪಕ್ಷದಲ್ಲಿ ವಿರೋಧಿಸುವವರೂ ಕಡಿಮೆ . ಸಂಘಪರಿವಾರವೂ ಅವರಿಗೆ ಬೆಂಬಲ ನೀಡುತ್ತದೆ.  ಹಾಗಾಗಿ  ಈ ಪ್ರಯತ್ನಕ್ಕೆ ಮೋದಿ - ಶಾ ಜೋಡಿ ಕೈ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಸದ್ಯಕ್ಕೆ ಇದು ಕೇವಲ ವದಂತಿ  ಮಾತ್ರ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X