Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಚೀನಾಕ್ಕೆ ಅಪಖ್ಯಾತಿ ತರಬಾರದು :...

ಭಾರತ ಚೀನಾಕ್ಕೆ ಅಪಖ್ಯಾತಿ ತರಬಾರದು : ಸರಕಾರಿ ಒಡೆತನದ ‘ಗ್ಲೋಬಲ್ ಟೈಮ್ಸ್’ ಸಂಪಾದಕೀಯ

ವಾರ್ತಾಭಾರತಿವಾರ್ತಾಭಾರತಿ4 July 2016 5:59 PM IST
share
ಭಾರತ ಚೀನಾಕ್ಕೆ ಅಪಖ್ಯಾತಿ ತರಬಾರದು : ಸರಕಾರಿ ಒಡೆತನದ ‘ಗ್ಲೋಬಲ್ ಟೈಮ್ಸ್’ ಸಂಪಾದಕೀಯ

ಬೀಜಿಂಗ್, ಜು. 4: ಭಾರತದ ಎನ್‌ಎಸ್‌ಜಿ ಸದಸ್ಯತ್ವವನ್ನು ತಡೆಹಿಡಿದಿರುವುದಕ್ಕಾಗಿ ಚೀನಾ ವ್ಯಾಪಕವಾಗಿ ದೂಷಣೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅಲ್ಲಿನ ಸರಕಾರಿ ಮಾಧ್ಯಮ ಭಾರತದ ವಿರುದ್ಧದ ಟೀಕಾಪ್ರಹಾರವನ್ನು ಮುಂದುವರಿಸಿದೆ. ಎನ್‌ಎಸ್‌ಜಿಗೆ ಸೇರ್ಪಡೆ ವಿಷಯದಲ್ಲಿ ಚೀನಾದ ನಿಲುವಿಗೆ ಭಾರತ ತಪ್ಪು ವಿವರಣೆ ನೀಡಬಾರದು ಹಾಗೂ ಚೀನಾಕ್ಕೆ ಅಪಖ್ಯಾತಿ ತರಬಾರದು ಎಂದು ಅದು ಹೇಳಿದೆ.

‘‘ಚೀನಾದ ನಿಲುವಿಗೆ ತಪ್ಪು ವ್ಯಾಖ್ಯಾನ ನೀಡಿ ಅದಕ್ಕೆ ಅಪಖ್ಯಾತಿ ತರುವ ಬದಲು, ಅಂತಾರಾಷ್ಟ್ರೀಯ ನಂಬಿಕೆಯನ್ನು ಗಳಿಸುವ ನಿಟ್ಟಿನಲ್ಲಿ ಭಾರತ ಪ್ರಯತ್ನಗಳನ್ನು ನಡೆಸಿದ್ದರೆ ಒಳ್ಳೆಯದಿತ್ತು’’ ಎಂದು ಚೀನಾದ ಸರಕಾರಿ ಒಡೆತನದ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ಇಂದಿನ ಸಂಪಾದಕೀಯದಲ್ಲಿ ಹೇಳಿದೆ.

ಭಾರತೀಯ ಜನತೆ ಮತ್ತು ಭಾರತೀಯ ಮಾಧ್ಯಮಗಳೆರಡೂ ತಪ್ಪಿತಸ್ಥರು ಎಂದು ಸಂಪಾದಕೀಯ ಹೇಳಿದೆ. ಕಳೆದ ವಾರ ಇನ್ನೊಂದು ಸಂಪಾದಕೀಯದಲ್ಲೂ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿತ್ತು.

ಅದಕ್ಕಿಂತಲೂ ಮೊದಲು, ಸಿಯೋಲ್‌ನಲ್ಲಿ ನಡೆದ ಎನ್‌ಎಸ್‌ಜಿ ಪೂರ್ಣಾಧಿವೇಶನಕ್ಕೆ ಪೂರ್ವಭಾವಿಯಾಗಿ, ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವವನ್ನು ನೀಡುವುದನ್ನು ಚೀನಾ ಯಾಕೆ ವಿರೋಧಿಸುತ್ತದೆ ಎಂಬ ಬಗ್ಗೆ ‘ಗ್ಲೋಬಲ್ ಟೈಮ್ಸ್’ ಪುಟಗಟ್ಟಳೆ ಬರೆದಿತ್ತು. ಭಾರತ ಎನ್‌ಎಸ್‌ಜಿಗಾಗಿ ಹಾತೊರೆಯುತ್ತಿದೆ ಎಂಬ ಅಭ್ಪಿಪ್ರಾಯವನ್ನು ಅದು ಈಗಲೂ ಹೊಂದಿದೆ.

‘‘ಸಿಯೋಲ್ ಪೂರ್ಣಾಧಿವೇಶನದಲ್ಲಿ ಪರಮಾಣು ಪೂರೈಕೆದಾರರ ಗುಂಪಿ (ಎನ್‌ಎಸ್‌ಜಿ)ನ ಸದಸ್ಯತ್ವ ಕೈತಪ್ಪಿರುವುದನ್ನು ಅರಗಿಸಿಕೊಳ್ಳಲು ಭಾರತೀಯರಿಗೆ ಸಾಧ್ಯವಾಗುತ್ತಿಲ್ಲ ಅನಿಸುತ್ತಿದೆ. ಹೆಚ್ಚಿನ ಭಾರತೀಯ ಮಾಧ್ಯಮಗಳು ಇದರ ಹೊಣೆಯನ್ನು ಚೀನಾದ ಮೇಲೆ ಹೊರಿಸಿವೆ ಹಾಗೂ ಚೀನಾದ ವಿರೋಧಕ್ಕೆ ಅದರ ಭಾರತ ವಿರೋಧಿ ಮತ್ತು ಪಾಕಿಸ್ತಾನ ಪರ ಧೋರಣೆ ಕಾರಣ ಎಂದು ಆರೋಪಿಸುತ್ತಿವೆ’’ ಎಂದು ಪತ್ರಿಕೆಯ ಸಂಪಾದಕೀಯ ಹೇಳಿದೆ.

   ಕಳೆದ ವಾರ ಇದೇ ಪತ್ರಿಕೆಯು ಇಂಥದೇ ಸಂಪಾದಕೀಯವೊಂದನ್ನು ಪ್ರಕಟಿಸಿತ್ತು. ‘‘ಹೇಗೆ ವರ್ತಿಸಬೇಕು ಎನ್ನುವುದನ್ನು ಭಾರತೀಯ ರಾಷ್ಟ್ರೀಯವಾದಿಗಳು ಕಲಿಯಬೇಕು. ತಮ್ಮದು ಪ್ರಬಲ ದೇಶವಾಗಬೇಕು ಎಂಬುದಾಗಿ ಭಾರತೀಯರು ಬಯಸುತ್ತಾರೆ. ಆದರೆ, ಪ್ರಬಲ ದೇಶಗಳು ತಮ್ಮ ಆಟವನ್ನು ಹೇಗೆ ಆಡುತ್ತವೆ ಎಂಬುದನ್ನು ಅವರು ತಿಳಿಯಬೇಕು’’ ಎಂದು ಹಿಂದಿನ ಸಂಪಾದಕೀಯದಲ್ಲಿ ಪತ್ರಿಕೆ ಹೇಳಿತ್ತು. ಅದೂ ಅಲ್ಲದೆ, ಭಾರತೀಯರು ಸ್ವಾರ್ಥಿಗಳು ಮತ್ತು ತಮ್ಮದೇ ಸರಿಯೆಂದು ಹೇಳುವವರು ಎಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X